<p><strong>ಪತ್ತನಂತಿಟ್ಟ (ಕೇರಳ):</strong> ‘ಸಾಂಪ್ರದಾಯಿಕ ಅರಣ್ಯ ಮಾರ್ಗಗಳ ಮೂಲಕ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಬರುತ್ತಿರುವ ಭಕ್ತರ ಸಂಖ್ಯೆ ಗಣನೀಯವಾಗಿ ಏರುತ್ತಿದೆ’ ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ(ಟಿಡಿಬಿ) ಅಧಿಕಾರಿಗಳು ಭಾನುವಾರ ತಿಳಿಸಿದರು.</p>.<p>‘ಪ್ರಸ್ತುತ ಯಾತ್ರೆಯ ಅವಧಿಯಲ್ಲಿ ಈವರೆಗೆ ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯ ಭಕ್ತರು ವಿವಿಧ ಅರಣ್ಯ ಮಾರ್ಗಗಳ ಮೂಲಕ ಸನ್ನಿಧಾನಕ್ಕೆ ಬಂದಿದ್ದಾರೆ’ ಎಂದು ಅವರು ಹೇಳಿದರು.</p>.<p>‘ಅಳುತಕಡವು–ಪಂಪಾ ಮಾರ್ಗದಿಂದ ಪ್ರತಿದಿನ 1,500 ರಿಂದ 2000ರವರೆಗೆ ಒಟ್ಟು 37,059 ಭಕ್ತರು ಹಾಗೂ ಸತ್ರಂ ಮಾರ್ಗದಿಂದ ನಿತ್ಯ 4000ದಿಂದ 5000ದವರೆಗೆ ಒಟ್ಟು 64,776 ಮಂದಿ ಭಕ್ತರು ಬಂದಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು. </p>.<p>‘ಮುಂದಿನ ದಿನಗಳಲ್ಲಿ ಅರಣ್ಯ ಮಾರ್ಗದಿಂದ ಸನ್ನಿಧಾನಕ್ಕೆ ಬರುವ ಭಕ್ತರ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ನಿರೀಕ್ಷೆಯಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪತ್ತನಂತಿಟ್ಟ (ಕೇರಳ):</strong> ‘ಸಾಂಪ್ರದಾಯಿಕ ಅರಣ್ಯ ಮಾರ್ಗಗಳ ಮೂಲಕ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಬರುತ್ತಿರುವ ಭಕ್ತರ ಸಂಖ್ಯೆ ಗಣನೀಯವಾಗಿ ಏರುತ್ತಿದೆ’ ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ(ಟಿಡಿಬಿ) ಅಧಿಕಾರಿಗಳು ಭಾನುವಾರ ತಿಳಿಸಿದರು.</p>.<p>‘ಪ್ರಸ್ತುತ ಯಾತ್ರೆಯ ಅವಧಿಯಲ್ಲಿ ಈವರೆಗೆ ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯ ಭಕ್ತರು ವಿವಿಧ ಅರಣ್ಯ ಮಾರ್ಗಗಳ ಮೂಲಕ ಸನ್ನಿಧಾನಕ್ಕೆ ಬಂದಿದ್ದಾರೆ’ ಎಂದು ಅವರು ಹೇಳಿದರು.</p>.<p>‘ಅಳುತಕಡವು–ಪಂಪಾ ಮಾರ್ಗದಿಂದ ಪ್ರತಿದಿನ 1,500 ರಿಂದ 2000ರವರೆಗೆ ಒಟ್ಟು 37,059 ಭಕ್ತರು ಹಾಗೂ ಸತ್ರಂ ಮಾರ್ಗದಿಂದ ನಿತ್ಯ 4000ದಿಂದ 5000ದವರೆಗೆ ಒಟ್ಟು 64,776 ಮಂದಿ ಭಕ್ತರು ಬಂದಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು. </p>.<p>‘ಮುಂದಿನ ದಿನಗಳಲ್ಲಿ ಅರಣ್ಯ ಮಾರ್ಗದಿಂದ ಸನ್ನಿಧಾನಕ್ಕೆ ಬರುವ ಭಕ್ತರ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ನಿರೀಕ್ಷೆಯಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>