<p><strong>ತಿರುವನಂತಪುರ</strong>: ಶಬರಿಮಲೆ ದೇವಾಲಯದ ದ್ವಾರಪಾಲಕ ಮೂರ್ತಿಯ ಪೀಠ ಕಾಣೆಯಾಗಿದ್ದರ ಹಿಂದೆ ಪಿತೂರಿ ನಡೆದಿದೆ ಎಂದು ಕೇರಳ ದೇವಸ್ವಂ ಸಚಿವ ವಿ.ಎನ್. ವಾಸವನ್ ಮತ್ತು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಆರೋಪಿಸಿದೆ. </p><p>ಪೀಠವನ್ನು ಕೊಡುಗೆಯಾಗಿ ನೀಡಿದ್ದ ವೆಂಜರ್ಮೂಡ್ನ ಉನ್ನಿಕೃಷ್ಣನ್ ಪೊಟ್ಟಿ ಅವರೇ ಪೀಠವನ್ನು ಮುಚ್ಚಿಡುವ ಮೂಲಕ ನಾಟಕವಾಡಿದ್ದು, ಟಿಡಿಬಿ ಕಸ್ಟಡಿಯಿಂದಲೇ ಕಾಣೆಯಾಗಿರುವುದಾಗಿ ಸುಳ್ಳು ಆರೋಪ ಮಾಡಿದ್ದಾರೆ ಎಂದು ವಾಸವನ್ ತಿಳಿಸಿದ್ದಾರೆ. </p><p>ಪ್ರಕರಣ ಸಂಬಂಧ ಕೇರಳ ಹೈಕೋರ್ಟ್ನ ನಿರ್ದೇಶನದ ಪ್ರಕಾರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.</p><p>ಶಬರಿಮಲೆ ದೇವಾಲಯದ ದ್ವಾರಪಾಲಕ ಮೂರ್ತಿಯ ಪೀಠವನ್ನು ಟಿಬಿಬಿ ವಿಚಕ್ಷಣ ವಿಭಾಗವು ತಿರುವನಂತಪುರದಲ್ಲಿ ವಶಕ್ಕೆ ಪಡೆದಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದರು. ಪೀಠವನ್ನು ಕೊಡುಗೆಯಾಗಿ ನೀಡಿದವರ ಸಂಬಂಧಿಕರ ಮನೆಯಿಂದ ಅದನ್ನು ಪತ್ತೆ ಮಾಡಲಾಗಿದೆ ಎಂದು ಅವರು ಹೇಳಿದ್ದರು.</p><p>ಟಿಡಿಬಿ ವಿಜಿಲೆನ್ಸ್ ಮತ್ತು ಪೊಲೀಸ್ ಅಧೀಕ್ಷಕ ಸುನಿಲ್ ಕುಮಾರ್ ವಿ. ಅವರ ನೇತೃತ್ವದ ತಂಡವು ಪೀಠವನ್ನು ಕೊಡುಗೆಯಾಗಿದ್ದ ನೀಡಿದ್ದ ವೆಂಜರ್ಮೂಡ್ನ ಉನ್ನಿಕೃಷ್ಣನ್ ಪೊಟ್ಟಿ ಅವರ ಸಂಬಂಧಿಕರ ಮನೆಯಲ್ಲಿ ಶನಿವಾರ ಪತ್ತೆ ಮಾಡಿತ್ತು.</p><p>ವಿ.ಎನ್. ವಾಸವನ್ ಆರೋಪವನ್ನು ಉನ್ನಿಕೃಷ್ಣನ್ ಪೊಟ್ಟಿ ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. </p>.ಕೇರಳ: ಕಾಣೆಯಾಗಿದ್ದ ಶಬರಿಮಲೆ ದ್ವಾರಪಾಲಕರ ಸ್ವರ್ಣಲೇಪಿತ ಪೀಠ ಪತ್ತೆ.ಶಬರಿಮಲೆ: ₹1,000 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆ ಘೋಷಣೆ.ಶಬರಿಮಲೆ | ದ್ವಾರಪಾಲಕ ಮೂರ್ತಿಯಲ್ಲಿ ಚಿನ್ನದ ತೂಕದಲ್ಲಿ ಕಡಿತ: ಹೈಕೋರ್ಟ್ ಕಿಡಿ.ಶಬರಿಮಲೆ: ಪ್ರಾಯೋಜಕತ್ವ ಸಮನ್ವಯಕಾರರ ನೇಮಕ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಶಬರಿಮಲೆ ದೇವಾಲಯದ ದ್ವಾರಪಾಲಕ ಮೂರ್ತಿಯ ಪೀಠ ಕಾಣೆಯಾಗಿದ್ದರ ಹಿಂದೆ ಪಿತೂರಿ ನಡೆದಿದೆ ಎಂದು ಕೇರಳ ದೇವಸ್ವಂ ಸಚಿವ ವಿ.ಎನ್. ವಾಸವನ್ ಮತ್ತು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಆರೋಪಿಸಿದೆ. </p><p>ಪೀಠವನ್ನು ಕೊಡುಗೆಯಾಗಿ ನೀಡಿದ್ದ ವೆಂಜರ್ಮೂಡ್ನ ಉನ್ನಿಕೃಷ್ಣನ್ ಪೊಟ್ಟಿ ಅವರೇ ಪೀಠವನ್ನು ಮುಚ್ಚಿಡುವ ಮೂಲಕ ನಾಟಕವಾಡಿದ್ದು, ಟಿಡಿಬಿ ಕಸ್ಟಡಿಯಿಂದಲೇ ಕಾಣೆಯಾಗಿರುವುದಾಗಿ ಸುಳ್ಳು ಆರೋಪ ಮಾಡಿದ್ದಾರೆ ಎಂದು ವಾಸವನ್ ತಿಳಿಸಿದ್ದಾರೆ. </p><p>ಪ್ರಕರಣ ಸಂಬಂಧ ಕೇರಳ ಹೈಕೋರ್ಟ್ನ ನಿರ್ದೇಶನದ ಪ್ರಕಾರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.</p><p>ಶಬರಿಮಲೆ ದೇವಾಲಯದ ದ್ವಾರಪಾಲಕ ಮೂರ್ತಿಯ ಪೀಠವನ್ನು ಟಿಬಿಬಿ ವಿಚಕ್ಷಣ ವಿಭಾಗವು ತಿರುವನಂತಪುರದಲ್ಲಿ ವಶಕ್ಕೆ ಪಡೆದಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದರು. ಪೀಠವನ್ನು ಕೊಡುಗೆಯಾಗಿ ನೀಡಿದವರ ಸಂಬಂಧಿಕರ ಮನೆಯಿಂದ ಅದನ್ನು ಪತ್ತೆ ಮಾಡಲಾಗಿದೆ ಎಂದು ಅವರು ಹೇಳಿದ್ದರು.</p><p>ಟಿಡಿಬಿ ವಿಜಿಲೆನ್ಸ್ ಮತ್ತು ಪೊಲೀಸ್ ಅಧೀಕ್ಷಕ ಸುನಿಲ್ ಕುಮಾರ್ ವಿ. ಅವರ ನೇತೃತ್ವದ ತಂಡವು ಪೀಠವನ್ನು ಕೊಡುಗೆಯಾಗಿದ್ದ ನೀಡಿದ್ದ ವೆಂಜರ್ಮೂಡ್ನ ಉನ್ನಿಕೃಷ್ಣನ್ ಪೊಟ್ಟಿ ಅವರ ಸಂಬಂಧಿಕರ ಮನೆಯಲ್ಲಿ ಶನಿವಾರ ಪತ್ತೆ ಮಾಡಿತ್ತು.</p><p>ವಿ.ಎನ್. ವಾಸವನ್ ಆರೋಪವನ್ನು ಉನ್ನಿಕೃಷ್ಣನ್ ಪೊಟ್ಟಿ ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. </p>.ಕೇರಳ: ಕಾಣೆಯಾಗಿದ್ದ ಶಬರಿಮಲೆ ದ್ವಾರಪಾಲಕರ ಸ್ವರ್ಣಲೇಪಿತ ಪೀಠ ಪತ್ತೆ.ಶಬರಿಮಲೆ: ₹1,000 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆ ಘೋಷಣೆ.ಶಬರಿಮಲೆ | ದ್ವಾರಪಾಲಕ ಮೂರ್ತಿಯಲ್ಲಿ ಚಿನ್ನದ ತೂಕದಲ್ಲಿ ಕಡಿತ: ಹೈಕೋರ್ಟ್ ಕಿಡಿ.ಶಬರಿಮಲೆ: ಪ್ರಾಯೋಜಕತ್ವ ಸಮನ್ವಯಕಾರರ ನೇಮಕ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>