<p><strong>ಕೊಲ್ಲಂ</strong>: ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಸ್ಥಾನದ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ, ಬೆಂಗಳೂರಿನ ಉದ್ಯಮಿ ಉಣ್ಣಿಕೃಷ್ಣನ್ ಪೋಟಿ ಅವರಿಗೆ ಸ್ಥಳೀಯ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತು. </p>.<p>ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರ ವಿಶೇಷ ತನಿಖಾ ತಂಡವು, (ಎಸ್ಐಟಿ) ಆರೋಪಿಯನ್ನು ಬಂಧಿಸಿದ 90 ದಿನಗಳ ಒಳಗಾಗಿ ನಿಯಮದಂತೆ ಆರೋಪಪಟ್ಟಿ ಸಲ್ಲಿಸಲು ವಿಫಲವಾಗಿರುವುದರಿಂದ ಜಾಮೀನು ನೀಡಲಾಗುತ್ತಿದೆ ಎಂದು ನ್ಯಾಯಾಲಯ ಹೇಳಿತು. </p>.<p>ಕೊಲ್ಲಂ ವಿಜಿಲೆನ್ಸ್ ಕೋರ್ಟ್ ನ್ಯಾಯಮೂರ್ತಿ ಮೋಹಿತ್ ಸಿ.ಎಸ್ ಅವರು, ಶ್ರೀಕೋವಿಲ್ನ (ಗರ್ಭಗುಡಿ) ಬಾಗಿಲಿನ ಚೌಕಟ್ಟುಗಳಲ್ಲಿನ ಚಿನ್ನ ಕಳವು ಪ್ರಕರಣದಲ್ಲಿ ಉಣ್ಣಿಕೃಷ್ಣನ್ಗೆ ಜಾಮೀನು ನೀಡಿ ಆದೇಶಿಸಿದರು. ಬಳಿಕ ಉಣ್ಣಿಕೃಷ್ಣನ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಯಿತು. </p>.<p>ದೇಗುಲದ ದ್ವಾರಪಾಲಕ ಮೂರ್ತಿಗಳ ಚಿನ್ನ ಲೇಪನದ ಕಳ್ಳತನದ ಪ್ರಕರಣದಲ್ಲಿ ಈ ಹಿಂದೆ ಉಣ್ಣಿಕೃಷ್ಣನ್ಗೆ ಜಾಮೀನು ನೀಡಲಾಗಿತ್ತು. ಆದರೆ ಶ್ರೀಕೋವಿಲ್ ಪ್ರಕರಣದಲ್ಲಿ ಅವರು ಬಂಧನಲ್ಲಿದ್ದರು. </p>
<p><strong>ಕೊಲ್ಲಂ</strong>: ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಸ್ಥಾನದ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ, ಬೆಂಗಳೂರಿನ ಉದ್ಯಮಿ ಉಣ್ಣಿಕೃಷ್ಣನ್ ಪೋಟಿ ಅವರಿಗೆ ಸ್ಥಳೀಯ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತು. </p>.<p>ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರ ವಿಶೇಷ ತನಿಖಾ ತಂಡವು, (ಎಸ್ಐಟಿ) ಆರೋಪಿಯನ್ನು ಬಂಧಿಸಿದ 90 ದಿನಗಳ ಒಳಗಾಗಿ ನಿಯಮದಂತೆ ಆರೋಪಪಟ್ಟಿ ಸಲ್ಲಿಸಲು ವಿಫಲವಾಗಿರುವುದರಿಂದ ಜಾಮೀನು ನೀಡಲಾಗುತ್ತಿದೆ ಎಂದು ನ್ಯಾಯಾಲಯ ಹೇಳಿತು. </p>.<p>ಕೊಲ್ಲಂ ವಿಜಿಲೆನ್ಸ್ ಕೋರ್ಟ್ ನ್ಯಾಯಮೂರ್ತಿ ಮೋಹಿತ್ ಸಿ.ಎಸ್ ಅವರು, ಶ್ರೀಕೋವಿಲ್ನ (ಗರ್ಭಗುಡಿ) ಬಾಗಿಲಿನ ಚೌಕಟ್ಟುಗಳಲ್ಲಿನ ಚಿನ್ನ ಕಳವು ಪ್ರಕರಣದಲ್ಲಿ ಉಣ್ಣಿಕೃಷ್ಣನ್ಗೆ ಜಾಮೀನು ನೀಡಿ ಆದೇಶಿಸಿದರು. ಬಳಿಕ ಉಣ್ಣಿಕೃಷ್ಣನ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಯಿತು. </p>.<p>ದೇಗುಲದ ದ್ವಾರಪಾಲಕ ಮೂರ್ತಿಗಳ ಚಿನ್ನ ಲೇಪನದ ಕಳ್ಳತನದ ಪ್ರಕರಣದಲ್ಲಿ ಈ ಹಿಂದೆ ಉಣ್ಣಿಕೃಷ್ಣನ್ಗೆ ಜಾಮೀನು ನೀಡಲಾಗಿತ್ತು. ಆದರೆ ಶ್ರೀಕೋವಿಲ್ ಪ್ರಕರಣದಲ್ಲಿ ಅವರು ಬಂಧನಲ್ಲಿದ್ದರು. </p>