ರಾಜಸ್ಥಾನ ಹೈಕೋರ್ಟ್ನ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರ ಪೀಠದ ಎದುರು ಮಧ್ಯಾಹ್ನ 3 ಗಂಟೆಗೆ ಅರ್ಜಿಯು ವಿಚಾರಣೆಗೆ ಬಂದಿತ್ತು. ಆದರೆ, ಅರ್ಜಿದಾರರ ಪರ ವಕೀಲ ಹರೀಶ್ ಸಾಳ್ವೆ ಅವರು ಅರ್ಜಿಯನ್ನು ಪರಿಷ್ಕರಿಸಲು ಸಮಯಾವಕಾಶ ಕೋರಿದರು. ಮಧ್ಯಾಹ್ನ 5 ಗಂಟೆಗೆ ಅರ್ಜಿಯನ್ನು ಸಲ್ಲಿಸಲಾಯಿತು. ನಂತರ ಈ ಅರ್ಜಿಯನ್ನು ವಿಭಾಗೀಯ ಪೀಠಕ್ಕೆ ವರ್ಗಾಯಿಸಲಾಯಿತು.