<p><strong>ನವದೆಹಲಿ</strong>: ಕೇರಳದ ಶಬರಿಮಲೆ ಸೇರಿ ಧಾರ್ಮಿಕ ಸ್ಥಳಗಳಲ್ಲಿ ಹಾಗೂ ಧರ್ಮಗಳಲ್ಲಿ ಮಹಿಳಾ ತಾರತಮ್ಯದ ಕುರಿತು ಸಲ್ಲಿಕೆಯಾಗಿರುವ ಅರ್ಜಿಯ ಅಂತಿಮ ವಿಚಾರಣೆಯನ್ನು 9 ನ್ಯಾಯಮೂರ್ತಿಗಳ ಪೀಠ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.</p>.ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ: ಎಲ್ಡಿಎಫ್ ಸ್ಪಷ್ಟನೆ ಕೋರಿದ ಕಾಂಗ್ರೆಸ್.<p>9 ನ್ಯಾಯಮೂರ್ತಿಗಳನ್ನೊಳಗೊಂಡ ಪೀಠವನ್ನು ಮುಖ್ಯನ್ಯಾಯಮೂರ್ತಿ ರಚಿಸಲಿದ್ದಾರೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಹಾಗೂ ವಿಪುಲ್ ಎಂ. ಪಾಂಚೋಲಿ ಅವರಿದ್ದ ಪೀಠ ಹೇಳಿತು. ಏಪ್ರಿಲ್ 9 ರಿಂದ ವಿಚಾರಣೆ ಆರಂಭವಾಗಲಿದೆ.</p><p>ಏಪ್ರಿಲ್ 22ರಂದು ವಿಚಾರಣೆ ಮುಗಿಯುವ ನಿರೀಕ್ಷೆ ಇದೆ.</p><p>ಮಾರ್ಚ್ 14ರೊಳಗೆ ವಾದವನ್ನು ಬರಹ ರೂಪದಲ್ಲಿ ಸಲ್ಲಿಸಿ ಎಂದು ಪಕ್ಷಗಾರರಿಗೆ ಕೋರ್ಟ್ ಇದೇ ವೇಳೆ ಸೂಚಿಸಿದೆ.</p><p>ಎಲ್ಲಾ ವಯೋಮಾನದ ಮಹಿಳೆಯರಿಗೆ ಶಬರಿಮಲೆ ದೇಗುಲ ಪ್ರವೇಶಿಸಬಹುದು ಎಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಪುನರ್ಪರಿಶೀಲನೆ ನಡೆಸಲು ಸಲ್ಲಿಸಿರುವ ಅರ್ಜಿಗೆ ಬೆಂಬಲ ನೀಡಲಾಗಿದೆ ಎಂದು ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ್ದಾರೆ.</p>.ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ: ಬಳ್ಳಾರಿಯಲ್ಲಿ ಮತ್ತೆ ಕೇರಳ ಎಸ್ಐಟಿ ಶೋಧ .<p>ಶಬರಿಮಲೆ ತೀರ್ಪನ್ನು ಪುನರ್ಪರಿಶೀಲನೆ ನಡೆಸಲು ಸಲ್ಲಿಸಲಾದ ಅರ್ಜಿದಾರರ ನೋಡಲ್ ವಕೀಲರನ್ನಾಗಿ ಕೃಷ್ಣ ಕುಮಾರ್ ಸಿಂಗ್ ಅವರನ್ನೂ, ಪುನರ್ಪರಿಶೀಲನೆಗೆ ವಿರುದ್ಧ ಇರುವವರಿಗೆ ನೋಡಲ್ ವಕೀಲರಾಗಿ ಶಾಶ್ವತಿ ಪರಿಯವರನ್ನೂ ಇದೇ ವೇಳೆ ಕೋರ್ಟ್ ನೇಮಿಸಿದೆ.</p><p>ಜೊತೆಗೆ ಹಿರಿಯ ವಕೀಲರಾದ ಕೆ. ಪರಮೇಶ್ವರ ಹಾಗೂ ಶಿವಂ ಸಿಂಗ್ ಅವರನ್ನು ಅಮಿಕಸ್ ಕ್ಯೂರಿಗಳನ್ನಾಗಿ ನೇಮಿಸಿದ್ದಾಗಿಯೂ ಕೋರ್ಟ್ ಪ್ರಕಟಿಸಿದೆ.</p>.ಶಬರಿಮಲೆ ಚಿನ್ನ ಕಳವು: ನಟ ಜಯರಾಂಗೆ ಇ.ಡಿ ಸಮನ್ಸ್.<p>2026ರ ಏಪ್ರಿಲ್ 7ರಂದು ಬೆಳಿಗ್ಗೆ 10.30ಕ್ಕೆ 9 ಮಂದಿ ನ್ಯಾಯಮೂರ್ತಿಗಳ ಪೀಠ ಶಬರಿಮಲೆ ಪ್ರಕರಣದ ಪುನರ್ಪರಿಶೀಲನೆ ಅರ್ಜಿಯ ವಿಚಾರಣೆ ನಡೆಸುವುದಾಗಿಯೂ, ಪುನರ್ಪರಿಶೀಲನೆ ಅರ್ಜಿದಾರರು ಹಾಗೂ ಅವರಿಗೆ ಬೆಂಬಲ ನೀಡುವವರನ್ನು ಫೆ. 7 ರಿಂದ 9ರವೆಗೆ, ವಿರೋಧಿಸುವವರನ್ನು ಏ. 14 ರಿಂದ 16ರವರೆಗೆ ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿದೆ.</p><p>ಅಲ್ಲದೆ ಕಾಲಮಿತಿಯನ್ನು ಪಾಲಿಸಬೇಕು ಎಂದು ಪ್ರಕರಣದಲ್ಲಿ ಹಾಜರಾಗುವ ವಕೀಲರಿಗೆ ನ್ಯಾಯಾಲಯ ನಿರ್ದೇಶಿಸಿದೆ.</p> .LDF ಸರ್ಕಾರದ ಆದೇಶದ ಮೇರೆಗೆ ಶಬರಿಮಲೆ ತನಿಖೆಯ ಮಾಹಿತಿ ಸೋರಿಕೆ: ಕಾಂಗ್ರೆಸ್ ಸಂಸದ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೇರಳದ ಶಬರಿಮಲೆ ಸೇರಿ ಧಾರ್ಮಿಕ ಸ್ಥಳಗಳಲ್ಲಿ ಹಾಗೂ ಧರ್ಮಗಳಲ್ಲಿ ಮಹಿಳಾ ತಾರತಮ್ಯದ ಕುರಿತು ಸಲ್ಲಿಕೆಯಾಗಿರುವ ಅರ್ಜಿಯ ಅಂತಿಮ ವಿಚಾರಣೆಯನ್ನು 9 ನ್ಯಾಯಮೂರ್ತಿಗಳ ಪೀಠ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.</p>.ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ: ಎಲ್ಡಿಎಫ್ ಸ್ಪಷ್ಟನೆ ಕೋರಿದ ಕಾಂಗ್ರೆಸ್.<p>9 ನ್ಯಾಯಮೂರ್ತಿಗಳನ್ನೊಳಗೊಂಡ ಪೀಠವನ್ನು ಮುಖ್ಯನ್ಯಾಯಮೂರ್ತಿ ರಚಿಸಲಿದ್ದಾರೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಹಾಗೂ ವಿಪುಲ್ ಎಂ. ಪಾಂಚೋಲಿ ಅವರಿದ್ದ ಪೀಠ ಹೇಳಿತು. ಏಪ್ರಿಲ್ 9 ರಿಂದ ವಿಚಾರಣೆ ಆರಂಭವಾಗಲಿದೆ.</p><p>ಏಪ್ರಿಲ್ 22ರಂದು ವಿಚಾರಣೆ ಮುಗಿಯುವ ನಿರೀಕ್ಷೆ ಇದೆ.</p><p>ಮಾರ್ಚ್ 14ರೊಳಗೆ ವಾದವನ್ನು ಬರಹ ರೂಪದಲ್ಲಿ ಸಲ್ಲಿಸಿ ಎಂದು ಪಕ್ಷಗಾರರಿಗೆ ಕೋರ್ಟ್ ಇದೇ ವೇಳೆ ಸೂಚಿಸಿದೆ.</p><p>ಎಲ್ಲಾ ವಯೋಮಾನದ ಮಹಿಳೆಯರಿಗೆ ಶಬರಿಮಲೆ ದೇಗುಲ ಪ್ರವೇಶಿಸಬಹುದು ಎಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಪುನರ್ಪರಿಶೀಲನೆ ನಡೆಸಲು ಸಲ್ಲಿಸಿರುವ ಅರ್ಜಿಗೆ ಬೆಂಬಲ ನೀಡಲಾಗಿದೆ ಎಂದು ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ್ದಾರೆ.</p>.ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ: ಬಳ್ಳಾರಿಯಲ್ಲಿ ಮತ್ತೆ ಕೇರಳ ಎಸ್ಐಟಿ ಶೋಧ .<p>ಶಬರಿಮಲೆ ತೀರ್ಪನ್ನು ಪುನರ್ಪರಿಶೀಲನೆ ನಡೆಸಲು ಸಲ್ಲಿಸಲಾದ ಅರ್ಜಿದಾರರ ನೋಡಲ್ ವಕೀಲರನ್ನಾಗಿ ಕೃಷ್ಣ ಕುಮಾರ್ ಸಿಂಗ್ ಅವರನ್ನೂ, ಪುನರ್ಪರಿಶೀಲನೆಗೆ ವಿರುದ್ಧ ಇರುವವರಿಗೆ ನೋಡಲ್ ವಕೀಲರಾಗಿ ಶಾಶ್ವತಿ ಪರಿಯವರನ್ನೂ ಇದೇ ವೇಳೆ ಕೋರ್ಟ್ ನೇಮಿಸಿದೆ.</p><p>ಜೊತೆಗೆ ಹಿರಿಯ ವಕೀಲರಾದ ಕೆ. ಪರಮೇಶ್ವರ ಹಾಗೂ ಶಿವಂ ಸಿಂಗ್ ಅವರನ್ನು ಅಮಿಕಸ್ ಕ್ಯೂರಿಗಳನ್ನಾಗಿ ನೇಮಿಸಿದ್ದಾಗಿಯೂ ಕೋರ್ಟ್ ಪ್ರಕಟಿಸಿದೆ.</p>.ಶಬರಿಮಲೆ ಚಿನ್ನ ಕಳವು: ನಟ ಜಯರಾಂಗೆ ಇ.ಡಿ ಸಮನ್ಸ್.<p>2026ರ ಏಪ್ರಿಲ್ 7ರಂದು ಬೆಳಿಗ್ಗೆ 10.30ಕ್ಕೆ 9 ಮಂದಿ ನ್ಯಾಯಮೂರ್ತಿಗಳ ಪೀಠ ಶಬರಿಮಲೆ ಪ್ರಕರಣದ ಪುನರ್ಪರಿಶೀಲನೆ ಅರ್ಜಿಯ ವಿಚಾರಣೆ ನಡೆಸುವುದಾಗಿಯೂ, ಪುನರ್ಪರಿಶೀಲನೆ ಅರ್ಜಿದಾರರು ಹಾಗೂ ಅವರಿಗೆ ಬೆಂಬಲ ನೀಡುವವರನ್ನು ಫೆ. 7 ರಿಂದ 9ರವೆಗೆ, ವಿರೋಧಿಸುವವರನ್ನು ಏ. 14 ರಿಂದ 16ರವರೆಗೆ ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿದೆ.</p><p>ಅಲ್ಲದೆ ಕಾಲಮಿತಿಯನ್ನು ಪಾಲಿಸಬೇಕು ಎಂದು ಪ್ರಕರಣದಲ್ಲಿ ಹಾಜರಾಗುವ ವಕೀಲರಿಗೆ ನ್ಯಾಯಾಲಯ ನಿರ್ದೇಶಿಸಿದೆ.</p> .LDF ಸರ್ಕಾರದ ಆದೇಶದ ಮೇರೆಗೆ ಶಬರಿಮಲೆ ತನಿಖೆಯ ಮಾಹಿತಿ ಸೋರಿಕೆ: ಕಾಂಗ್ರೆಸ್ ಸಂಸದ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>