‘ಸಾವಿಗೀಡಾಗಿರುವ ಸಾಧುವನ್ನು ಮಹಾಂತ ಕನ್ಹಯ್ಯಾ ದಾಸ್ ಎಂದು ಗುರುತಿಸಲಾಗಿದೆ. ಇವರು ಅಯೋಧ್ಯೆಯ ಪ್ರಸಿದ್ಧ ಹನುಮಾನ್ಗಿರಿ ದೇವಾಲಯದಲ್ಲಿದ್ದರು. ಶನಿವಾರ ರಾತ್ರಿ ಅವರನ್ನು ಕಲ್ಲುಗಳಿಂದ ಹೊಡೆದು ಹತ್ಯೆ ಮಾಡಲಾಗಿದೆ. ಭಾನುವಾರ ಮುಂಜಾನೆ ದೇವಾಲಯದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಾಧು ಮಹಾಂತ ಅವರ ದೇಹವು ಪತ್ತೆಯಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.