<p class="bodytext"><strong>ಚೆನ್ನೈ: </strong>ತಮಿಳುನಾಡಿನ ಪ್ರತಿಷ್ಠಿತ ಅಣ್ಣಾ ಎಂಜಿನಿಯರಿಂಗ್ ವಿಶ್ವವಿದ್ಯಾಲಯದ ಕುಲಪತಿ, ಕನ್ನಡಿಗ ಎಂ.ಕೆ. ಸೂರಪ್ಪ ಅವರನ್ನು ಕುಲಪತಿ ಹುದ್ದೆಯಿಂದ ವಜಾಗೊಳಿಸಬೇಕೆಂದು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಸೋಮವಾರ ಆಗ್ರಹಿಸಿದ್ದಾರೆ.</p>.<p class="bodytext">‘ಸೂರಪ್ಪ ಅವರು, ರಾಜ್ಯ ಸರ್ಕಾರದ ಗಮನಕ್ಕೆ ತಾರದೇ ವಿಶ್ವವಿದ್ಯಾಲಯಕ್ಕೆ ‘ಇನ್ಸ್ಟಿಟ್ಯೂಟ್ ಆಫ್ ಎಮಿನೆನ್ಸ್ (ಐಒಒ)’ ಕೋರಿ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಆದ್ದರಿಂದ ಅವರನ್ನು ಕೂಡಲೇ ಕುಲಪತಿ ಹುದ್ದೆಯಿಂದ ವಜಾಗೊಳಿಸಬೇಕು’ ಎಂದು ಸ್ಟಾಲಿನ್ ಒತ್ತಾಯಿಸಿದ್ದಾರೆ.</p>.<p class="bodytext">ಮೈಸೂರು ಮೂಲದ ಸೂರಪ್ಪ ಅವರು 2018ರಲ್ಲಿ ಅಣ್ಣಾ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕಗೊಂಡಿದ್ದು, ಅವರು ತಮಿಳುನಾಡಿಗೆ ಸೇರಿದವರಲ್ಲ ಎಂದು ವಿರೋಧಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ಅಷ್ಟೇ ಅಲ್ಲ, ಅಣ್ಣಾ ವಿಶ್ವವಿದ್ಯಾಲಯವು ಪ್ರತಿಷ್ಠಿತ ವಿಶ್ವವಿದ್ಯಾಲಯವಾಗಿದ್ದು, ಸ್ವಂತ ಬಲದಿಂದಲೇ ₹1,500 ಕೋಟಿಯಷ್ಟು ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆ. ಹೀಗಿದ್ದೂ, ಕುಲಪತಿ ಅವರು ಕೇಂದ್ರಕ್ಕೆ ಶ್ರೇಷ್ಠತಾ ಮಾನ್ಯತಾ ನೀಡಿ ಎಂದು ಪತ್ರ ಬರೆದಿರುವುದು ಸರಿಯಲ್ಲ ಎಂದು ವಿರೋಧಪಕ್ಷಗಳು ದೂರಿವೆ.</p>.<p class="bodytext">ಒಂದು ವೇಳೆ ಕೇಂದ್ರ ಸರ್ಕಾರ ವಿಶ್ವವಿದ್ಯಾಲಯಕ್ಕೆ ಐಒಇ ನೀಡಿದ್ದಲ್ಲಿ ಈಗಿರುವ ಶೇ 69 ಮೀಸಲಾತಿಗೆ ಧಕ್ಕೆ ಒದಗಬಹುದೆಂದೂ ಡಿಎಂಕೆ ಮತ್ತು ಇತರ ಪಕ್ಷಗಳು ಆತಂಕ ವ್ಯಕ್ತಪಡಿಸಿವೆ. ಆದರೆ, ಕೇಂದ್ರ ಸರ್ಕಾರ ಮೀಸಲಾತಿ ಧಕ್ಕೆಯಾಗುವುದಿಲ್ಲವೆಂದು ಮೌಖಿಕವಾಗಿ ಭರವಸೆ ನೀಡಿದೆ. ಆದರೆ, ವಿರೋಧಪಕ್ಷಗಳು ಈ ಮಾತನ್ನು ನಂಬಲು ಸಿದ್ಧವಿಲ್ಲ.</p>.<p class="bodytext">ಮೀಸಲಾತಿಗೆ ಧಕ್ಕೆ ಇಲ್ಲ: ‘ಕೇಂದ್ರವು ಐಒಇ ನೀಡಿದರೂ, ವಿಶ್ವವಿದ್ಯಾಲಯದ ಮೀಸಲಾತಿ ನಿಯಮ ಹಿಂದಿನಂತೆಯೇ ಮುಂದುವರಿಯುತ್ತದೆ. ಅದರಲ್ಲಿ ಯಾವುದೇ ಬದಲಾವಣೆ ಆಗದು. ವಿದ್ಯಾರ್ಥಿಗಳಿಗೆ ಸಂಬಂಧಿಸಿದ ನಿಯಮಗಳಷ್ಟೇ ಅಲ್ಲ ಬೋಧಕ ಸಿಬ್ಬಂದಿಗೂ ಸಂಬಂಧಿಸಿದ ನಿಯಮಗಳಲ್ಲಿ ಯಾವುದೇ ಬದಲಾವಣೆ ಆಗದು’ ಎಂದು ಸೂರಪ್ಪ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p class="bodytext">‘ಈಗ ಎದ್ದಿರುವ ವಿವಾದದ ಬಗ್ಗೆ ನಾನು ಏನೂ ಹೇಳಲಾರೆ. ಅಸಹಾಯಕನಾಗಿದ್ದೇನೆ’ ಎಂದೂ ಅವರು ಹೇಳಿದರು.</p>.<p class="bodytext"><strong>ಕೇಸರಿಕರಣದ ಹುನ್ನಾರ:</strong> ‘ವಿಶ್ವವಿದ್ಯಾಲಯದ ಕುಲಪತಿ ಸೂರಪ್ಪ, ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಮತ್ತು ಮುಖ್ಯಮಂತ್ರಿ ಇಡಪ್ಪಡಿ ಕೆ. ಪಳನಿಸ್ವಾಮಿ ಅವರು ವಿಶ್ವವಿದ್ಯಾಲಯವನ್ನು ಕೇಸರಿಕರಣಗೊಳಿಸಲು ಹೊರಟಿದ್ದಾರೆ’ ಎಂದು ಸ್ಟಾಲಿನ್ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.</p>.<p class="bodytext">‘ಒಂದು ವೇಳೆ ಇದರಲ್ಲಿ ಮುಖ್ಯಮಂತ್ರಿ ಅವರ ಪಾತ್ರವಿರದಿದ್ದರೆ, ಸೂರಪ್ಪ ಏಕಪಕ್ಷೀಯವಾಗಿ ಕೇಂದ್ರಕ್ಕೆ ಪತ್ರ ಬರೆದಿದ್ದು, ಅವರನ್ನು ಕುಲಪತಿ ಹುದ್ದೆಯಿಂದ ಕೆಳಗಿಳಿಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲಿ. ಅಷ್ಟೇ ಅಲ್ಲ ಪ್ರಧಾನ ಮಂತ್ರಿಗೂ ಈ ಸಂಬಂಧ ಪತ್ರ ಬರೆಯಲಿ’ಎಂದೂ ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ಚೆನ್ನೈ: </strong>ತಮಿಳುನಾಡಿನ ಪ್ರತಿಷ್ಠಿತ ಅಣ್ಣಾ ಎಂಜಿನಿಯರಿಂಗ್ ವಿಶ್ವವಿದ್ಯಾಲಯದ ಕುಲಪತಿ, ಕನ್ನಡಿಗ ಎಂ.ಕೆ. ಸೂರಪ್ಪ ಅವರನ್ನು ಕುಲಪತಿ ಹುದ್ದೆಯಿಂದ ವಜಾಗೊಳಿಸಬೇಕೆಂದು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಸೋಮವಾರ ಆಗ್ರಹಿಸಿದ್ದಾರೆ.</p>.<p class="bodytext">‘ಸೂರಪ್ಪ ಅವರು, ರಾಜ್ಯ ಸರ್ಕಾರದ ಗಮನಕ್ಕೆ ತಾರದೇ ವಿಶ್ವವಿದ್ಯಾಲಯಕ್ಕೆ ‘ಇನ್ಸ್ಟಿಟ್ಯೂಟ್ ಆಫ್ ಎಮಿನೆನ್ಸ್ (ಐಒಒ)’ ಕೋರಿ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಆದ್ದರಿಂದ ಅವರನ್ನು ಕೂಡಲೇ ಕುಲಪತಿ ಹುದ್ದೆಯಿಂದ ವಜಾಗೊಳಿಸಬೇಕು’ ಎಂದು ಸ್ಟಾಲಿನ್ ಒತ್ತಾಯಿಸಿದ್ದಾರೆ.</p>.<p class="bodytext">ಮೈಸೂರು ಮೂಲದ ಸೂರಪ್ಪ ಅವರು 2018ರಲ್ಲಿ ಅಣ್ಣಾ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕಗೊಂಡಿದ್ದು, ಅವರು ತಮಿಳುನಾಡಿಗೆ ಸೇರಿದವರಲ್ಲ ಎಂದು ವಿರೋಧಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ಅಷ್ಟೇ ಅಲ್ಲ, ಅಣ್ಣಾ ವಿಶ್ವವಿದ್ಯಾಲಯವು ಪ್ರತಿಷ್ಠಿತ ವಿಶ್ವವಿದ್ಯಾಲಯವಾಗಿದ್ದು, ಸ್ವಂತ ಬಲದಿಂದಲೇ ₹1,500 ಕೋಟಿಯಷ್ಟು ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆ. ಹೀಗಿದ್ದೂ, ಕುಲಪತಿ ಅವರು ಕೇಂದ್ರಕ್ಕೆ ಶ್ರೇಷ್ಠತಾ ಮಾನ್ಯತಾ ನೀಡಿ ಎಂದು ಪತ್ರ ಬರೆದಿರುವುದು ಸರಿಯಲ್ಲ ಎಂದು ವಿರೋಧಪಕ್ಷಗಳು ದೂರಿವೆ.</p>.<p class="bodytext">ಒಂದು ವೇಳೆ ಕೇಂದ್ರ ಸರ್ಕಾರ ವಿಶ್ವವಿದ್ಯಾಲಯಕ್ಕೆ ಐಒಇ ನೀಡಿದ್ದಲ್ಲಿ ಈಗಿರುವ ಶೇ 69 ಮೀಸಲಾತಿಗೆ ಧಕ್ಕೆ ಒದಗಬಹುದೆಂದೂ ಡಿಎಂಕೆ ಮತ್ತು ಇತರ ಪಕ್ಷಗಳು ಆತಂಕ ವ್ಯಕ್ತಪಡಿಸಿವೆ. ಆದರೆ, ಕೇಂದ್ರ ಸರ್ಕಾರ ಮೀಸಲಾತಿ ಧಕ್ಕೆಯಾಗುವುದಿಲ್ಲವೆಂದು ಮೌಖಿಕವಾಗಿ ಭರವಸೆ ನೀಡಿದೆ. ಆದರೆ, ವಿರೋಧಪಕ್ಷಗಳು ಈ ಮಾತನ್ನು ನಂಬಲು ಸಿದ್ಧವಿಲ್ಲ.</p>.<p class="bodytext">ಮೀಸಲಾತಿಗೆ ಧಕ್ಕೆ ಇಲ್ಲ: ‘ಕೇಂದ್ರವು ಐಒಇ ನೀಡಿದರೂ, ವಿಶ್ವವಿದ್ಯಾಲಯದ ಮೀಸಲಾತಿ ನಿಯಮ ಹಿಂದಿನಂತೆಯೇ ಮುಂದುವರಿಯುತ್ತದೆ. ಅದರಲ್ಲಿ ಯಾವುದೇ ಬದಲಾವಣೆ ಆಗದು. ವಿದ್ಯಾರ್ಥಿಗಳಿಗೆ ಸಂಬಂಧಿಸಿದ ನಿಯಮಗಳಷ್ಟೇ ಅಲ್ಲ ಬೋಧಕ ಸಿಬ್ಬಂದಿಗೂ ಸಂಬಂಧಿಸಿದ ನಿಯಮಗಳಲ್ಲಿ ಯಾವುದೇ ಬದಲಾವಣೆ ಆಗದು’ ಎಂದು ಸೂರಪ್ಪ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p class="bodytext">‘ಈಗ ಎದ್ದಿರುವ ವಿವಾದದ ಬಗ್ಗೆ ನಾನು ಏನೂ ಹೇಳಲಾರೆ. ಅಸಹಾಯಕನಾಗಿದ್ದೇನೆ’ ಎಂದೂ ಅವರು ಹೇಳಿದರು.</p>.<p class="bodytext"><strong>ಕೇಸರಿಕರಣದ ಹುನ್ನಾರ:</strong> ‘ವಿಶ್ವವಿದ್ಯಾಲಯದ ಕುಲಪತಿ ಸೂರಪ್ಪ, ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಮತ್ತು ಮುಖ್ಯಮಂತ್ರಿ ಇಡಪ್ಪಡಿ ಕೆ. ಪಳನಿಸ್ವಾಮಿ ಅವರು ವಿಶ್ವವಿದ್ಯಾಲಯವನ್ನು ಕೇಸರಿಕರಣಗೊಳಿಸಲು ಹೊರಟಿದ್ದಾರೆ’ ಎಂದು ಸ್ಟಾಲಿನ್ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.</p>.<p class="bodytext">‘ಒಂದು ವೇಳೆ ಇದರಲ್ಲಿ ಮುಖ್ಯಮಂತ್ರಿ ಅವರ ಪಾತ್ರವಿರದಿದ್ದರೆ, ಸೂರಪ್ಪ ಏಕಪಕ್ಷೀಯವಾಗಿ ಕೇಂದ್ರಕ್ಕೆ ಪತ್ರ ಬರೆದಿದ್ದು, ಅವರನ್ನು ಕುಲಪತಿ ಹುದ್ದೆಯಿಂದ ಕೆಳಗಿಳಿಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲಿ. ಅಷ್ಟೇ ಅಲ್ಲ ಪ್ರಧಾನ ಮಂತ್ರಿಗೂ ಈ ಸಂಬಂಧ ಪತ್ರ ಬರೆಯಲಿ’ಎಂದೂ ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>