<p><strong>ತಿರುನಂತಪುರ</strong>: ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನಗಳವು ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಶುಕ್ರವಾರ ಇನ್ನಿಬ್ಬರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಶಬರಿಮಲೆ ಚಿನ್ನ ಕಳವು: ಟಿಡಿಬಿ ಮಾಜಿ ಅಧ್ಯಕ್ಷನಿಗೆ ಜಾಮೀನು ನಿರಾಕರಿಸಿದ ಕೇರಳ HC.<p>ಶಬರಿಮಲೆ ದೇಗುಲದಲ್ಲಿ ಕಲಾಕೃತಿಗಳಿಗೆ ವಿದ್ಯುತ್ ಲೇಪನ ಮಾಡಿದ್ದ ‘ಸ್ಮಾರ್ಟ್ ಕ್ರಿಯೇಷನ್ಸ್’ ಸಿಇಒ ಪಂಕಜ್ ಭಂಡಾರಿ ಹಾಗೂ ಬಳ್ಳಾರಿಯ ಚಿನ್ನದ ಉದ್ಯಮಿ ಗೋವರ್ಧನ ಬಂಧಿತರು.</p><p>ಇವರಿಬ್ಬರನ್ನು ವಶಕ್ಕೆ ಪಡೆದು ತಿರುವನಂತಪುರದಲ್ಲಿರುವ ಅಪರಾಧ ವಿಭಾಗದ ಕಚೇರಿಗೆ ಕರೆತಂದು ವಿಚಾರಣೆಗೆ ಒಳಪಡಿಸಲಾಯಿತು. ಅವರ ವಿರುದ್ಧ ಸಾಕ್ಷ್ಯ ಸಿಕ್ಕಿದ ಬಳಿಕ ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.ಚಿನ್ನ ಕಳವು: ಕೇರಳದ ಟಿಡಿಬಿಯ ಮಾಜಿ ಆಡಳಿತಾಧಿಕಾರಿ ಎಸ್.ಶ್ರೀಕುಮಾರ್ ಬಂಧನ.<p>2019ರಲ್ಲಿ ಪ್ರಕರಣದ ಪ್ರಮುಖ ಆರೋಪಿ ಉಣ್ಣಿಕೃಷ್ಣನ್ ಪೋಟಿ, ದ್ವಾರಪಾಲಕ ಮೂರ್ತಿಗಳು ಹಾಗೂ ಗರ್ಭಗುಡಿಯ ದ್ವಾರಕ್ಕೆ ವಿದ್ಯುತ್ ಲೇಪನಕ್ಕಾಗಿ ಸ್ಮಾರ್ಟ್ ಕ್ರಿಯೇಷನ್ಗೆ ತೆಗೆದಕೊಂಡು ಹೋಗಲಾಗಿದ್ದ. ಆ ವೇಳೆ ಅದರಲ್ಲಿದ್ದ ಚಿನ್ನವನ್ನು ತೆಗೆಯಲಾಗಿದೆ ಎನ್ನುವುದು ಎಸ್ಐಟಿ ತನಿಖೆಯಲ್ಲಿ ಗೊತ್ತಾಗಿದೆ.</p><p>ವಿದ್ಯುತ್ ಲೇಪನದ ವೇಳೆ 400 ಗ್ರಾಂಗೂ ಅಧಿಕ ಚಿನ್ನವನ್ನು ತೆಗೆದು ಅದನ್ನು ಗೋವರ್ಧನಗೆ ಹಸ್ತಾಂತರಿಸಲಾಗಿದೆ ಎಂದು ಪೋಟಿ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.</p><p>ದ್ವಾರಪಾಲಕ ಮೂರ್ತಿಗಳ ಚಿನ್ನಗಳವು ಪ್ರಕರಣದದಲ್ಲಿ ಭಂಡಾರಿ ಹಾಗೂ ಗೋವರ್ಧನ ಆರೋಪಿತರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಶಬರಿಮಲೆ ಚಿನ್ನ ಕಳವು ಪ್ರಕರಣ: ಎಸ್ಐಟಿಯಿಂದ ಟಿಡಿಬಿ ಮಾಜಿ ಅಧ್ಯಕ್ಷನ ವಿಚಾರಣೆ.<p>ಪ್ರಕರಣದ ದಾಖಲಿಸಿಕೊಂಡ ಬೆನ್ನಲ್ಲೇ ಇವರಿಬ್ಬರನ್ನು ಎಸ್ಐಟಿ ವಿಚಾರಣೆ ನಡೆಸಿತ್ತು. ವಿಚಾರಣೆ ವೇಳೆ ಹೆಚ್ಚಿನ ಸಾಕ್ಷಿಗಳು ಪತ್ತೆಯಾಯಿತು. ಈಗಾಗಲೇ ಎಸ್ಐಟಿ ಗೋವರ್ಧನ ಚಿನ್ನದ ಅಂಗಡಿಯಿಂದ 400 ಗ್ರಾಂ ಚಿನ್ನ ವಶಪಡಿಸಿಕೊಂಡಿದೆ.</p><p>ಭಂಡಾರಿ ಹಾಗೂ ಗೋವರ್ಧನ ಪ್ರಕರಣದ ಸಂಬಂಧ ಬಂಧಿತರಾದ 8 ಹಾಗೂ 9ನೇ ಆರೋಪಿಗಳು.</p><p>ಬಂಧಿತರನ್ನು ಕೊಲ್ಲಂನ ನ್ಯಾಯಲವೊಂದರಕ್ಕೆ ಹಾಜರು ಪಡಿಸಲಾಗಿದೆ.</p>.ಶಬರಿಮಲೆ ದೇಗುಲದ ಚಿನ್ನ ಕಳವು; ಸಾಕ್ಷ್ಯ ಸಂಗ್ರಹ ಪೂರ್ಣ:ಕೇರಳಕ್ಕೆ ಮರಳಿದ ಎಸ್ಐಟಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುನಂತಪುರ</strong>: ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನಗಳವು ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಶುಕ್ರವಾರ ಇನ್ನಿಬ್ಬರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಶಬರಿಮಲೆ ಚಿನ್ನ ಕಳವು: ಟಿಡಿಬಿ ಮಾಜಿ ಅಧ್ಯಕ್ಷನಿಗೆ ಜಾಮೀನು ನಿರಾಕರಿಸಿದ ಕೇರಳ HC.<p>ಶಬರಿಮಲೆ ದೇಗುಲದಲ್ಲಿ ಕಲಾಕೃತಿಗಳಿಗೆ ವಿದ್ಯುತ್ ಲೇಪನ ಮಾಡಿದ್ದ ‘ಸ್ಮಾರ್ಟ್ ಕ್ರಿಯೇಷನ್ಸ್’ ಸಿಇಒ ಪಂಕಜ್ ಭಂಡಾರಿ ಹಾಗೂ ಬಳ್ಳಾರಿಯ ಚಿನ್ನದ ಉದ್ಯಮಿ ಗೋವರ್ಧನ ಬಂಧಿತರು.</p><p>ಇವರಿಬ್ಬರನ್ನು ವಶಕ್ಕೆ ಪಡೆದು ತಿರುವನಂತಪುರದಲ್ಲಿರುವ ಅಪರಾಧ ವಿಭಾಗದ ಕಚೇರಿಗೆ ಕರೆತಂದು ವಿಚಾರಣೆಗೆ ಒಳಪಡಿಸಲಾಯಿತು. ಅವರ ವಿರುದ್ಧ ಸಾಕ್ಷ್ಯ ಸಿಕ್ಕಿದ ಬಳಿಕ ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.ಚಿನ್ನ ಕಳವು: ಕೇರಳದ ಟಿಡಿಬಿಯ ಮಾಜಿ ಆಡಳಿತಾಧಿಕಾರಿ ಎಸ್.ಶ್ರೀಕುಮಾರ್ ಬಂಧನ.<p>2019ರಲ್ಲಿ ಪ್ರಕರಣದ ಪ್ರಮುಖ ಆರೋಪಿ ಉಣ್ಣಿಕೃಷ್ಣನ್ ಪೋಟಿ, ದ್ವಾರಪಾಲಕ ಮೂರ್ತಿಗಳು ಹಾಗೂ ಗರ್ಭಗುಡಿಯ ದ್ವಾರಕ್ಕೆ ವಿದ್ಯುತ್ ಲೇಪನಕ್ಕಾಗಿ ಸ್ಮಾರ್ಟ್ ಕ್ರಿಯೇಷನ್ಗೆ ತೆಗೆದಕೊಂಡು ಹೋಗಲಾಗಿದ್ದ. ಆ ವೇಳೆ ಅದರಲ್ಲಿದ್ದ ಚಿನ್ನವನ್ನು ತೆಗೆಯಲಾಗಿದೆ ಎನ್ನುವುದು ಎಸ್ಐಟಿ ತನಿಖೆಯಲ್ಲಿ ಗೊತ್ತಾಗಿದೆ.</p><p>ವಿದ್ಯುತ್ ಲೇಪನದ ವೇಳೆ 400 ಗ್ರಾಂಗೂ ಅಧಿಕ ಚಿನ್ನವನ್ನು ತೆಗೆದು ಅದನ್ನು ಗೋವರ್ಧನಗೆ ಹಸ್ತಾಂತರಿಸಲಾಗಿದೆ ಎಂದು ಪೋಟಿ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.</p><p>ದ್ವಾರಪಾಲಕ ಮೂರ್ತಿಗಳ ಚಿನ್ನಗಳವು ಪ್ರಕರಣದದಲ್ಲಿ ಭಂಡಾರಿ ಹಾಗೂ ಗೋವರ್ಧನ ಆರೋಪಿತರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಶಬರಿಮಲೆ ಚಿನ್ನ ಕಳವು ಪ್ರಕರಣ: ಎಸ್ಐಟಿಯಿಂದ ಟಿಡಿಬಿ ಮಾಜಿ ಅಧ್ಯಕ್ಷನ ವಿಚಾರಣೆ.<p>ಪ್ರಕರಣದ ದಾಖಲಿಸಿಕೊಂಡ ಬೆನ್ನಲ್ಲೇ ಇವರಿಬ್ಬರನ್ನು ಎಸ್ಐಟಿ ವಿಚಾರಣೆ ನಡೆಸಿತ್ತು. ವಿಚಾರಣೆ ವೇಳೆ ಹೆಚ್ಚಿನ ಸಾಕ್ಷಿಗಳು ಪತ್ತೆಯಾಯಿತು. ಈಗಾಗಲೇ ಎಸ್ಐಟಿ ಗೋವರ್ಧನ ಚಿನ್ನದ ಅಂಗಡಿಯಿಂದ 400 ಗ್ರಾಂ ಚಿನ್ನ ವಶಪಡಿಸಿಕೊಂಡಿದೆ.</p><p>ಭಂಡಾರಿ ಹಾಗೂ ಗೋವರ್ಧನ ಪ್ರಕರಣದ ಸಂಬಂಧ ಬಂಧಿತರಾದ 8 ಹಾಗೂ 9ನೇ ಆರೋಪಿಗಳು.</p><p>ಬಂಧಿತರನ್ನು ಕೊಲ್ಲಂನ ನ್ಯಾಯಲವೊಂದರಕ್ಕೆ ಹಾಜರು ಪಡಿಸಲಾಗಿದೆ.</p>.ಶಬರಿಮಲೆ ದೇಗುಲದ ಚಿನ್ನ ಕಳವು; ಸಾಕ್ಷ್ಯ ಸಂಗ್ರಹ ಪೂರ್ಣ:ಕೇರಳಕ್ಕೆ ಮರಳಿದ ಎಸ್ಐಟಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>