<p><strong>ಶಬರಿಮಲೆ:</strong> ಅಯ್ಯಪ್ಪ ಸ್ವಾಮಿ ದೇಗುಲದ ವಾರ್ಷಿಕ ಯಾತ್ರೆ ಆರಂಭವಾಗಿದ್ದು, ಸ್ಪಾಟ್ ಬುಕಿಂಗ್ ಮತ್ತು ವರ್ಚುವಲ್ ಕ್ಯೂ (ಆನ್ಲೈನ್ ಬುಕಿಂಗ್) ವ್ಯವಸ್ಥೆಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಎಂ) ಅರುಣ್ ಎಸ್.ನಾಯರ್ ಅವರು ಉನ್ನತ ಮಟ್ಟದ ಸಭೆ ಬಳಿಕ ಈ ನಿರ್ಧಾರವನ್ನು ಘೋಷಿಸಿದರು.</p>.<p>ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ನಿಗದಿ ಪಡಿಸಿದ ದಿನದಂದೇ ಭಕ್ತರು ದೇಗುಲವನ್ನು ತಲುಪಬೇಕು ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.</p>.<p>ಭಕ್ತರ ಸಂಖ್ಯೆಯನ್ನು ಹೆಚ್ಚಿಸಲು ಮತ್ತು ಸುರಕ್ಷಿತ ಹಾಗೂ ವ್ಯವಸ್ಥಿತ ವಾತಾವರಣ ಕಲ್ಪಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.</p>.<p>‘ವಯಸ್ಸಾದವರು, ಆರೋಗ್ಯ ಸಮಸ್ಯೆ ಇದ್ದವರು, ಮಕ್ಕಳು ಜೊತೆಗಿರುವ ಕುಟುಂಬಗಳು ದಟ್ಟ ಅರಣ್ಯ ಪ್ರದೇಶದ ಮೂಲಕವಾಗಿ ದೇಗುಲ ತಲುಪುವುದನ್ನು ತಪ್ಪಿಸಿ ನೀಲಕ್ಕಲ್–ಪಂಬಾ ಮಾರ್ಗದ ಮೂಲಕ ಸನ್ನಿಧಾನಕ್ಕೆ ಭೇಟಿ ನೀಡಬಹುದು’ ಎಂದು ಸಲಹೆ ನೀಡಲಾಗಿದೆ.</p>.<p>ದೇಗುಲಕ್ಕೆ ತಲುಪುವ ದಾರಿಯಲ್ಲಿ ಅನಾರೋಗ್ಯಕ್ಕೀಡಾಗುವ ಯಾತ್ರಾರ್ಥಿಗಳಿಗೆ ನೆರವಾಗಲು ಅರಣ್ಯ ಇಲಾಖೆ, ಅಗ್ನಿಶಾಮಕ ದಳ ಅಧಿಕಾರಿಗಳು, ರಕ್ಷಣಾ ಪಡೆಗಳು, ಎನ್ಡಿಆರ್ಎಫ್ ತಂಡಗಳು ಸಿದ್ಧವಾಗಿವೆ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಬರಿಮಲೆ:</strong> ಅಯ್ಯಪ್ಪ ಸ್ವಾಮಿ ದೇಗುಲದ ವಾರ್ಷಿಕ ಯಾತ್ರೆ ಆರಂಭವಾಗಿದ್ದು, ಸ್ಪಾಟ್ ಬುಕಿಂಗ್ ಮತ್ತು ವರ್ಚುವಲ್ ಕ್ಯೂ (ಆನ್ಲೈನ್ ಬುಕಿಂಗ್) ವ್ಯವಸ್ಥೆಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಎಂ) ಅರುಣ್ ಎಸ್.ನಾಯರ್ ಅವರು ಉನ್ನತ ಮಟ್ಟದ ಸಭೆ ಬಳಿಕ ಈ ನಿರ್ಧಾರವನ್ನು ಘೋಷಿಸಿದರು.</p>.<p>ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ನಿಗದಿ ಪಡಿಸಿದ ದಿನದಂದೇ ಭಕ್ತರು ದೇಗುಲವನ್ನು ತಲುಪಬೇಕು ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.</p>.<p>ಭಕ್ತರ ಸಂಖ್ಯೆಯನ್ನು ಹೆಚ್ಚಿಸಲು ಮತ್ತು ಸುರಕ್ಷಿತ ಹಾಗೂ ವ್ಯವಸ್ಥಿತ ವಾತಾವರಣ ಕಲ್ಪಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.</p>.<p>‘ವಯಸ್ಸಾದವರು, ಆರೋಗ್ಯ ಸಮಸ್ಯೆ ಇದ್ದವರು, ಮಕ್ಕಳು ಜೊತೆಗಿರುವ ಕುಟುಂಬಗಳು ದಟ್ಟ ಅರಣ್ಯ ಪ್ರದೇಶದ ಮೂಲಕವಾಗಿ ದೇಗುಲ ತಲುಪುವುದನ್ನು ತಪ್ಪಿಸಿ ನೀಲಕ್ಕಲ್–ಪಂಬಾ ಮಾರ್ಗದ ಮೂಲಕ ಸನ್ನಿಧಾನಕ್ಕೆ ಭೇಟಿ ನೀಡಬಹುದು’ ಎಂದು ಸಲಹೆ ನೀಡಲಾಗಿದೆ.</p>.<p>ದೇಗುಲಕ್ಕೆ ತಲುಪುವ ದಾರಿಯಲ್ಲಿ ಅನಾರೋಗ್ಯಕ್ಕೀಡಾಗುವ ಯಾತ್ರಾರ್ಥಿಗಳಿಗೆ ನೆರವಾಗಲು ಅರಣ್ಯ ಇಲಾಖೆ, ಅಗ್ನಿಶಾಮಕ ದಳ ಅಧಿಕಾರಿಗಳು, ರಕ್ಷಣಾ ಪಡೆಗಳು, ಎನ್ಡಿಆರ್ಎಫ್ ತಂಡಗಳು ಸಿದ್ಧವಾಗಿವೆ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>