<p><strong>ತಿರುವನಂತಪುರ:</strong> ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ 10ರಿಂದ 50 ವರ್ಷದ ಒಳಗಿನ ಮಹಿಳೆಯರಿಗೆ ಪ್ರವೇಶ ಕಲ್ಪಿಸುವುದನ್ನು ವಿರೋಧಿಸಿ ದೇವಸ್ಥಾನದ ಆಡಳಿತ ಮಂಡಳಿ ನಿರ್ಧಾರ ಕೈಗೊಂಡಿದೆ.</p>.<p>‘ದೇವಾಲಯಗಳು, ಅದರ ನಂಬಿಕೆ ಹಾಗೂ ಪದ್ಧತಿಗಳನ್ನು ರಕ್ಷಿಸಲು ಮಂಡಳಿಯು ಬದ್ಧವಾಗಿದೆ’ ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಅಧ್ಯಕ್ಷ ಕೆ. ಜಯಕುಮಾರ್ ತಿಳಿಸಿದ್ದಾರೆ.</p>.<p>‘10ರಿಂದ 50 ವರ್ಷದ ಒಳಗಿನ ಮಹಿಳೆಯರ ಪ್ರವೇಶ ನಿಷೇಧವನ್ನು ಮುಂದುವರಿಸಬೇಕು ಎಂದು ಸೋಮವಾರ ನಡೆದ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಮಂಡಳಿಯು ತನ್ನ ಈ ನಿಲುವನ್ನು ಸುಪ್ರೀಂ ಕೋರ್ಟ್ಗೆ ತಿಳಿಸಲಿದೆ’ ಎಂದು ಹೇಳಿದ್ದಾರೆ.</p>.<p>ಋತುಸ್ರಾವ ಆಗುವ ವಯಸ್ಸಿನ ಮಹಿಳೆಯರಿಗೆ ಕೂಡ ಶಬರಿಮಲೆ ದೇವಸ್ಥಾನ ಪ್ರವೇಶಿಸುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ 2018ರ ಸೆಪ್ಟೆಂಬರ್ನಲ್ಲಿ ತೀರ್ಪು ನೀಡಿತ್ತು.</p>.<p>ಈ ತೀರ್ಪಿಗೆ ಸಂಬಂಧಿಸಿದ ಮರುಪರಿಶೀಲನಾ ಅರ್ಜಿಗಳು ಪ್ರಸ್ತುತ ಸುಪ್ರೀಂ ಕೋರ್ಟ್ನ ಪರಿಗಣನೆಯಲ್ಲಿದ್ದು, ಮಾರ್ಚ್ 14ರ ಮೊದಲು ನಿಲುವು ತಿಳಿಸುವಂತೆ ರಾಜ್ಯ ಸರ್ಕಾರ ಸೇರಿದಂತೆ ಸಂಬಂಧಿಸಿದವರಿಗೆ ನ್ಯಾಯಾಲಯವು ಸೂಚಿಸಿತ್ತು.</p>.<p>ಸುಪ್ರೀಂ ಕೋರ್ಟ್ನ ತೀರ್ಪನ್ನು ಜಾರಿಗೊಳಿಸುವುದಾಗಿ ಆಡಳಿತಾರೂಢ ಎಲ್ಡಿಎಫ್ ಸರ್ಕಾರ ಹಾಗೂ ಟಿಡಿಬಿ ತಿಳಿಸಿದ್ದವು. ಈ ನಿರ್ಧಾರವು ಬಿಜೆಪಿ ಮತ್ತು ಸಂಘ ಪರಿವಾರದ ಸಂಘಟನೆಗಳ ಹಿಂಸಾತ್ಮಕ ಪ್ರತಿಭಟನೆಗೂ ಕಾರಣವಾಗಿತ್ತು.</p>.<p>ಇದೀಗ, ಟಿಡಿಬಿ ತನ್ನ ನಿಲುವು ಬದಲಿಸಿದೆ. ಆಡಳಿತಾರೂಢ ಸಿಪಿಎಂ ನೇತೃತ್ವದ ಎಲ್ಡಿಎಫ್ ಒಕ್ಕೂಟ ಸರ್ಕಾರವು ತನ್ನ ನಿಲುವನ್ನು ಇನ್ನೂ ಸ್ಪಷ್ಟಪಡಿಸಿಲ್ಲ.</p>.<p>ಬಿಂದು ಅಮ್ಮಿನಿ, ಕನಕದುರ್ಗ ಎಂಬ ಇಬ್ಬರು ಮಹಿಳೆಯರು 2019ರ ಜನವರಿ 2ರಂದು ಪೊಲೀಸ್ ರಕ್ಷಣೆಯೊಂದಿಗೆ ದೇಗುಲ ಪ್ರವೇಶಿಸಿದ್ದರು.</p>.<p>ಕೇರಳದಲ್ಲಿ ಶೀಘ್ರದಲ್ಲೇ ವಿಧಾನಸಭಾ ಚುನಾವಣೆ ನಡೆಯಲಿದ್ದು, ಆಡಳಿತಾರೂಢ ಎಲ್ಡಿಎಫ್ ಸಹ ತನ್ನ ನಿಲುವಿನಲ್ಲಿ ಬದಲಾವಣೆ ಮಾಡಿಕೊಳ್ಳಬಹುದು ಎನ್ನಲಾಗುತ್ತಿದೆ.</p>.<p>‘ಭಕ್ತರ ನಂಬಿಕೆಯನ್ನು ರಕ್ಷಿಸಲು ಸರ್ಕಾರ ಬದ್ಧ’ ಎಂದು ಕಾನೂನು ಸಚಿವ ಪಿ. ರಾಜೀವ್ ಈಚೆಗೆ ಪ್ರತಿಕ್ರಿಯಿಸಿದ್ದರು. ಸಚಿವರ ಈ ಹೇಳಿಕೆಯು, ‘ಪ್ರಗತಿಪರ ನಿಲುವಿನಿಂದ ಹಿಮ್ಮುಖವಾಗುವುದು’ ಎಂದೇ ವ್ಯಾಖ್ಯಾನಿಸಲಾಗಿದೆ.</p>.<div><blockquote>ದೇವಸ್ವಂನ ನಿಲುವು ಒಂದೇ. ಸಂಪ್ರದಾಯ ರಕ್ಷಿಸಬೇಕು ಮತ್ತು ಅನುಸರಿಸಬೇಕು </blockquote><span class="attribution">–ಕೆ. ಜಯಕುಮಾರ್, ಟಿಡಿಬಿ ಅಧ್ಯಕ್ಷ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ 10ರಿಂದ 50 ವರ್ಷದ ಒಳಗಿನ ಮಹಿಳೆಯರಿಗೆ ಪ್ರವೇಶ ಕಲ್ಪಿಸುವುದನ್ನು ವಿರೋಧಿಸಿ ದೇವಸ್ಥಾನದ ಆಡಳಿತ ಮಂಡಳಿ ನಿರ್ಧಾರ ಕೈಗೊಂಡಿದೆ.</p>.<p>‘ದೇವಾಲಯಗಳು, ಅದರ ನಂಬಿಕೆ ಹಾಗೂ ಪದ್ಧತಿಗಳನ್ನು ರಕ್ಷಿಸಲು ಮಂಡಳಿಯು ಬದ್ಧವಾಗಿದೆ’ ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಅಧ್ಯಕ್ಷ ಕೆ. ಜಯಕುಮಾರ್ ತಿಳಿಸಿದ್ದಾರೆ.</p>.<p>‘10ರಿಂದ 50 ವರ್ಷದ ಒಳಗಿನ ಮಹಿಳೆಯರ ಪ್ರವೇಶ ನಿಷೇಧವನ್ನು ಮುಂದುವರಿಸಬೇಕು ಎಂದು ಸೋಮವಾರ ನಡೆದ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಮಂಡಳಿಯು ತನ್ನ ಈ ನಿಲುವನ್ನು ಸುಪ್ರೀಂ ಕೋರ್ಟ್ಗೆ ತಿಳಿಸಲಿದೆ’ ಎಂದು ಹೇಳಿದ್ದಾರೆ.</p>.<p>ಋತುಸ್ರಾವ ಆಗುವ ವಯಸ್ಸಿನ ಮಹಿಳೆಯರಿಗೆ ಕೂಡ ಶಬರಿಮಲೆ ದೇವಸ್ಥಾನ ಪ್ರವೇಶಿಸುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ 2018ರ ಸೆಪ್ಟೆಂಬರ್ನಲ್ಲಿ ತೀರ್ಪು ನೀಡಿತ್ತು.</p>.<p>ಈ ತೀರ್ಪಿಗೆ ಸಂಬಂಧಿಸಿದ ಮರುಪರಿಶೀಲನಾ ಅರ್ಜಿಗಳು ಪ್ರಸ್ತುತ ಸುಪ್ರೀಂ ಕೋರ್ಟ್ನ ಪರಿಗಣನೆಯಲ್ಲಿದ್ದು, ಮಾರ್ಚ್ 14ರ ಮೊದಲು ನಿಲುವು ತಿಳಿಸುವಂತೆ ರಾಜ್ಯ ಸರ್ಕಾರ ಸೇರಿದಂತೆ ಸಂಬಂಧಿಸಿದವರಿಗೆ ನ್ಯಾಯಾಲಯವು ಸೂಚಿಸಿತ್ತು.</p>.<p>ಸುಪ್ರೀಂ ಕೋರ್ಟ್ನ ತೀರ್ಪನ್ನು ಜಾರಿಗೊಳಿಸುವುದಾಗಿ ಆಡಳಿತಾರೂಢ ಎಲ್ಡಿಎಫ್ ಸರ್ಕಾರ ಹಾಗೂ ಟಿಡಿಬಿ ತಿಳಿಸಿದ್ದವು. ಈ ನಿರ್ಧಾರವು ಬಿಜೆಪಿ ಮತ್ತು ಸಂಘ ಪರಿವಾರದ ಸಂಘಟನೆಗಳ ಹಿಂಸಾತ್ಮಕ ಪ್ರತಿಭಟನೆಗೂ ಕಾರಣವಾಗಿತ್ತು.</p>.<p>ಇದೀಗ, ಟಿಡಿಬಿ ತನ್ನ ನಿಲುವು ಬದಲಿಸಿದೆ. ಆಡಳಿತಾರೂಢ ಸಿಪಿಎಂ ನೇತೃತ್ವದ ಎಲ್ಡಿಎಫ್ ಒಕ್ಕೂಟ ಸರ್ಕಾರವು ತನ್ನ ನಿಲುವನ್ನು ಇನ್ನೂ ಸ್ಪಷ್ಟಪಡಿಸಿಲ್ಲ.</p>.<p>ಬಿಂದು ಅಮ್ಮಿನಿ, ಕನಕದುರ್ಗ ಎಂಬ ಇಬ್ಬರು ಮಹಿಳೆಯರು 2019ರ ಜನವರಿ 2ರಂದು ಪೊಲೀಸ್ ರಕ್ಷಣೆಯೊಂದಿಗೆ ದೇಗುಲ ಪ್ರವೇಶಿಸಿದ್ದರು.</p>.<p>ಕೇರಳದಲ್ಲಿ ಶೀಘ್ರದಲ್ಲೇ ವಿಧಾನಸಭಾ ಚುನಾವಣೆ ನಡೆಯಲಿದ್ದು, ಆಡಳಿತಾರೂಢ ಎಲ್ಡಿಎಫ್ ಸಹ ತನ್ನ ನಿಲುವಿನಲ್ಲಿ ಬದಲಾವಣೆ ಮಾಡಿಕೊಳ್ಳಬಹುದು ಎನ್ನಲಾಗುತ್ತಿದೆ.</p>.<p>‘ಭಕ್ತರ ನಂಬಿಕೆಯನ್ನು ರಕ್ಷಿಸಲು ಸರ್ಕಾರ ಬದ್ಧ’ ಎಂದು ಕಾನೂನು ಸಚಿವ ಪಿ. ರಾಜೀವ್ ಈಚೆಗೆ ಪ್ರತಿಕ್ರಿಯಿಸಿದ್ದರು. ಸಚಿವರ ಈ ಹೇಳಿಕೆಯು, ‘ಪ್ರಗತಿಪರ ನಿಲುವಿನಿಂದ ಹಿಮ್ಮುಖವಾಗುವುದು’ ಎಂದೇ ವ್ಯಾಖ್ಯಾನಿಸಲಾಗಿದೆ.</p>.<div><blockquote>ದೇವಸ್ವಂನ ನಿಲುವು ಒಂದೇ. ಸಂಪ್ರದಾಯ ರಕ್ಷಿಸಬೇಕು ಮತ್ತು ಅನುಸರಿಸಬೇಕು </blockquote><span class="attribution">–ಕೆ. ಜಯಕುಮಾರ್, ಟಿಡಿಬಿ ಅಧ್ಯಕ್ಷ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>