<p><strong>ಹೈದರಾಬಾದ್</strong>: ಜನರ ಸುರಕ್ಷತೆಗಿಂತ ಸಿನಿಮಾ ಪ್ರಚಾರ ಹೆಚ್ಚು ಮುಖ್ಯವಲ್ಲ. ಇದನ್ನು ಚಿತ್ರರಂಗದವರು ಸೇರಿದಂತೆ ಎಲ್ಲರೂ ಅರ್ಥಮಾಡಿಕೊಳ್ಳಬೇಕು ಮತ್ತು ಅದರಂತೆಯೇ ನಡೆದುಕೊಳ್ಳಬೇಕೆಂದು ತೆಲಂಗಾಣದ ಡಿಜಿಪಿ ಜಿತೇಂದರ್ ಭಾನುವಾರ ಹೇಳಿದ್ದಾರೆ.</p><p>ಪೊಲೀಸರು ಯಾವುದೇ ವ್ಯಕ್ತಿಯ ವಿರುದ್ಧ ವೈಯಕ್ತಿಕ ಅಭಿಪ್ರಾಯಗಳನ್ನು ಹೊಂದಿರುವುದಿಲ್ಲ. ಆದರೆ ನಾಗರಿಕರಿಗೆ ಎಲ್ಲರೂ ಜವಾಬ್ದಾರರಾಗಿರಬೇಕು ಎಂದು 'ಪುಷ್ಪಾ-2' ಚಿತ್ರದ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದಾರೆ.</p>.ಪ್ರಧಾನಿ ಮೋದಿಗೆ ಕುವೈತ್ನ ಅತ್ಯುನ್ನತ ನಾಗರಿಕ ಗೌರವ.Bihar Election 2025: ಮೋದಿ, ನಿತೀಶ್ ನಾಯಕತ್ವದಲ್ಲೇ ಸ್ಪರ್ಧೆ: ಡಿಸಿಎಂ ಚೌಧರಿ. <p>ಸಿನಿಮಾಗಳಲ್ಲಿ ಅವರು ನಾಯಕರು. ಆದರೆ ಸಮಾಜದ ಸಮಸ್ಯೆಗಳನ್ನು ಅವರು ಅರ್ಥಮಾಡಿಕೊಳ್ಳಬೇಕು. ಜನರ ಸುರಕ್ಷತೆಗಿಂತ ಸಿನಿಮಾ ಪ್ರಚಾರ ಹೆಚ್ಚು ಮುಖ್ಯವಲ್ಲ. ಇಂತಹ ಘಟನೆಗಳು ನಡೆಯಬಾರದು. ನಾಗರಿಕರ ಸುರಕ್ಷತೆ ಮತ್ತು ಅವರ ಭದ್ರತೆಯೇ ಮೊದಲ ಆದ್ಯತೆಯಾಗಿರಬೇಕೆಂದು ಜಿತೇಂದರ್ ತಿಳಿಸಿದ್ದಾರೆ.</p><p>'ಪುಷ್ಪಾ-2' ಚಿತ್ರದ ಪ್ರದರ್ಶನದ ವೇಳೆ ನೂಕುನುಗ್ಗಲು ಉಂಟಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈ ಘಟನೆಯಲ್ಲಿ ಆಕೆಯ ಎಂಟು ವರ್ಷದ ಮಗ ಗಾಯಗೊಂಡಿದ್ದರು. ಈ ಪ್ರಕರಣ ಸಂಬಂಧ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿತ್ತು. ಬಳಿಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.</p>.Pushpa-2 | ಸಿನಿಮಾ ನೋಡಲು ಹೋದವರಿಗೆ ಕೆಮ್ಮು, ವಾಂತಿ.Pushpa–2 ಸಿನಿಮಾ ವಿಮರ್ಶೆ: ಅದ್ಧೂರಿತನವೇ ‘ಪುಷ್ಪ’ನ ಜೀವಾಳ .Pushpa 2 The Rule Trailer: ಪುಷ್ಪ ಅಂದ್ರೆ ಫೈರ್ ಅಲ್ಲ! ಮತ್ತೇನು?.ಪುಷ್ಪ–2: ಕಾಲ್ತುಳಿತ– ಗಾಯಗೊಂಡಿದ್ದ ಬಾಲಕನ ಭೇಟಿಯಾಗಿ ಸಾಂತ್ವನ ಹೇಳಿದ ಸುಕುಮಾರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಜನರ ಸುರಕ್ಷತೆಗಿಂತ ಸಿನಿಮಾ ಪ್ರಚಾರ ಹೆಚ್ಚು ಮುಖ್ಯವಲ್ಲ. ಇದನ್ನು ಚಿತ್ರರಂಗದವರು ಸೇರಿದಂತೆ ಎಲ್ಲರೂ ಅರ್ಥಮಾಡಿಕೊಳ್ಳಬೇಕು ಮತ್ತು ಅದರಂತೆಯೇ ನಡೆದುಕೊಳ್ಳಬೇಕೆಂದು ತೆಲಂಗಾಣದ ಡಿಜಿಪಿ ಜಿತೇಂದರ್ ಭಾನುವಾರ ಹೇಳಿದ್ದಾರೆ.</p><p>ಪೊಲೀಸರು ಯಾವುದೇ ವ್ಯಕ್ತಿಯ ವಿರುದ್ಧ ವೈಯಕ್ತಿಕ ಅಭಿಪ್ರಾಯಗಳನ್ನು ಹೊಂದಿರುವುದಿಲ್ಲ. ಆದರೆ ನಾಗರಿಕರಿಗೆ ಎಲ್ಲರೂ ಜವಾಬ್ದಾರರಾಗಿರಬೇಕು ಎಂದು 'ಪುಷ್ಪಾ-2' ಚಿತ್ರದ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದಾರೆ.</p>.ಪ್ರಧಾನಿ ಮೋದಿಗೆ ಕುವೈತ್ನ ಅತ್ಯುನ್ನತ ನಾಗರಿಕ ಗೌರವ.Bihar Election 2025: ಮೋದಿ, ನಿತೀಶ್ ನಾಯಕತ್ವದಲ್ಲೇ ಸ್ಪರ್ಧೆ: ಡಿಸಿಎಂ ಚೌಧರಿ. <p>ಸಿನಿಮಾಗಳಲ್ಲಿ ಅವರು ನಾಯಕರು. ಆದರೆ ಸಮಾಜದ ಸಮಸ್ಯೆಗಳನ್ನು ಅವರು ಅರ್ಥಮಾಡಿಕೊಳ್ಳಬೇಕು. ಜನರ ಸುರಕ್ಷತೆಗಿಂತ ಸಿನಿಮಾ ಪ್ರಚಾರ ಹೆಚ್ಚು ಮುಖ್ಯವಲ್ಲ. ಇಂತಹ ಘಟನೆಗಳು ನಡೆಯಬಾರದು. ನಾಗರಿಕರ ಸುರಕ್ಷತೆ ಮತ್ತು ಅವರ ಭದ್ರತೆಯೇ ಮೊದಲ ಆದ್ಯತೆಯಾಗಿರಬೇಕೆಂದು ಜಿತೇಂದರ್ ತಿಳಿಸಿದ್ದಾರೆ.</p><p>'ಪುಷ್ಪಾ-2' ಚಿತ್ರದ ಪ್ರದರ್ಶನದ ವೇಳೆ ನೂಕುನುಗ್ಗಲು ಉಂಟಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈ ಘಟನೆಯಲ್ಲಿ ಆಕೆಯ ಎಂಟು ವರ್ಷದ ಮಗ ಗಾಯಗೊಂಡಿದ್ದರು. ಈ ಪ್ರಕರಣ ಸಂಬಂಧ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿತ್ತು. ಬಳಿಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.</p>.Pushpa-2 | ಸಿನಿಮಾ ನೋಡಲು ಹೋದವರಿಗೆ ಕೆಮ್ಮು, ವಾಂತಿ.Pushpa–2 ಸಿನಿಮಾ ವಿಮರ್ಶೆ: ಅದ್ಧೂರಿತನವೇ ‘ಪುಷ್ಪ’ನ ಜೀವಾಳ .Pushpa 2 The Rule Trailer: ಪುಷ್ಪ ಅಂದ್ರೆ ಫೈರ್ ಅಲ್ಲ! ಮತ್ತೇನು?.ಪುಷ್ಪ–2: ಕಾಲ್ತುಳಿತ– ಗಾಯಗೊಂಡಿದ್ದ ಬಾಲಕನ ಭೇಟಿಯಾಗಿ ಸಾಂತ್ವನ ಹೇಳಿದ ಸುಕುಮಾರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>