<p><strong>ಪತ್ತನಂತಿಟ್ಟ:</strong> ‘ಶಬರಿಮಲೆ ದೇವಸ್ಥಾನದ ಚಿನ್ನ ಲೇಪಿತ ತಾಮ್ರದ ದ್ವಾರಪಾಲಕರ ಮೂರ್ತಿಗಳಲ್ಲಿನ ಚಿನ್ನದ ಪ್ರಮಾಣದಲ್ಲಿ ಇಳಿಕೆಯಾಗಿದ್ದು ಮತ್ತು ಗರ್ಭಗುಡಿಯ ದ್ವಾರದಲ್ಲಿನ ಚಿನ್ನ ಕಳವಿನ ಪ್ರಕರಣದ ಕುರಿತು ಜಾಗರೂಕನಾಗಿರುತ್ತೇನೆ’ ಎಂದು ದೇವಸ್ಥಾನಕ್ಕೆ ಆಯ್ಕೆಯಾಗಿರುವ ನೂತನ ಅರ್ಚಕ ಪ್ರಸಾದ್ ಇ.ಡಿ. ಶನಿವಾರ ಹೇಳಿದರು.</p>.<p class="bodytext">ತ್ರಿಶ್ಶೂರಿನ ಪ್ರಸಾದ್ ಅವರನ್ನು ಶಬರಿಮಲೆ ದೇವಸ್ಥಾನಕ್ಕೆ ಮತ್ತು ಕೊಲ್ಲಂನ ಮನು ನಂಬೂದರಿ ಎಂ.ಜಿ ಅವರನ್ನು ಮಲ್ಲಿಕಾಪುರ ದೇವಸ್ಥಾನಕ್ಕೆ ಸಾಂಪ್ರದಾಯಿಕ ಪದ್ಧತಿಯಲ್ಲಿ ಅರ್ಚಕರನ್ನಾಗಿ ಆಯ್ಕೆ ಮಾಡಲಾಯಿತು. ಈ ಬಳಿಕ ಮಾತನಾಡಿದ ಪ್ರಸಾದ್, ‘ಅಯ್ಯಪ್ಪನಿಗೆ ಎಲ್ಲವೂ ತಿಳಿದಿದೆ. ಅವನೇ ಈ ಸಮಸ್ಯೆಗೆ ಪರಿಹಾರವನ್ನೂ ನೀಡುತ್ತಾನೆ. ಈ ಪ್ರಕರಣದಿಂದ ಶಬರಿಮಲೆಗೆ ಬರುವ ಭಕ್ತರ ಸಂಖ್ಯೆಯಲ್ಲೇನೂ ಕಡಿಮೆಯಾಗಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪತ್ತನಂತಿಟ್ಟ:</strong> ‘ಶಬರಿಮಲೆ ದೇವಸ್ಥಾನದ ಚಿನ್ನ ಲೇಪಿತ ತಾಮ್ರದ ದ್ವಾರಪಾಲಕರ ಮೂರ್ತಿಗಳಲ್ಲಿನ ಚಿನ್ನದ ಪ್ರಮಾಣದಲ್ಲಿ ಇಳಿಕೆಯಾಗಿದ್ದು ಮತ್ತು ಗರ್ಭಗುಡಿಯ ದ್ವಾರದಲ್ಲಿನ ಚಿನ್ನ ಕಳವಿನ ಪ್ರಕರಣದ ಕುರಿತು ಜಾಗರೂಕನಾಗಿರುತ್ತೇನೆ’ ಎಂದು ದೇವಸ್ಥಾನಕ್ಕೆ ಆಯ್ಕೆಯಾಗಿರುವ ನೂತನ ಅರ್ಚಕ ಪ್ರಸಾದ್ ಇ.ಡಿ. ಶನಿವಾರ ಹೇಳಿದರು.</p>.<p class="bodytext">ತ್ರಿಶ್ಶೂರಿನ ಪ್ರಸಾದ್ ಅವರನ್ನು ಶಬರಿಮಲೆ ದೇವಸ್ಥಾನಕ್ಕೆ ಮತ್ತು ಕೊಲ್ಲಂನ ಮನು ನಂಬೂದರಿ ಎಂ.ಜಿ ಅವರನ್ನು ಮಲ್ಲಿಕಾಪುರ ದೇವಸ್ಥಾನಕ್ಕೆ ಸಾಂಪ್ರದಾಯಿಕ ಪದ್ಧತಿಯಲ್ಲಿ ಅರ್ಚಕರನ್ನಾಗಿ ಆಯ್ಕೆ ಮಾಡಲಾಯಿತು. ಈ ಬಳಿಕ ಮಾತನಾಡಿದ ಪ್ರಸಾದ್, ‘ಅಯ್ಯಪ್ಪನಿಗೆ ಎಲ್ಲವೂ ತಿಳಿದಿದೆ. ಅವನೇ ಈ ಸಮಸ್ಯೆಗೆ ಪರಿಹಾರವನ್ನೂ ನೀಡುತ್ತಾನೆ. ಈ ಪ್ರಕರಣದಿಂದ ಶಬರಿಮಲೆಗೆ ಬರುವ ಭಕ್ತರ ಸಂಖ್ಯೆಯಲ್ಲೇನೂ ಕಡಿಮೆಯಾಗಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>