<p><strong>ಪತ್ತನಂತಿಟ್ಟ(ಕೇರಳ):</strong> ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.</p><p>ಸುಧೀಶ್ ಕುಮಾರ್ ಅವರು 1990 ರಿಂದ ಶಬರಿಮಲೆ ದೇಗುಲದೊಂದಿಗೆ ನಂಟಿಟ್ಟುಕೊಂಡಿದ್ದಾರೆ. 2019ರಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ತಿರುವನಂತಪುರದಲ್ಲಿ ಅವರನ್ನು ವಿಚಾರಣೆ ನಡೆಸಿದ ಬಳಿಕ, ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. </p><p>ದ್ವಾರಪಾಲಕ ಮೂರ್ತಿಗಳು ತಾಮ್ರದ ಹೊದಿಕೆ ಹೊಂದಿದೆ ಎಂದು ಅವರು ದೇಗುಲದ ದಾಖಲೆಗಳಲ್ಲಿ ಬರೆದಿದ್ದರು. ಆದರೆ, ಅದು ಚಿನ್ನ ಲೇಪಿತ ಮೂರ್ತಿಗಳಾಗಿತ್ತು. ಈ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಪ್ರಕರಣದ ಪ್ರಮುಖ ಆರೋಪಿಯಾಗಿರುವ ಉನ್ನಿಕೃಷ್ಣನ್ ಅವರಿಗೆ 2019ರಲ್ಲಿ ವಿಗ್ರಹಗಳಿಗೆ ಚಿನ್ನದ ಲೇಪನ ಮಾಡಲು ಹಸ್ತಾಂತರಿಸುವ ಸಮಯದಲ್ಲೂ ತಾಮ್ರದ ಮೂರ್ತಿಗಳೆಂದೇ ದೇಗುಲದ ದಾಖಲೆಗಳಲ್ಲಿ ದಾಖಲಿಸಲಾಗಿದೆ. ನಂತರ, ಆರೋಪಿಗಳು ಹಳೆಯ ಚಿನ್ನದ ಲೇಪನವನ್ನು ಬೇರ್ಪಡಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.</p><p>ಶಬರಿಮಲೆ ಚಿನ್ನ ಕಳವು ಪ್ರಕರಣದಲ್ಲಿ ಸುಧೀಶ್ ಕುಮಾರ್ ಸೇರಿದಂತೆ ಇದುವರೆಗೂ ಮೂವರನ್ನು ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪತ್ತನಂತಿಟ್ಟ(ಕೇರಳ):</strong> ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.</p><p>ಸುಧೀಶ್ ಕುಮಾರ್ ಅವರು 1990 ರಿಂದ ಶಬರಿಮಲೆ ದೇಗುಲದೊಂದಿಗೆ ನಂಟಿಟ್ಟುಕೊಂಡಿದ್ದಾರೆ. 2019ರಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ತಿರುವನಂತಪುರದಲ್ಲಿ ಅವರನ್ನು ವಿಚಾರಣೆ ನಡೆಸಿದ ಬಳಿಕ, ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. </p><p>ದ್ವಾರಪಾಲಕ ಮೂರ್ತಿಗಳು ತಾಮ್ರದ ಹೊದಿಕೆ ಹೊಂದಿದೆ ಎಂದು ಅವರು ದೇಗುಲದ ದಾಖಲೆಗಳಲ್ಲಿ ಬರೆದಿದ್ದರು. ಆದರೆ, ಅದು ಚಿನ್ನ ಲೇಪಿತ ಮೂರ್ತಿಗಳಾಗಿತ್ತು. ಈ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಪ್ರಕರಣದ ಪ್ರಮುಖ ಆರೋಪಿಯಾಗಿರುವ ಉನ್ನಿಕೃಷ್ಣನ್ ಅವರಿಗೆ 2019ರಲ್ಲಿ ವಿಗ್ರಹಗಳಿಗೆ ಚಿನ್ನದ ಲೇಪನ ಮಾಡಲು ಹಸ್ತಾಂತರಿಸುವ ಸಮಯದಲ್ಲೂ ತಾಮ್ರದ ಮೂರ್ತಿಗಳೆಂದೇ ದೇಗುಲದ ದಾಖಲೆಗಳಲ್ಲಿ ದಾಖಲಿಸಲಾಗಿದೆ. ನಂತರ, ಆರೋಪಿಗಳು ಹಳೆಯ ಚಿನ್ನದ ಲೇಪನವನ್ನು ಬೇರ್ಪಡಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.</p><p>ಶಬರಿಮಲೆ ಚಿನ್ನ ಕಳವು ಪ್ರಕರಣದಲ್ಲಿ ಸುಧೀಶ್ ಕುಮಾರ್ ಸೇರಿದಂತೆ ಇದುವರೆಗೂ ಮೂವರನ್ನು ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>