<p><strong>ತಿರುವನಂತಪುರ:</strong> ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಚಿನ್ನ ನಾಪತ್ತೆಯಾಗಿರುವ ಪ್ರಕರಣದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಕಂಡರಾರು ರಾಜೀವಾರು ಅವರನ್ನು ಎರಡನೇ ಪ್ರಕರಣದಲ್ಲೂ ಗುರುವಾರ ಬಂಧಿಸಲಾಗಿದೆ.</p><p>ಗರ್ಭಗುಡಿ ಬಾಗಿಲಿನ ಚೌಕಟ್ಟಿನಿಂದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀವಾರು ಅವರನ್ನು ಈಗಾಗಲೇ ಬಂಧಿಸಿದ್ದು ಅವರನ್ನು ತಿರುವನಂತಪುರ ಜೈಲಿನಲ್ಲಿ ಇರಿಸಲಾಗಿದೆ.</p><p>ಇದೀಗ ದ್ವಾರಪಾಲಕ ಫಲಕಗಳಿಂದ ಚಿನ್ನ ಕಳೆದು ಹೋದ ಮತ್ತೊಂದು ಪ್ರಕರಣದಲ್ಲಿ ಎಸ್ಐಟಿ ಪೊಲೀಸರು ರಾಜೀವಾರು ವಿರುದ್ಧ ಮತ್ತೊಂದು ಬಂಧನವನ್ನು ದಾಖಲಿಸಿದ್ದಾರೆ. </p><p>ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. </p><p>ಪ್ರಕರಣದ ಪ್ರಮುಖ ಆರೋಪಿ, ಬೆಂಗಳೂರಿನ ಉದ್ಯಮಿ ಉಣ್ಣಿಕೃಷ್ಣನ್ ಪೋಟಿ ಮತ್ತು ತಿರುವಾಂಕೂರು ದೇವಸ್ವ ಮಂಡಳಿಯ ಮಾಜಿ ಅಧ್ಯಕ್ಷ ಎ. ಪದ್ಮಕುಮಾರ್ ನೀಡಿದ ಹೇಳಿಕೆಗೆಳ ಆಧಾರದ ಮೇಲೆ ರಾಜೀವಾರು ಅವರನ್ನು ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಚಿನ್ನ ನಾಪತ್ತೆಯಾಗಿರುವ ಪ್ರಕರಣದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಕಂಡರಾರು ರಾಜೀವಾರು ಅವರನ್ನು ಎರಡನೇ ಪ್ರಕರಣದಲ್ಲೂ ಗುರುವಾರ ಬಂಧಿಸಲಾಗಿದೆ.</p><p>ಗರ್ಭಗುಡಿ ಬಾಗಿಲಿನ ಚೌಕಟ್ಟಿನಿಂದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀವಾರು ಅವರನ್ನು ಈಗಾಗಲೇ ಬಂಧಿಸಿದ್ದು ಅವರನ್ನು ತಿರುವನಂತಪುರ ಜೈಲಿನಲ್ಲಿ ಇರಿಸಲಾಗಿದೆ.</p><p>ಇದೀಗ ದ್ವಾರಪಾಲಕ ಫಲಕಗಳಿಂದ ಚಿನ್ನ ಕಳೆದು ಹೋದ ಮತ್ತೊಂದು ಪ್ರಕರಣದಲ್ಲಿ ಎಸ್ಐಟಿ ಪೊಲೀಸರು ರಾಜೀವಾರು ವಿರುದ್ಧ ಮತ್ತೊಂದು ಬಂಧನವನ್ನು ದಾಖಲಿಸಿದ್ದಾರೆ. </p><p>ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. </p><p>ಪ್ರಕರಣದ ಪ್ರಮುಖ ಆರೋಪಿ, ಬೆಂಗಳೂರಿನ ಉದ್ಯಮಿ ಉಣ್ಣಿಕೃಷ್ಣನ್ ಪೋಟಿ ಮತ್ತು ತಿರುವಾಂಕೂರು ದೇವಸ್ವ ಮಂಡಳಿಯ ಮಾಜಿ ಅಧ್ಯಕ್ಷ ಎ. ಪದ್ಮಕುಮಾರ್ ನೀಡಿದ ಹೇಳಿಕೆಗೆಳ ಆಧಾರದ ಮೇಲೆ ರಾಜೀವಾರು ಅವರನ್ನು ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>