<p><strong>ಕೊಲ್ಲಂ (ಕೇರಳ):</strong> ಶಬರಿಮಲೆ ದೇಗುಲದ ಚಿನ್ನ ಕಳವಿಗೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿ ಉಣ್ಣಿಕೃಷ್ಣನ್ ಪೋಟಿ ಅವರಿಗೆ ಕೇರಳದ ನ್ಯಾಯಾಲಯವೊಂದು ಬುಧವಾರ ಜಾಮೀನು ನೀಡಿದೆ.</p><p>ಚಿನ್ನ ಕಳವಿನ ಎರಡನೇ ಪ್ರಕರಣದಲ್ಲಿ ಕೇರಳದ ವಿಜಿಲೆನ್ಸ್ ನ್ಯಾಯಾಲಯವು ಕಾನೂನಿನ್ವಯ ಜಾಮೀನು ಮಂಜೂರು ಮಾಡಿದೆ. </p><p>ಇದೀಗ ಎರಡೂ ಪ್ರಕರಣಗಳಲ್ಲಿ ಜಾಮೀನು ದೊರೆತಿರುವುದರಿಂದ ಜೈಲಿನಿಂದ ಪೋಟಿ ಬಿಡುಗಡೆಯ ಹಾದಿ ಸುಗಮವಾಗಿದೆ. </p>.ಶಬರಿಮಲೆ ದೇವಸ್ಥಾನದ ಚಿನ್ನ ಕಳವು ಪ್ರಕರಣ: ಪೋಟಿ ನಿವಾಸದಲ್ಲಿ ಎಸ್ಐಟಿ ಶೋಧ.ಶಬರಿಮಲೆ ಚಿನ್ನ ಕಳವು ಪ್ರಕರಣ: ಪ್ರಮುಖ ಆರೋಪಿ ಉಣ್ಣಿಕೃಷ್ಣನ್ ಪೋಟಿ ಬಂಧನ.<p>ಶ್ರೀಕೋವಿಲ್ ಬಾಗಿಲು ಚೌಕಟ್ಟಿನ ಚಿನ್ನ ಕಳವು ಪ್ರಕರಣದಲ್ಲಿ ಜನವರಿ 21ರಂದು ಪೋಟಿ ಅವರಿಗೆ ಜಾಮೀನು ದೊರೆತಿತ್ತು. </p><p>ಪ್ರಕರಣ ದಾಖಲಾಗಿ 90 ದಿನ ಕಳೆದರೂ ಕಾನೂನಿನ್ವಯ ವಿಶೇಷ ತನಿಖಾ ತಂಡ (ಎಸ್ಐಟಿ) ದೋಷಾರೋಪ ಪಟ್ಟಿ ಸಲ್ಲಿಸದ ಕಾರಣ ಜಾಮೀನು ನೀಡಬೇಕು ಎಂದು ಪೋಟಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.</p><p>ಎಸ್ಐಟಿ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಸಿಜು ರಾಜನ್, ಪೋಟಿಗೆ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದ್ದರು. </p><p>ಎರಡು ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿಯು ಈವರೆಗೆ 12 ಮಂದಿಯನ್ನು ಬಂಧಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲ್ಲಂ (ಕೇರಳ):</strong> ಶಬರಿಮಲೆ ದೇಗುಲದ ಚಿನ್ನ ಕಳವಿಗೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿ ಉಣ್ಣಿಕೃಷ್ಣನ್ ಪೋಟಿ ಅವರಿಗೆ ಕೇರಳದ ನ್ಯಾಯಾಲಯವೊಂದು ಬುಧವಾರ ಜಾಮೀನು ನೀಡಿದೆ.</p><p>ಚಿನ್ನ ಕಳವಿನ ಎರಡನೇ ಪ್ರಕರಣದಲ್ಲಿ ಕೇರಳದ ವಿಜಿಲೆನ್ಸ್ ನ್ಯಾಯಾಲಯವು ಕಾನೂನಿನ್ವಯ ಜಾಮೀನು ಮಂಜೂರು ಮಾಡಿದೆ. </p><p>ಇದೀಗ ಎರಡೂ ಪ್ರಕರಣಗಳಲ್ಲಿ ಜಾಮೀನು ದೊರೆತಿರುವುದರಿಂದ ಜೈಲಿನಿಂದ ಪೋಟಿ ಬಿಡುಗಡೆಯ ಹಾದಿ ಸುಗಮವಾಗಿದೆ. </p>.ಶಬರಿಮಲೆ ದೇವಸ್ಥಾನದ ಚಿನ್ನ ಕಳವು ಪ್ರಕರಣ: ಪೋಟಿ ನಿವಾಸದಲ್ಲಿ ಎಸ್ಐಟಿ ಶೋಧ.ಶಬರಿಮಲೆ ಚಿನ್ನ ಕಳವು ಪ್ರಕರಣ: ಪ್ರಮುಖ ಆರೋಪಿ ಉಣ್ಣಿಕೃಷ್ಣನ್ ಪೋಟಿ ಬಂಧನ.<p>ಶ್ರೀಕೋವಿಲ್ ಬಾಗಿಲು ಚೌಕಟ್ಟಿನ ಚಿನ್ನ ಕಳವು ಪ್ರಕರಣದಲ್ಲಿ ಜನವರಿ 21ರಂದು ಪೋಟಿ ಅವರಿಗೆ ಜಾಮೀನು ದೊರೆತಿತ್ತು. </p><p>ಪ್ರಕರಣ ದಾಖಲಾಗಿ 90 ದಿನ ಕಳೆದರೂ ಕಾನೂನಿನ್ವಯ ವಿಶೇಷ ತನಿಖಾ ತಂಡ (ಎಸ್ಐಟಿ) ದೋಷಾರೋಪ ಪಟ್ಟಿ ಸಲ್ಲಿಸದ ಕಾರಣ ಜಾಮೀನು ನೀಡಬೇಕು ಎಂದು ಪೋಟಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.</p><p>ಎಸ್ಐಟಿ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಸಿಜು ರಾಜನ್, ಪೋಟಿಗೆ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದ್ದರು. </p><p>ಎರಡು ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿಯು ಈವರೆಗೆ 12 ಮಂದಿಯನ್ನು ಬಂಧಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>