<p><strong>ಪತ್ತನಂತಿಟ್ಟ:</strong> ಶಬರಿಮಲೆಯ ಅಯ್ಯಪ್ಪ ದೇಗುಲ ದರ್ಶನಕ್ಕೆ ಬಂದಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಲಿಕಾಪ್ಟರ್ ನ ಚಕ್ರಗಳು ಹೊಸದಾಗಿ ನಿರ್ಮಿಸಲಾಗಿದ್ದ ಹೆಲಿಪ್ಯಾಡ್ ನಲ್ಲಿ ಹೂತು ಹೋಗಿರುವ ಘಟನೆ ಇಲ್ಲಿನ ಪ್ರಮಾದಂನಲ್ಲಿರುವ ರಾಜೀವ್ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದಿದೆ.</p>.ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಾರ್ಥನೆ.<p>ಬುಧವಾರ ಬೆಳಿಗ್ಗೆ ಅವರಿದ್ದ ಹೆಲಿಕಾಪ್ಟರ್ ನೂತನವಾಗಿ ನಿರ್ಮಿಸಲಾಗಿದ್ದ ಹೆಲಿಪ್ಯಾಡ್ ನಲ್ಲಿ ಲ್ಯಾಂಡ್ ಆಗಿತ್ತು.</p><p>ಪಂಪಾಗೆ ರಸ್ತೆ ಮಾರ್ಗ ಮೂಲಕ ರಾಷ್ಟ್ರಪತಿ ತೆರಳಿದ ಬಳಿಕ, ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಹೆಲಿಕಾಪ್ಟರ್ ಅನ್ನು ತಳ್ಳುವ ದೃಶ್ಯಗಳು ಟಿ.ವಿ ಮಾಧ್ಯಮಗಳಲ್ಲಿ ಪ್ರಸಾರವಾದವು.</p><p>ರಾಷ್ಟ್ರಪತಿಯವರ ಹೆಲಿಕಾಪ್ಟರ್ ಲ್ಯಾಂಡ್ ಮಾಡಲು ಸ್ಟೇಡಿಯಂ ಅನ್ನು ಕೊನೆಯ ಕ್ಷಣದಲ್ಲಿ ಗೊತ್ತುಪಡಿಸಲಾಗಿತ್ತು. ಹೀಗಾಗಿ ಮಂಗಳವಾರ ಕಾಂಕ್ರಿಟ್ ಬಳಸಿ ಹೆಲಿಪ್ಯಾಡ್ ನಿರ್ಮಿಸಲಾಗಿತ್ತು ಎಂದು ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು. <p>ಮೊದಲು ಪಂಪಾ ಸಮೀಪದ ನೀಲಕ್ಕಲ್ ನಲ್ಲಿ ಲ್ಯಾಂಡಿಂಗ್ ಮಾಡುವುದಾಗಿ ನಿಶ್ಚಯಿಸಲಾಗಿತ್ತು. ಆದರೆ ಹವಾಮಾನ ವೈಪರೀತ್ಯದ ಕಾರಣ ಸ್ಥಳ ಬದಲಿಸಲಾಗಿತ್ತು.</p><p>ಕಾಂಕ್ರಿಟ್ ಸರಿಯಾಗಿ ಗಟ್ಟಿಯಾಗಿರದಿದ್ದರಿಂದ ಹೆಲಿಕಾಪ್ಟರ್ ನ ಭಾರ ತಾಳಲಾಗದೆ ಚಕ್ರಗಳು ಹೂತು ಹೋದವು ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ನಾಲ್ಕು ದಿನಗಳ ಕೇರಳ ಪ್ರವಾಸಕ್ಕೆ ಬಂದಿರುವ ಅವರು, ಪತ್ತನಂತಿಟ್ಟ ಜಿಲ್ಲೆಯ ಶಬರಿಮಲೆಯಲ್ಲಿರುವ ಅಯ್ಯಪ್ಪ ದೇಗುಲವನ್ನು ಸಂದರ್ಶಿಸಿದರು. </p> .ಸ್ಮಾರ್ಟ್ ತರಗತಿಗಳಿಗಿಂತ ಸ್ಮಾರ್ಟ್ ಶಿಕ್ಷಕರು ಎಲ್ಲಕ್ಕಿಂತ ಮುಖ್ಯ: ಮುರ್ಮು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪತ್ತನಂತಿಟ್ಟ:</strong> ಶಬರಿಮಲೆಯ ಅಯ್ಯಪ್ಪ ದೇಗುಲ ದರ್ಶನಕ್ಕೆ ಬಂದಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಲಿಕಾಪ್ಟರ್ ನ ಚಕ್ರಗಳು ಹೊಸದಾಗಿ ನಿರ್ಮಿಸಲಾಗಿದ್ದ ಹೆಲಿಪ್ಯಾಡ್ ನಲ್ಲಿ ಹೂತು ಹೋಗಿರುವ ಘಟನೆ ಇಲ್ಲಿನ ಪ್ರಮಾದಂನಲ್ಲಿರುವ ರಾಜೀವ್ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದಿದೆ.</p>.ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಾರ್ಥನೆ.<p>ಬುಧವಾರ ಬೆಳಿಗ್ಗೆ ಅವರಿದ್ದ ಹೆಲಿಕಾಪ್ಟರ್ ನೂತನವಾಗಿ ನಿರ್ಮಿಸಲಾಗಿದ್ದ ಹೆಲಿಪ್ಯಾಡ್ ನಲ್ಲಿ ಲ್ಯಾಂಡ್ ಆಗಿತ್ತು.</p><p>ಪಂಪಾಗೆ ರಸ್ತೆ ಮಾರ್ಗ ಮೂಲಕ ರಾಷ್ಟ್ರಪತಿ ತೆರಳಿದ ಬಳಿಕ, ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಹೆಲಿಕಾಪ್ಟರ್ ಅನ್ನು ತಳ್ಳುವ ದೃಶ್ಯಗಳು ಟಿ.ವಿ ಮಾಧ್ಯಮಗಳಲ್ಲಿ ಪ್ರಸಾರವಾದವು.</p><p>ರಾಷ್ಟ್ರಪತಿಯವರ ಹೆಲಿಕಾಪ್ಟರ್ ಲ್ಯಾಂಡ್ ಮಾಡಲು ಸ್ಟೇಡಿಯಂ ಅನ್ನು ಕೊನೆಯ ಕ್ಷಣದಲ್ಲಿ ಗೊತ್ತುಪಡಿಸಲಾಗಿತ್ತು. ಹೀಗಾಗಿ ಮಂಗಳವಾರ ಕಾಂಕ್ರಿಟ್ ಬಳಸಿ ಹೆಲಿಪ್ಯಾಡ್ ನಿರ್ಮಿಸಲಾಗಿತ್ತು ಎಂದು ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು. <p>ಮೊದಲು ಪಂಪಾ ಸಮೀಪದ ನೀಲಕ್ಕಲ್ ನಲ್ಲಿ ಲ್ಯಾಂಡಿಂಗ್ ಮಾಡುವುದಾಗಿ ನಿಶ್ಚಯಿಸಲಾಗಿತ್ತು. ಆದರೆ ಹವಾಮಾನ ವೈಪರೀತ್ಯದ ಕಾರಣ ಸ್ಥಳ ಬದಲಿಸಲಾಗಿತ್ತು.</p><p>ಕಾಂಕ್ರಿಟ್ ಸರಿಯಾಗಿ ಗಟ್ಟಿಯಾಗಿರದಿದ್ದರಿಂದ ಹೆಲಿಕಾಪ್ಟರ್ ನ ಭಾರ ತಾಳಲಾಗದೆ ಚಕ್ರಗಳು ಹೂತು ಹೋದವು ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ನಾಲ್ಕು ದಿನಗಳ ಕೇರಳ ಪ್ರವಾಸಕ್ಕೆ ಬಂದಿರುವ ಅವರು, ಪತ್ತನಂತಿಟ್ಟ ಜಿಲ್ಲೆಯ ಶಬರಿಮಲೆಯಲ್ಲಿರುವ ಅಯ್ಯಪ್ಪ ದೇಗುಲವನ್ನು ಸಂದರ್ಶಿಸಿದರು. </p> .ಸ್ಮಾರ್ಟ್ ತರಗತಿಗಳಿಗಿಂತ ಸ್ಮಾರ್ಟ್ ಶಿಕ್ಷಕರು ಎಲ್ಲಕ್ಕಿಂತ ಮುಖ್ಯ: ಮುರ್ಮು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>