<p><strong>ಕೊಲ್ಲಂ</strong>: ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣಗಳ ಆರೋಪಿ, ಟಿಡಿಬಿ ಮಾಜಿ ಅಧಿಕಾರಿ ಮುರಾರಿ ಬಾಬು ಅವರಿಗೆ ನ್ಯಾಯಾಲಯವೊಂದು ತಾಂತ್ರಿಕ ಕಾರಣಗಳ ಆಧಾರದಲ್ಲಿ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.</p>.<p>ವಿಶೇಷ ತನಿಖಾ ತಂಡ (ಎಸ್ಐಟಿ) ಬಾಬು ಅವರನ್ನು ಬಂಧಿಸಿ 90 ದಿನಗಳು ಕಳೆದರೂ ಎರಡು ಪ್ರಕರಣಗಳ ಕುರಿತು ಆರೋಪ ಪಟ್ಟಿ ಸಲ್ಲಿಸಿಲ್ಲ. ಈ ತಾಂತ್ರಿಕ ಅಂಶವನ್ನು ಆಧಾರವಾಗಿಟ್ಟುಕೊಂಡು ಕೊಲ್ಲಂ ವಿಚಕ್ಷಣಾ ನ್ಯಾಯಾಲಯದ ನ್ಯಾಯಧೀಶರಾದ ಮೋಹಿತ್ ಸಿ.ಎಸ್ ಅವರು ಜಾಮೀನು ಮಂಜೂರು ಮಾಡಿದ್ದಾರೆ.</p>.<p>ಬಾಬು ಅವರು ದ್ವಾರಪಾಲಕ ಮೂರ್ತಿಗಳ ಚಿನ್ನ ಕಳವು ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದು, ಶ್ರೀಕೋವಿಲ್ ಬಾಗಿಲು ಚೌಕಟ್ಟಿನ ಚಿನ್ನ ಕಳವು ಪ್ರಕರಣದಲ್ಲಿ ಆರನೇ ಆರೋಪಿಯಾಗಿದ್ದಾರೆ.</p>.<p>ಚಿನ್ನ ಕಳವಿಗೆ ಪಿತೂರಿ ನಡೆಸಿದ ಆರೋಪದಡಿ ಬಾಬು ಅವರನ್ನು ಕಳೆದ ಅಕ್ಟೋಬರ್ನಲ್ಲಿ ಬಂಧಿಸಲಾಗಿತ್ತು. ಆ ವೇಳೆ ಅವರು ಟಿಡಿಬಿಯ ಉಪ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲ್ಲಂ</strong>: ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣಗಳ ಆರೋಪಿ, ಟಿಡಿಬಿ ಮಾಜಿ ಅಧಿಕಾರಿ ಮುರಾರಿ ಬಾಬು ಅವರಿಗೆ ನ್ಯಾಯಾಲಯವೊಂದು ತಾಂತ್ರಿಕ ಕಾರಣಗಳ ಆಧಾರದಲ್ಲಿ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.</p>.<p>ವಿಶೇಷ ತನಿಖಾ ತಂಡ (ಎಸ್ಐಟಿ) ಬಾಬು ಅವರನ್ನು ಬಂಧಿಸಿ 90 ದಿನಗಳು ಕಳೆದರೂ ಎರಡು ಪ್ರಕರಣಗಳ ಕುರಿತು ಆರೋಪ ಪಟ್ಟಿ ಸಲ್ಲಿಸಿಲ್ಲ. ಈ ತಾಂತ್ರಿಕ ಅಂಶವನ್ನು ಆಧಾರವಾಗಿಟ್ಟುಕೊಂಡು ಕೊಲ್ಲಂ ವಿಚಕ್ಷಣಾ ನ್ಯಾಯಾಲಯದ ನ್ಯಾಯಧೀಶರಾದ ಮೋಹಿತ್ ಸಿ.ಎಸ್ ಅವರು ಜಾಮೀನು ಮಂಜೂರು ಮಾಡಿದ್ದಾರೆ.</p>.<p>ಬಾಬು ಅವರು ದ್ವಾರಪಾಲಕ ಮೂರ್ತಿಗಳ ಚಿನ್ನ ಕಳವು ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದು, ಶ್ರೀಕೋವಿಲ್ ಬಾಗಿಲು ಚೌಕಟ್ಟಿನ ಚಿನ್ನ ಕಳವು ಪ್ರಕರಣದಲ್ಲಿ ಆರನೇ ಆರೋಪಿಯಾಗಿದ್ದಾರೆ.</p>.<p>ಚಿನ್ನ ಕಳವಿಗೆ ಪಿತೂರಿ ನಡೆಸಿದ ಆರೋಪದಡಿ ಬಾಬು ಅವರನ್ನು ಕಳೆದ ಅಕ್ಟೋಬರ್ನಲ್ಲಿ ಬಂಧಿಸಲಾಗಿತ್ತು. ಆ ವೇಳೆ ಅವರು ಟಿಡಿಬಿಯ ಉಪ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>