<p><strong>ತಿರುವನಂತಪುರ</strong>: ಶಬರಿಮಲೆ ದೇವಾಲಯದಲ್ಲಿನ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ವಿರುದ್ಧ ಸುಳ್ಳು ಆಪಾದನೆ ಮಾಡಿದ್ದ ಆರೋಪದಡಿ ಯುಟ್ಯೂಬರ್ ವಿರುದ್ಧ ಪ್ರಕರಣದ ದಾಖಲಾಗಿದೆ.</p><p>ಎಡಿಜಿಪಿ ಎಸ್. ಶ್ರೀಜಿತ್ ಅವರು ನೀಡಿರುವ ದೂರಿನ ಆಧಾರದಲ್ಲಿ ಶಬರಿಮಲೆ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.</p><p>ಶಬರಿಮಲೆ ದೇವಾಲಯದ ಮುಖ್ಯ ಸಂಘಟಕ ಶ್ರೀಜಿತ್ ಹಾಗೂ ಪೊಲೀಸರು, ಚಿನ್ನ ಕಳ್ಳತನದಲ್ಲಿ ಭಾಗಿಯಾಗಿದ್ದಾರೆ ಎಂಬುದಾಗಿ ಕೆ.ಎಂ.ಷಾಜಹಾನ್ ಅವರು ತಮ್ಮ ಯುಟ್ಯೂಬ್ ಚಾನೆಲ್ನಲ್ಲಿ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.</p><p>ಧಾರ್ಮಿಕ ವಿಚಾರವನ್ನು ಮುಂದಿಟ್ಟು, ಸಮುದಾಯಗಳ ನಡುವೆ ದ್ವೇಷ ಉತ್ತೇಜಿಸುವ ಹೇಳಿಕೆಗಳನ್ನೊಳಗೊಂಡ ವಿಡಿಯೊಗಳನ್ನು ಪ್ರಸಾರ ಮಾಡಿದ ಆರೋಪವೂ ಷಾಜಹಾನ್ ಮೇಲಿದೆ.</p><p>ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣದ ದಾಖಲಾಗಿದೆ.</p><p>ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ನಾಪತ್ತೆಯಾಗಿದೆ ಎನ್ನಲಾದ ಪ್ರಕರಣವು ರಾಜ್ಯ ರಾಜಕೀಯದಲ್ಲಿ ವಿವಾದ ಎಬ್ಬಿಸಿದೆ.</p><p>ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ವಿಶೇಷ ತನಿಖಾ ತಂಡ (ಎಸ್ಐಟಿ), ತಿರುವಾಂಕೂರು ದೇವಸ್ವ ಮಂಡಳಿಯ ಇಬ್ಬರು ಮಾಜಿ ಅಧ್ಯಕ್ಷರು ಸೇರಿದಂತೆ ಹಲವರನ್ನು ಬಂಧಿಸಿದೆ.</p>.Sabarimala ಚಿನ್ನ ನಾಪತ್ತೆ ಪ್ರಕರಣ | ಪದ್ಮಕುಮಾರ್ 2 ದಿನ SIT ವಶಕ್ಕೆ: ಕೇರಳ HC.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಶಬರಿಮಲೆ ದೇವಾಲಯದಲ್ಲಿನ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ವಿರುದ್ಧ ಸುಳ್ಳು ಆಪಾದನೆ ಮಾಡಿದ್ದ ಆರೋಪದಡಿ ಯುಟ್ಯೂಬರ್ ವಿರುದ್ಧ ಪ್ರಕರಣದ ದಾಖಲಾಗಿದೆ.</p><p>ಎಡಿಜಿಪಿ ಎಸ್. ಶ್ರೀಜಿತ್ ಅವರು ನೀಡಿರುವ ದೂರಿನ ಆಧಾರದಲ್ಲಿ ಶಬರಿಮಲೆ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.</p><p>ಶಬರಿಮಲೆ ದೇವಾಲಯದ ಮುಖ್ಯ ಸಂಘಟಕ ಶ್ರೀಜಿತ್ ಹಾಗೂ ಪೊಲೀಸರು, ಚಿನ್ನ ಕಳ್ಳತನದಲ್ಲಿ ಭಾಗಿಯಾಗಿದ್ದಾರೆ ಎಂಬುದಾಗಿ ಕೆ.ಎಂ.ಷಾಜಹಾನ್ ಅವರು ತಮ್ಮ ಯುಟ್ಯೂಬ್ ಚಾನೆಲ್ನಲ್ಲಿ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.</p><p>ಧಾರ್ಮಿಕ ವಿಚಾರವನ್ನು ಮುಂದಿಟ್ಟು, ಸಮುದಾಯಗಳ ನಡುವೆ ದ್ವೇಷ ಉತ್ತೇಜಿಸುವ ಹೇಳಿಕೆಗಳನ್ನೊಳಗೊಂಡ ವಿಡಿಯೊಗಳನ್ನು ಪ್ರಸಾರ ಮಾಡಿದ ಆರೋಪವೂ ಷಾಜಹಾನ್ ಮೇಲಿದೆ.</p><p>ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣದ ದಾಖಲಾಗಿದೆ.</p><p>ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ನಾಪತ್ತೆಯಾಗಿದೆ ಎನ್ನಲಾದ ಪ್ರಕರಣವು ರಾಜ್ಯ ರಾಜಕೀಯದಲ್ಲಿ ವಿವಾದ ಎಬ್ಬಿಸಿದೆ.</p><p>ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ವಿಶೇಷ ತನಿಖಾ ತಂಡ (ಎಸ್ಐಟಿ), ತಿರುವಾಂಕೂರು ದೇವಸ್ವ ಮಂಡಳಿಯ ಇಬ್ಬರು ಮಾಜಿ ಅಧ್ಯಕ್ಷರು ಸೇರಿದಂತೆ ಹಲವರನ್ನು ಬಂಧಿಸಿದೆ.</p>.Sabarimala ಚಿನ್ನ ನಾಪತ್ತೆ ಪ್ರಕರಣ | ಪದ್ಮಕುಮಾರ್ 2 ದಿನ SIT ವಶಕ್ಕೆ: ಕೇರಳ HC.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>