<p><strong>ಪತ್ತನಂತಿಟ್ಟ</strong>: ವಾರ್ಷಿಕ ಮಂಡಲಂ– ಮಕರವಿಳಕ್ಕು ತೀರ್ಥಯಾತ್ರೆಯ ಋತುವಿನ ಪೂರ್ವಭಾವಿಯಾಗಿ ಶಬರಿಮಲೆಯ ಅಯ್ಯಪ್ಪ ದೇವಾಲಯವನ್ನು ಭಾನುವಾರ ಸಂಜೆ ತೆರೆಯಲಾಯಿತು.</p>.<p>ಎರಡು ತಿಂಗಳಿಗೂ ಹೆಚ್ಚು ಕಾಲ ನಡೆಯುವ ತೀರ್ಥಯಾತ್ರೆಯು ವೃಶ್ಚಿಕದ ಮಲಯಾಳಂ ಮಾಸದ ಮೊದಲ ದಿನವಾದ ಸೋಮವಾರದಂದು ಪ್ರಾರಂಭವಾಗುತ್ತದೆ.</p>.<p>ದೇಗುಲವನ್ನು ತೆರೆದಾಕ್ಷಣ ಪೂಜೆ ಸಲ್ಲಿಸಲು ನೂರಾರು ಭಕ್ತರು ಧಾವಿಸಿದ್ದರಿಂದ ಸನ್ನಿಧಾನ (ದೇವಾಲಯ ಸಂಕೀರ್ಣ), ಚಾರಣ ಮಾರ್ಗಗಳು ಮತ್ತು ಮೂಲ ಶಿಬಿರಗಳಲ್ಲಿ ಭಾನುವಾರ ಭಾರೀ ಜನದಟ್ಟಣೆ ಕಂಡುಬಂತು.</p>.<p>ತಂತ್ರಿ (ಪ್ರಧಾನ ಅರ್ಚಕ) ಮಹೇಶ್ ಮೋಹನರು, ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಅಧಿಕಾರಿಗಳು ಮತ್ತು ಭಕ್ತರ ಸಮ್ಮುಖದಲ್ಲಿ ಮುಖ್ಯ ಅರ್ಚಕ ಅರುಣ್ ಕುಮಾರ್ ನಂಬೂದರಿ ಅವರು ಗರ್ಭಗುಡಿಯನ್ನು ತೆರೆದಾಗ ದೇವಾಲಯದ ಆವರಣವು ಅಯ್ಯಪ್ಪನ ಮಂತ್ರಗಳಿಂದ ಪ್ರತಿಧ್ವನಿಸಿತು.</p>.<p class="title">ಶಬರಿಮಲೆ ಮತ್ತು ಮಲಿಕಪ್ಪುರಂ ದೇವಾಲಯಗಳಿಗೆ ಹೊಸದಾಗಿ ನೇಮಕಗೊಂಡ ಮುಖ್ಯ ಅರ್ಚಕರಾದ ಇ.ಡಿ. ಪ್ರಸಾದ್ ಮತ್ತು ಎಂ.ಜಿ. ಮನು ಅವರ ಪ್ರತಿಷ್ಠಾಪನಾ ಸಮಾರಂಭವೂ ಇದೇ ವೇಳೆ ನಡೆಯಿತು.</p>.<p class="title">ಜನದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಅಧಿಕಾರಿಗಳು ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ದೈನಂದಿನ ಯಾತ್ರಾರ್ಥಿಗಳ ಸಂಖ್ಯೆಯನ್ನು 90 ಸಾವಿರದಿಂದ 70 ಸಾವಿರಕ್ಕೆ ಮತ್ತು ಸ್ಥಳದಲ್ಲೇ ಬುಕ್ಕಿಂಗ್ ಮೂಲಕ 20 ಸಾವಿರಕ್ಕೆ ಸೀಮಿತಗೊಳಿಸಿದ್ದಾರೆ.</p>.<p>ದೇವಾಲಯವು ಬೆಳಗಿನ ಜಾವ 3 ಗಂಟೆಯಿಂದ ರಾತ್ರಿ 11ರವರೆಗೆ ತೆರೆದಿರುತ್ತದೆ. ಇದು ಅಯ್ಯಪ್ಪ ದೇವರ ಸಾಂಪ್ರದಾಯಿಕ ಹಾಡು ‘ಹರಿವರಾಸನಂ’ ಪಠಣದೊಂದಿಗೆ ಕೊನೆಗೊಳ್ಳುತ್ತದೆ.</p>.<p>‘ಭಕ್ತರನ್ನು ಸ್ವಾಗತಿಸಲು ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಪಾದಯಾತ್ರೆ ಮೂಲಕ ದೇವಾಲಯ ತಲುಪುವ ಯಾತ್ರಾರ್ಥಿಗಳಿಗೆ ಕುಡಿಯುವ ನೀರು, ಒಣ ಶುಂಠಿ ನೀರು ಮತ್ತು ಬಿಸಿನೀರನ್ನು ವಿತರಿಸುವ ಕೇಂದ್ರಗಳು ಹಾಗೂ ವಿಶ್ರಾಂತಿಗೆ ಬೆಂಚು ಸೌಲಭ್ಯ ಕಲ್ಪಿಸಲಾಗಿದೆ’ ಎಂದು ಟಿಡಿಬಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪತ್ತನಂತಿಟ್ಟ</strong>: ವಾರ್ಷಿಕ ಮಂಡಲಂ– ಮಕರವಿಳಕ್ಕು ತೀರ್ಥಯಾತ್ರೆಯ ಋತುವಿನ ಪೂರ್ವಭಾವಿಯಾಗಿ ಶಬರಿಮಲೆಯ ಅಯ್ಯಪ್ಪ ದೇವಾಲಯವನ್ನು ಭಾನುವಾರ ಸಂಜೆ ತೆರೆಯಲಾಯಿತು.</p>.<p>ಎರಡು ತಿಂಗಳಿಗೂ ಹೆಚ್ಚು ಕಾಲ ನಡೆಯುವ ತೀರ್ಥಯಾತ್ರೆಯು ವೃಶ್ಚಿಕದ ಮಲಯಾಳಂ ಮಾಸದ ಮೊದಲ ದಿನವಾದ ಸೋಮವಾರದಂದು ಪ್ರಾರಂಭವಾಗುತ್ತದೆ.</p>.<p>ದೇಗುಲವನ್ನು ತೆರೆದಾಕ್ಷಣ ಪೂಜೆ ಸಲ್ಲಿಸಲು ನೂರಾರು ಭಕ್ತರು ಧಾವಿಸಿದ್ದರಿಂದ ಸನ್ನಿಧಾನ (ದೇವಾಲಯ ಸಂಕೀರ್ಣ), ಚಾರಣ ಮಾರ್ಗಗಳು ಮತ್ತು ಮೂಲ ಶಿಬಿರಗಳಲ್ಲಿ ಭಾನುವಾರ ಭಾರೀ ಜನದಟ್ಟಣೆ ಕಂಡುಬಂತು.</p>.<p>ತಂತ್ರಿ (ಪ್ರಧಾನ ಅರ್ಚಕ) ಮಹೇಶ್ ಮೋಹನರು, ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಅಧಿಕಾರಿಗಳು ಮತ್ತು ಭಕ್ತರ ಸಮ್ಮುಖದಲ್ಲಿ ಮುಖ್ಯ ಅರ್ಚಕ ಅರುಣ್ ಕುಮಾರ್ ನಂಬೂದರಿ ಅವರು ಗರ್ಭಗುಡಿಯನ್ನು ತೆರೆದಾಗ ದೇವಾಲಯದ ಆವರಣವು ಅಯ್ಯಪ್ಪನ ಮಂತ್ರಗಳಿಂದ ಪ್ರತಿಧ್ವನಿಸಿತು.</p>.<p class="title">ಶಬರಿಮಲೆ ಮತ್ತು ಮಲಿಕಪ್ಪುರಂ ದೇವಾಲಯಗಳಿಗೆ ಹೊಸದಾಗಿ ನೇಮಕಗೊಂಡ ಮುಖ್ಯ ಅರ್ಚಕರಾದ ಇ.ಡಿ. ಪ್ರಸಾದ್ ಮತ್ತು ಎಂ.ಜಿ. ಮನು ಅವರ ಪ್ರತಿಷ್ಠಾಪನಾ ಸಮಾರಂಭವೂ ಇದೇ ವೇಳೆ ನಡೆಯಿತು.</p>.<p class="title">ಜನದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಅಧಿಕಾರಿಗಳು ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ದೈನಂದಿನ ಯಾತ್ರಾರ್ಥಿಗಳ ಸಂಖ್ಯೆಯನ್ನು 90 ಸಾವಿರದಿಂದ 70 ಸಾವಿರಕ್ಕೆ ಮತ್ತು ಸ್ಥಳದಲ್ಲೇ ಬುಕ್ಕಿಂಗ್ ಮೂಲಕ 20 ಸಾವಿರಕ್ಕೆ ಸೀಮಿತಗೊಳಿಸಿದ್ದಾರೆ.</p>.<p>ದೇವಾಲಯವು ಬೆಳಗಿನ ಜಾವ 3 ಗಂಟೆಯಿಂದ ರಾತ್ರಿ 11ರವರೆಗೆ ತೆರೆದಿರುತ್ತದೆ. ಇದು ಅಯ್ಯಪ್ಪ ದೇವರ ಸಾಂಪ್ರದಾಯಿಕ ಹಾಡು ‘ಹರಿವರಾಸನಂ’ ಪಠಣದೊಂದಿಗೆ ಕೊನೆಗೊಳ್ಳುತ್ತದೆ.</p>.<p>‘ಭಕ್ತರನ್ನು ಸ್ವಾಗತಿಸಲು ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಪಾದಯಾತ್ರೆ ಮೂಲಕ ದೇವಾಲಯ ತಲುಪುವ ಯಾತ್ರಾರ್ಥಿಗಳಿಗೆ ಕುಡಿಯುವ ನೀರು, ಒಣ ಶುಂಠಿ ನೀರು ಮತ್ತು ಬಿಸಿನೀರನ್ನು ವಿತರಿಸುವ ಕೇಂದ್ರಗಳು ಹಾಗೂ ವಿಶ್ರಾಂತಿಗೆ ಬೆಂಚು ಸೌಲಭ್ಯ ಕಲ್ಪಿಸಲಾಗಿದೆ’ ಎಂದು ಟಿಡಿಬಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>