<p><strong>ತಿರುವನಂತಪುರ</strong>: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಚಿನ್ನ ನಾಪತ್ತೆಯಾಗಿರುವ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್ಐಟಿ) ದೇವಸ್ಥಾನದ ಪ್ರಧಾನ ಅರ್ಚಕ ಕಂಡರಾರು ರಾಜೀವಾರು ಅವರನ್ನು ಶುಕ್ರವಾರ ಇಲ್ಲಿ ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.</p>.<p>ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. </p>.<p>ದೇವಸ್ಥಾನದ ಸಂಪೂರ್ಣ ಧಾರ್ಮಿಕ ಅಧಿಕಾರ ಹೊಂದಿದ್ದ ರಾಜೀವಾರು ಅವರನ್ನು ಗೋಪ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಯಿತು. ಬಳಿಕ ಎಸ್ಐಟಿ ಕಚೇರಿಗೆ ಕರೆದೊಯ್ದು, ಬಂಧಿಸಲಾಯಿತು ಎಂದು ಹೇಳಿವೆ. </p>.<p>ಪ್ರಕರಣದ ಪ್ರಮುಖ ಆರೋಪಿ, ಬೆಂಗಳೂರಿನ ಉದ್ಯಮಿ ಉಣ್ಣಿಕೃಷ್ಣನ್ ಪೋಟಿ ಮತ್ತು ತಿರುವಾಂಕೂರು ದೇವಸ್ವ ಮಂಡಳಿಯ ಮಾಜಿ ಅಧ್ಯಕ್ಷ ಎ. ಪದ್ಮಕುಮಾರ್ ನೀಡಿದ ಹೇಳಿಕೆಗೆಳ ಆಧಾರದ ಮೇಲೆ ರಾಜೀವಾರು ಅವರನ್ನು ಬಂಧಿಸಲಾಗಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ರಾಜೀವಾರು ಹಾಗೂ ಉಣ್ಣಿಕೃಷ್ಣನ್ ಸಂಪರ್ಕದಲ್ಲಿದ್ದರು. ದೇವಾಲಯದ ಶ್ರೀಕೋವಿಲ್ನ (ಗರ್ಭಗುಡಿ) ಬಾಗಿಲಿನ ಚಿನ್ನ ಲೇಪಿತ ಚೌಕಟ್ಟು ಹಾಗೂ ದ್ವಾರಪಾಲಕರ ಚಿನ್ನ ಲೇಪಿತ ಪ್ರತಿಮೆಗಳನ್ನು ಸ್ಮಾರ್ಟ್ ಕ್ರಿಯೇಷನ್ಸ್ನಲ್ಲಿ ಎಲೆಕ್ಟ್ರೋಪ್ಲೇಟಿಂಗ್ ಮಾಡುವಂತೆ ರಾಜೀವಾರು ಉಣ್ಣಿಕೃಷ್ಣನ್ ಅವರಿಗೆ ಹೇಳಿದ್ದರು ಎಂಬುದು ತನಿಖೆ ವೇಳೆಗೆ ತಿಳಿದುಬಂದಿದೆ. </p>.<p>ತನಿಖೆಯ ಭಾಗವಾಗಿ ಈ ಹಿಂದೆ ರಾಜೀವಾರು ಅವರನ್ನು ಒಮ್ಮೆ ಎಸ್ಐಟಿ ವಿಚಾರಣೆಗೊಳಪಡಿಸಿತ್ತು. ಪ್ರಕರಣದ ತನಿಖೆ ನಡೆಸಲು ಕೇರಳ ಹೈಕೋರ್ಟ್ ಎಸ್ಐಟಿಯನ್ನು ರಚಿಸಿದೆ. </p>.<p><strong>ಪ್ರಕರಣ ದಾಖಲಿಸಿದ ಇ.ಡಿ: </strong>ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಚಿನ್ನ ನಾಪತ್ತೆಯಾಗಿರುವ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿದೆ ಎಂದು ಮೂಲಗಳು ತಿಳಿಸಿವೆ. </p>.<p>ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ, ಪೊಲೀಸ್ ಎಫ್ಐಆರ್ಗೆ ಸಮವಾದ ಪ್ರಕರಣವನ್ನು ಶುಕ್ರವಾರ ದಾಖಲಿಸಲಾಗಿದೆ ಎಂದು ಹೇಳಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಚಿನ್ನ ನಾಪತ್ತೆಯಾಗಿರುವ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್ಐಟಿ) ದೇವಸ್ಥಾನದ ಪ್ರಧಾನ ಅರ್ಚಕ ಕಂಡರಾರು ರಾಜೀವಾರು ಅವರನ್ನು ಶುಕ್ರವಾರ ಇಲ್ಲಿ ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.</p>.<p>ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. </p>.<p>ದೇವಸ್ಥಾನದ ಸಂಪೂರ್ಣ ಧಾರ್ಮಿಕ ಅಧಿಕಾರ ಹೊಂದಿದ್ದ ರಾಜೀವಾರು ಅವರನ್ನು ಗೋಪ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಯಿತು. ಬಳಿಕ ಎಸ್ಐಟಿ ಕಚೇರಿಗೆ ಕರೆದೊಯ್ದು, ಬಂಧಿಸಲಾಯಿತು ಎಂದು ಹೇಳಿವೆ. </p>.<p>ಪ್ರಕರಣದ ಪ್ರಮುಖ ಆರೋಪಿ, ಬೆಂಗಳೂರಿನ ಉದ್ಯಮಿ ಉಣ್ಣಿಕೃಷ್ಣನ್ ಪೋಟಿ ಮತ್ತು ತಿರುವಾಂಕೂರು ದೇವಸ್ವ ಮಂಡಳಿಯ ಮಾಜಿ ಅಧ್ಯಕ್ಷ ಎ. ಪದ್ಮಕುಮಾರ್ ನೀಡಿದ ಹೇಳಿಕೆಗೆಳ ಆಧಾರದ ಮೇಲೆ ರಾಜೀವಾರು ಅವರನ್ನು ಬಂಧಿಸಲಾಗಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ರಾಜೀವಾರು ಹಾಗೂ ಉಣ್ಣಿಕೃಷ್ಣನ್ ಸಂಪರ್ಕದಲ್ಲಿದ್ದರು. ದೇವಾಲಯದ ಶ್ರೀಕೋವಿಲ್ನ (ಗರ್ಭಗುಡಿ) ಬಾಗಿಲಿನ ಚಿನ್ನ ಲೇಪಿತ ಚೌಕಟ್ಟು ಹಾಗೂ ದ್ವಾರಪಾಲಕರ ಚಿನ್ನ ಲೇಪಿತ ಪ್ರತಿಮೆಗಳನ್ನು ಸ್ಮಾರ್ಟ್ ಕ್ರಿಯೇಷನ್ಸ್ನಲ್ಲಿ ಎಲೆಕ್ಟ್ರೋಪ್ಲೇಟಿಂಗ್ ಮಾಡುವಂತೆ ರಾಜೀವಾರು ಉಣ್ಣಿಕೃಷ್ಣನ್ ಅವರಿಗೆ ಹೇಳಿದ್ದರು ಎಂಬುದು ತನಿಖೆ ವೇಳೆಗೆ ತಿಳಿದುಬಂದಿದೆ. </p>.<p>ತನಿಖೆಯ ಭಾಗವಾಗಿ ಈ ಹಿಂದೆ ರಾಜೀವಾರು ಅವರನ್ನು ಒಮ್ಮೆ ಎಸ್ಐಟಿ ವಿಚಾರಣೆಗೊಳಪಡಿಸಿತ್ತು. ಪ್ರಕರಣದ ತನಿಖೆ ನಡೆಸಲು ಕೇರಳ ಹೈಕೋರ್ಟ್ ಎಸ್ಐಟಿಯನ್ನು ರಚಿಸಿದೆ. </p>.<p><strong>ಪ್ರಕರಣ ದಾಖಲಿಸಿದ ಇ.ಡಿ: </strong>ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಚಿನ್ನ ನಾಪತ್ತೆಯಾಗಿರುವ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿದೆ ಎಂದು ಮೂಲಗಳು ತಿಳಿಸಿವೆ. </p>.<p>ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ, ಪೊಲೀಸ್ ಎಫ್ಐಆರ್ಗೆ ಸಮವಾದ ಪ್ರಕರಣವನ್ನು ಶುಕ್ರವಾರ ದಾಖಲಿಸಲಾಗಿದೆ ಎಂದು ಹೇಳಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>