<p><strong>ಪತ್ತನಂತಿಟ್ಟ:</strong> ಇಲ್ಲಿನ ಶಬರಿಮಲೆಯಲ್ಲಿರುವ ಅಯ್ಯಪ್ಪ ದೇಗುಲದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಬುಧವಾರ ಪಾರ್ಥನೆ ಮಾಡಿದರು.</p>.ಶಬರಿಮಲೆ ದೇವಸ್ಥಾನದ ಚಿನ್ನ ಕಳವು ಪ್ರಕರಣ: ಹೈಕೋರ್ಟ್ಗೆ SIT ಮೊದಲ ವರದಿ ಸಲ್ಲಿಕೆ.<p>ಆ ಮೂಲಕ ದೇಶದ ಮಹಿಳಾ ಮುಖ್ಯಸ್ಥರೊಬ್ಬರು ಇದೇ ಮೊದಲ ಬಾರಿಗೆ ಈ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದಂತಾಯಿತು. ಅಲ್ಲದೇ ದ್ರೌಪದಿ ಮುರ್ಮು ಅವರು ಶಬರಿಮಲೆಗೆ ಭೇಟಿ ನೀಡಿದ ದೇಶದ ಎರಡನೇ ರಾಷ್ಟ್ರಪತಿ. ಈ ಹಿಂದೆ 1970ರಲ್ಲಿ ಅಂದಿನ ರಾಷ್ಟ್ರಪತಿ ವಿ.ವಿ ಗಿರಿಯವರು ಶಬರಿಮಲೆಗೆ ಭೇಟಿ ನೀಡಿದ್ದರು. ಅವರು ಡೋಲಿ ಮೂಲಕ ಅಯ್ಯಪ್ಪ ಸನ್ನಿಧಿಗೆ ತೆರಳಿದ್ದರು.</p><p>ಬೆಳಿಗ್ಗೆ 11 ಗಂಟೆಗೆ ಪಂಪಾ ತಲುಪಿದ ಅವರು, ಪಂಪಾ ನದಿಯಲ್ಲಿ ಕಾಲು ತೊಳೆದು, ಅಲ್ಲಿಯೇ ಸಮೀಪ ಇರುವ ಗಣಪತಿ ದೇಗುಲ ಸಹಿತ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿದರು.</p><p>ಗಣಪತಿ ದೇಗುಲದ ಮೇಲ್ ಶಾಂತಿ ವಿಷ್ಣು ನಂಬೂದರಿಯವರು ಮುರ್ಮು ಅವರ ‘ಇರುಮುಡಿ’ ಕಟ್ಟಿದರು. ಮುರ್ಮು ಕಪ್ಪು ಸೀರೆ ಧರಿಸಿದ್ದರು.</p>.ಶಬರಿಮಲೆ ದೇವಸ್ಥಾನದ ಚಿನ್ನ ಕಳವು ಪ್ರಕರಣ: ಪೋಟಿ ನಿವಾಸದಲ್ಲಿ ಎಸ್ಐಟಿ ಶೋಧ.<p>ರಾಷ್ಟ್ರಪತಿ ಜೊತೆಗೆ ಎಡಿಸಿ ಸೌರಭ್ ಎಸ್. ನಾಯರ್, ಪಿಎಸ್ಒ ವಿನಯ್ ಮಥೂರ್, ಅಳಿಯ ಗಣೇಶ್ ಚಂದ್ರ ಹೊಂಬ್ರಮ್ ಕೂಡ ಇರುಮಡಿ ಹೊತ್ತು ದರ್ಶನ ಪಡೆದರು ಎಂದು ಜಿಲ್ಲೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p>ಇರುಮುಡಿ ಹೊತ್ತು ದೇಗುಲದ ಸಮೀದ ಈಡುಗಾಯಿ ಒಡೆದರು. ನಾಲ್ಕು ಚಕ್ರದ ವಿಶೇಷ ವಾಹನದ ಮೂಲಕ ಸನ್ನಿಧಾನಕ್ಕೆ ತೆರಳಿದರು. ಸನ್ನಿಧಾನದ 18 ಮೆಟ್ಟಿಲುಗಳನ್ನು ಏರಿದರು. ಅಲ್ಲಿ ಅವರನ್ನು ದೇವಸ್ವಂ ಸಚಿವ ವಿ.ಎನ್ ವಾಸವನ್ ಹಾಗೂ ಟ್ರಾವಂಕೂರ್ ದೇವಸ್ವಂ ಬೋರ್ಡ್ ನ (ಟಿಡಿಬಿ) ಅಧ್ಯಕ್ಷ ಪಿ.ಎಸ್ ಪ್ರಶಾಂತ್ ಸ್ವಾಗತಿಸಿದರು. ದೇವಸ್ಥಾನದ ತಂತ್ರಿ ಕಂದರಾರು ಮಹೇಶ್ ಮೊಹನಾರು ಅವರು ರಾಷ್ಟ್ರಪತಿಗೆ ಪೂರ್ಣಕುಂಭ ಸ್ವಾಗತ ನೀಡಿದರು.</p>.ಶಬರಿಮಲೆ ಕುರಿತ ವಿವಾದಗಳು ಅಯ್ಯಪ್ಪ ಭಕ್ತರ ಮೇಲೆ ಪರಿಣಾಮ ಬೀರಿಲ್ಲ: ಟಿಡಿಬಿ.<p>ದರ್ಶನ ಪಡೆದ ಬಳಿಕ, ದೇಗುಲದ ಮೆಟ್ಟಿಲಿನಲ್ಲಿ ಇರುಮುಡಿ ಇರಿಸಿದರು. ಅದನ್ನು ಮೇಲ್ ಶಾಂತಿ ಪೂಜೆಗಾಗಿ ತೆಗೆದುಕೊಂಡು ಹೋದರು. ದರ್ಶನದ ಬಳಿಕ ಸಮೀಪ ಇರುವ ಮಲಿಕಪ್ಪುರಂ ಸಹಿತ ಹಲವು ದೇಗುಲಗಳಿಗೆ ಭೇಟಿ ನೀಡಿದರು.</p>.ಕೇರಳ | ಶಬರಿಮಲೆ ದೇವಾಲಯದಲ್ಲಿ ಚಿನ್ನ ಕಳವು: ಆರೋಪಿ ವಶಕ್ಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪತ್ತನಂತಿಟ್ಟ:</strong> ಇಲ್ಲಿನ ಶಬರಿಮಲೆಯಲ್ಲಿರುವ ಅಯ್ಯಪ್ಪ ದೇಗುಲದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಬುಧವಾರ ಪಾರ್ಥನೆ ಮಾಡಿದರು.</p>.ಶಬರಿಮಲೆ ದೇವಸ್ಥಾನದ ಚಿನ್ನ ಕಳವು ಪ್ರಕರಣ: ಹೈಕೋರ್ಟ್ಗೆ SIT ಮೊದಲ ವರದಿ ಸಲ್ಲಿಕೆ.<p>ಆ ಮೂಲಕ ದೇಶದ ಮಹಿಳಾ ಮುಖ್ಯಸ್ಥರೊಬ್ಬರು ಇದೇ ಮೊದಲ ಬಾರಿಗೆ ಈ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದಂತಾಯಿತು. ಅಲ್ಲದೇ ದ್ರೌಪದಿ ಮುರ್ಮು ಅವರು ಶಬರಿಮಲೆಗೆ ಭೇಟಿ ನೀಡಿದ ದೇಶದ ಎರಡನೇ ರಾಷ್ಟ್ರಪತಿ. ಈ ಹಿಂದೆ 1970ರಲ್ಲಿ ಅಂದಿನ ರಾಷ್ಟ್ರಪತಿ ವಿ.ವಿ ಗಿರಿಯವರು ಶಬರಿಮಲೆಗೆ ಭೇಟಿ ನೀಡಿದ್ದರು. ಅವರು ಡೋಲಿ ಮೂಲಕ ಅಯ್ಯಪ್ಪ ಸನ್ನಿಧಿಗೆ ತೆರಳಿದ್ದರು.</p><p>ಬೆಳಿಗ್ಗೆ 11 ಗಂಟೆಗೆ ಪಂಪಾ ತಲುಪಿದ ಅವರು, ಪಂಪಾ ನದಿಯಲ್ಲಿ ಕಾಲು ತೊಳೆದು, ಅಲ್ಲಿಯೇ ಸಮೀಪ ಇರುವ ಗಣಪತಿ ದೇಗುಲ ಸಹಿತ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿದರು.</p><p>ಗಣಪತಿ ದೇಗುಲದ ಮೇಲ್ ಶಾಂತಿ ವಿಷ್ಣು ನಂಬೂದರಿಯವರು ಮುರ್ಮು ಅವರ ‘ಇರುಮುಡಿ’ ಕಟ್ಟಿದರು. ಮುರ್ಮು ಕಪ್ಪು ಸೀರೆ ಧರಿಸಿದ್ದರು.</p>.ಶಬರಿಮಲೆ ದೇವಸ್ಥಾನದ ಚಿನ್ನ ಕಳವು ಪ್ರಕರಣ: ಪೋಟಿ ನಿವಾಸದಲ್ಲಿ ಎಸ್ಐಟಿ ಶೋಧ.<p>ರಾಷ್ಟ್ರಪತಿ ಜೊತೆಗೆ ಎಡಿಸಿ ಸೌರಭ್ ಎಸ್. ನಾಯರ್, ಪಿಎಸ್ಒ ವಿನಯ್ ಮಥೂರ್, ಅಳಿಯ ಗಣೇಶ್ ಚಂದ್ರ ಹೊಂಬ್ರಮ್ ಕೂಡ ಇರುಮಡಿ ಹೊತ್ತು ದರ್ಶನ ಪಡೆದರು ಎಂದು ಜಿಲ್ಲೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p>ಇರುಮುಡಿ ಹೊತ್ತು ದೇಗುಲದ ಸಮೀದ ಈಡುಗಾಯಿ ಒಡೆದರು. ನಾಲ್ಕು ಚಕ್ರದ ವಿಶೇಷ ವಾಹನದ ಮೂಲಕ ಸನ್ನಿಧಾನಕ್ಕೆ ತೆರಳಿದರು. ಸನ್ನಿಧಾನದ 18 ಮೆಟ್ಟಿಲುಗಳನ್ನು ಏರಿದರು. ಅಲ್ಲಿ ಅವರನ್ನು ದೇವಸ್ವಂ ಸಚಿವ ವಿ.ಎನ್ ವಾಸವನ್ ಹಾಗೂ ಟ್ರಾವಂಕೂರ್ ದೇವಸ್ವಂ ಬೋರ್ಡ್ ನ (ಟಿಡಿಬಿ) ಅಧ್ಯಕ್ಷ ಪಿ.ಎಸ್ ಪ್ರಶಾಂತ್ ಸ್ವಾಗತಿಸಿದರು. ದೇವಸ್ಥಾನದ ತಂತ್ರಿ ಕಂದರಾರು ಮಹೇಶ್ ಮೊಹನಾರು ಅವರು ರಾಷ್ಟ್ರಪತಿಗೆ ಪೂರ್ಣಕುಂಭ ಸ್ವಾಗತ ನೀಡಿದರು.</p>.ಶಬರಿಮಲೆ ಕುರಿತ ವಿವಾದಗಳು ಅಯ್ಯಪ್ಪ ಭಕ್ತರ ಮೇಲೆ ಪರಿಣಾಮ ಬೀರಿಲ್ಲ: ಟಿಡಿಬಿ.<p>ದರ್ಶನ ಪಡೆದ ಬಳಿಕ, ದೇಗುಲದ ಮೆಟ್ಟಿಲಿನಲ್ಲಿ ಇರುಮುಡಿ ಇರಿಸಿದರು. ಅದನ್ನು ಮೇಲ್ ಶಾಂತಿ ಪೂಜೆಗಾಗಿ ತೆಗೆದುಕೊಂಡು ಹೋದರು. ದರ್ಶನದ ಬಳಿಕ ಸಮೀಪ ಇರುವ ಮಲಿಕಪ್ಪುರಂ ಸಹಿತ ಹಲವು ದೇಗುಲಗಳಿಗೆ ಭೇಟಿ ನೀಡಿದರು.</p>.ಕೇರಳ | ಶಬರಿಮಲೆ ದೇವಾಲಯದಲ್ಲಿ ಚಿನ್ನ ಕಳವು: ಆರೋಪಿ ವಶಕ್ಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>