<p><strong>ತಿರುವನಂತಪುರ:</strong> ಶಬರಿಮಲೆ ದೇವಸ್ಥಾನದ ಚಿನ್ನ ಕಳವು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಇಂದು (ಗುರುವಾರ) ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಮಾಜಿ ಅಧ್ಯಕ್ಷ ಎ. ಪದ್ಮಕುಮಾರ್ ಅವರನ್ನು ವಿಚಾರಣೆಗೆ ಒಳಪಡಿಸಿದೆ. </p><p>ಮಾಜಿ ಶಾಸಕರೂ ಆಗಿರುವ ಪದ್ಮಕುಮಾರ್ ಅವರನ್ನು ಕ್ರೈಮ್ ಬ್ರಾಂಚ್ ಕಚೇರಿಯಲ್ಲಿ ಎಸ್ಐಟಿ ವಿಚಾರಣೆ ನಡೆಸಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. </p><p>2019ರಲ್ಲಿ ದ್ವಾರಪಾಲಕ ಮೂರ್ತಿಗಳ ಚಿನ್ನ ಲೇಪಿತ ತಾಮ್ರದ ಕವಚಗಳು ಮತ್ತು ಗರ್ಭಗುಡಿ ಬಾಗಿಲು ಚೌಕಟ್ಟುಗಳನ್ನು ಎಲೆಕ್ಟ್ರೋಪ್ಲೇಟಿಂಗ್ ಮಾಡಲು ಮುಖ್ಯ ಆರೋಪಿ ಉನ್ನಿಕೃಷ್ಣನ್ ಪೋಟಿ ಅವರಿಗೆ ಹಸ್ತಾಂತರಿಸುವ ಪ್ರಸ್ತಾಪವನ್ನು ಪರಿಗಣಿಸಿದಾಗ ಪದ್ಮಕುಮಾರ್ ಟಿಡಿಬಿ ಅಧ್ಯಕ್ಷರಾಗಿದ್ದರು. </p><p>ಚಿನ್ನ ಲೇಪಿತ ಕವಚಗಳನ್ನು ಪೋಟಿಗೆ ಹಸ್ತಾಂತರಿಸಿದ್ದಾಗ ನಾನು ಮಂಡಳಿಯ ಅಧ್ಯಕ್ಷನಾಗಿರಲಿಲ್ಲ ಎಂದು ಪದ್ಮಕುಮಾರ್ ವಾದಿಸಿದ್ದರೂ, ಅವರ ಅಧಿಕಾರಾವಧಿಯಲ್ಲೇ ಪ್ರಸ್ತಾವನೆ ಪರಿಗಣಿಸಲಾಗಿತ್ತು ಎಂದು ಎಸ್ಐಟಿ ಹೇಳಿದೆ. </p><p>ಪದ್ಮಕುಮಾರ್ ಅವರಲ್ಲಿ ವಿಚಾರಣೆಗೆ ಹಾಜರಾಗುವಂತೆ ಕೇಳಿಕೊಳ್ಳಲಾಗಿತ್ತು. ಆದರೆ ಅವರು ಹೆಚ್ಚಿನ ಸಮಯ ಕೋರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಪತ್ತನಂತಿಟ್ಟ ಜಿಲ್ಲೆಯ ಸಿಪಿಐ(ಎಂ) ಪಕ್ಷದ ಹಿರಿಯ ನಾಯಕ ಪದ್ಮಕುಮಾರ್, ಕೇರಳ ವಿಧಾನಸಭೆಯಲ್ಲಿ ಕೋಣಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. </p><p>ಏತನ್ಮಧ್ಯೆ ಟಿಡಿಬಿ ಮಾಜಿ ಅಧ್ಯಕ್ಷ ಎನ್. ವಾಸು ಅವರನ್ನು ಎಸ್ಐಟಿ ಕಸ್ಟಡಿಗೆ ಒಪ್ಪಿಸಿ ಕೊಲ್ಲಂನ ವಿಜಿಲೆನ್ಸ್ ನ್ಯಾಯಾಲಯ ಆದೇಶಿಸಿದೆ. </p><p>ಎನ್.ವಾಸು ಅವರನ್ನು ಒಂದು ದಿನದ ಮಟ್ಟಿಗೆ ವಶಕ್ಕೆ ನೀಡುವಂತೆ ಎಸ್ಐಟಿ ಮನವಿ ಮಾಡಿತ್ತು. ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯವು, ಸಂಜೆ 4ಗಂಟೆಯವರೆಗೆ ಕಸ್ಟಡಿಗೆ ಒಪ್ಪಿಸಿದೆ. </p><p>ಶಬರಿಮಲೆ ಚಿನ್ನ ಕಳವು ಪ್ರಕರಣದಲ್ಲಿ ಪೋಟಿ, ವಾಸು ಸೇರಿದಂತೆ ಈವರೆಗೆ ಐದು ಮಂದಿಯನ್ನು ಎಸ್ಐಟಿ ಬಂಧಿಸಿದೆ. </p>.Sabarimala | ಶಬರಿಮಲೆ ದೇವಾಲಯದಲ್ಲಿ ಜನದಟ್ಟಣೆ: ಹೈಕೋರ್ಟ್ ತರಾಟೆ.ಚಿನ್ನ ಕಳವು ಪ್ರಕರಣ: ವೈಜ್ಞಾನಿಕ ಪರೀಕ್ಷೆಗಾಗಿ ಶಬರಿಮಲೆ ದೇಗುಲಕ್ಕೆ ತಲುಪಿದ SIT.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಶಬರಿಮಲೆ ದೇವಸ್ಥಾನದ ಚಿನ್ನ ಕಳವು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಇಂದು (ಗುರುವಾರ) ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಮಾಜಿ ಅಧ್ಯಕ್ಷ ಎ. ಪದ್ಮಕುಮಾರ್ ಅವರನ್ನು ವಿಚಾರಣೆಗೆ ಒಳಪಡಿಸಿದೆ. </p><p>ಮಾಜಿ ಶಾಸಕರೂ ಆಗಿರುವ ಪದ್ಮಕುಮಾರ್ ಅವರನ್ನು ಕ್ರೈಮ್ ಬ್ರಾಂಚ್ ಕಚೇರಿಯಲ್ಲಿ ಎಸ್ಐಟಿ ವಿಚಾರಣೆ ನಡೆಸಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. </p><p>2019ರಲ್ಲಿ ದ್ವಾರಪಾಲಕ ಮೂರ್ತಿಗಳ ಚಿನ್ನ ಲೇಪಿತ ತಾಮ್ರದ ಕವಚಗಳು ಮತ್ತು ಗರ್ಭಗುಡಿ ಬಾಗಿಲು ಚೌಕಟ್ಟುಗಳನ್ನು ಎಲೆಕ್ಟ್ರೋಪ್ಲೇಟಿಂಗ್ ಮಾಡಲು ಮುಖ್ಯ ಆರೋಪಿ ಉನ್ನಿಕೃಷ್ಣನ್ ಪೋಟಿ ಅವರಿಗೆ ಹಸ್ತಾಂತರಿಸುವ ಪ್ರಸ್ತಾಪವನ್ನು ಪರಿಗಣಿಸಿದಾಗ ಪದ್ಮಕುಮಾರ್ ಟಿಡಿಬಿ ಅಧ್ಯಕ್ಷರಾಗಿದ್ದರು. </p><p>ಚಿನ್ನ ಲೇಪಿತ ಕವಚಗಳನ್ನು ಪೋಟಿಗೆ ಹಸ್ತಾಂತರಿಸಿದ್ದಾಗ ನಾನು ಮಂಡಳಿಯ ಅಧ್ಯಕ್ಷನಾಗಿರಲಿಲ್ಲ ಎಂದು ಪದ್ಮಕುಮಾರ್ ವಾದಿಸಿದ್ದರೂ, ಅವರ ಅಧಿಕಾರಾವಧಿಯಲ್ಲೇ ಪ್ರಸ್ತಾವನೆ ಪರಿಗಣಿಸಲಾಗಿತ್ತು ಎಂದು ಎಸ್ಐಟಿ ಹೇಳಿದೆ. </p><p>ಪದ್ಮಕುಮಾರ್ ಅವರಲ್ಲಿ ವಿಚಾರಣೆಗೆ ಹಾಜರಾಗುವಂತೆ ಕೇಳಿಕೊಳ್ಳಲಾಗಿತ್ತು. ಆದರೆ ಅವರು ಹೆಚ್ಚಿನ ಸಮಯ ಕೋರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಪತ್ತನಂತಿಟ್ಟ ಜಿಲ್ಲೆಯ ಸಿಪಿಐ(ಎಂ) ಪಕ್ಷದ ಹಿರಿಯ ನಾಯಕ ಪದ್ಮಕುಮಾರ್, ಕೇರಳ ವಿಧಾನಸಭೆಯಲ್ಲಿ ಕೋಣಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. </p><p>ಏತನ್ಮಧ್ಯೆ ಟಿಡಿಬಿ ಮಾಜಿ ಅಧ್ಯಕ್ಷ ಎನ್. ವಾಸು ಅವರನ್ನು ಎಸ್ಐಟಿ ಕಸ್ಟಡಿಗೆ ಒಪ್ಪಿಸಿ ಕೊಲ್ಲಂನ ವಿಜಿಲೆನ್ಸ್ ನ್ಯಾಯಾಲಯ ಆದೇಶಿಸಿದೆ. </p><p>ಎನ್.ವಾಸು ಅವರನ್ನು ಒಂದು ದಿನದ ಮಟ್ಟಿಗೆ ವಶಕ್ಕೆ ನೀಡುವಂತೆ ಎಸ್ಐಟಿ ಮನವಿ ಮಾಡಿತ್ತು. ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯವು, ಸಂಜೆ 4ಗಂಟೆಯವರೆಗೆ ಕಸ್ಟಡಿಗೆ ಒಪ್ಪಿಸಿದೆ. </p><p>ಶಬರಿಮಲೆ ಚಿನ್ನ ಕಳವು ಪ್ರಕರಣದಲ್ಲಿ ಪೋಟಿ, ವಾಸು ಸೇರಿದಂತೆ ಈವರೆಗೆ ಐದು ಮಂದಿಯನ್ನು ಎಸ್ಐಟಿ ಬಂಧಿಸಿದೆ. </p>.Sabarimala | ಶಬರಿಮಲೆ ದೇವಾಲಯದಲ್ಲಿ ಜನದಟ್ಟಣೆ: ಹೈಕೋರ್ಟ್ ತರಾಟೆ.ಚಿನ್ನ ಕಳವು ಪ್ರಕರಣ: ವೈಜ್ಞಾನಿಕ ಪರೀಕ್ಷೆಗಾಗಿ ಶಬರಿಮಲೆ ದೇಗುಲಕ್ಕೆ ತಲುಪಿದ SIT.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>