<p><strong>ನವದೆಹಲಿ</strong>: ಸಹಾರ ಇಂಡಿಯಾ ಕಮರ್ಷಿಯಲ್ ಕಾರ್ಪೊರೇಷನ್ ಲಿಮಿಡೆಟ್ (ಎಸ್ಐಸಿಸಿಎಲ್) ಸಂಸ್ಥೆಯು ತನ್ನ ಆಸ್ತಿಗಳನ್ನು ಮಾರಾಟ ಮಾಡಲು ಅನುಮತಿ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ. </p>.<p>ಮಹಾರಾಷ್ಟ್ರದಲ್ಲಿರುವ ಆ್ಯಂಬಿ ವ್ಯಾಲಿ, ಲಖನೌನ ಸಹಾರ ಸಹೇರ್ ಸೇರಿದಂತೆ 88 ಆಸ್ತಿಯನ್ನು ಅದಾನಿ ಪ್ರಾಪರ್ಟೀಸ್ ಪ್ರೈ.ಲಿಮಿಟೆಡ್ಗೆ ಮಾರಾಟ ಮಾಡಲು ಸಂಸ್ಥೆ ಉದ್ದೇಶಿಸಿದೆ.</p>.<p class="title">ವಕೀಲ ಗೌತಮ್ ಅವಸ್ಥಿ ಅವರ ಮೂಲಕ ಸಹಾರ ಸಂಸ್ಥೆಯು ಈ ಅರ್ಜಿ ಸಲ್ಲಿಸಿದ್ದು, ಅಕ್ಟೋಬರ್ 14ರಂದು ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆಯಿದೆ. </p>.<p class="title">ಸಹಾರ ಸಮೂಹಕ್ಕೆ ಸೇರಿದ ಆಸ್ತಿಯ ಮಾರಾಟಕ್ಕೆ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ) ಅನುಮತಿ ನೀಡದ ಕಾರಣ ನ್ಯಾಯಾಲಯದ ಆದೇಶದ ಮೂಲಕವೇ ಆಸ್ತಿ ಮಾರಾಟಕ್ಕೆ ಅನುಮತಿ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿದೆ.</p>.<p>ಸಹಾರದ ಪ್ರಮುಖ ಆಸ್ತಿಯನ್ನು ಗರಿಷ್ಠ ಮೌಲ್ಯದಲ್ಲಿ ಮಾರಾಟ ಮಾಡಿ, ಈ ಮೂಲಕ ಸಂಸ್ಥೆ ಪೂರೈಸಬೇಕಾದ ಹಣಕಾಸಿನ ಬಾಧ್ಯತೆಗಳನ್ನು ನಿರ್ವಹಿಸಲು ಸಂಸ್ಥೆ ನಿರ್ಧರಿಸಿದೆ.</p>.<p>ಸಹಾರ ಸಮೂಹದ ಮುಖ್ಯಸ್ಥ ಸುಬ್ರತಾ ರಾಯ್ ಅವರ ನಿಧನದ ಬಳಿಕ ಹೂಡಿಕೆದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ಮನವಿ ಮಾಡಲಾಗುತ್ತಿದೆ ಎಂದೂ ಅರ್ಜಿಯಲ್ಲಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಹಾರ ಇಂಡಿಯಾ ಕಮರ್ಷಿಯಲ್ ಕಾರ್ಪೊರೇಷನ್ ಲಿಮಿಡೆಟ್ (ಎಸ್ಐಸಿಸಿಎಲ್) ಸಂಸ್ಥೆಯು ತನ್ನ ಆಸ್ತಿಗಳನ್ನು ಮಾರಾಟ ಮಾಡಲು ಅನುಮತಿ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ. </p>.<p>ಮಹಾರಾಷ್ಟ್ರದಲ್ಲಿರುವ ಆ್ಯಂಬಿ ವ್ಯಾಲಿ, ಲಖನೌನ ಸಹಾರ ಸಹೇರ್ ಸೇರಿದಂತೆ 88 ಆಸ್ತಿಯನ್ನು ಅದಾನಿ ಪ್ರಾಪರ್ಟೀಸ್ ಪ್ರೈ.ಲಿಮಿಟೆಡ್ಗೆ ಮಾರಾಟ ಮಾಡಲು ಸಂಸ್ಥೆ ಉದ್ದೇಶಿಸಿದೆ.</p>.<p class="title">ವಕೀಲ ಗೌತಮ್ ಅವಸ್ಥಿ ಅವರ ಮೂಲಕ ಸಹಾರ ಸಂಸ್ಥೆಯು ಈ ಅರ್ಜಿ ಸಲ್ಲಿಸಿದ್ದು, ಅಕ್ಟೋಬರ್ 14ರಂದು ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆಯಿದೆ. </p>.<p class="title">ಸಹಾರ ಸಮೂಹಕ್ಕೆ ಸೇರಿದ ಆಸ್ತಿಯ ಮಾರಾಟಕ್ಕೆ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ) ಅನುಮತಿ ನೀಡದ ಕಾರಣ ನ್ಯಾಯಾಲಯದ ಆದೇಶದ ಮೂಲಕವೇ ಆಸ್ತಿ ಮಾರಾಟಕ್ಕೆ ಅನುಮತಿ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿದೆ.</p>.<p>ಸಹಾರದ ಪ್ರಮುಖ ಆಸ್ತಿಯನ್ನು ಗರಿಷ್ಠ ಮೌಲ್ಯದಲ್ಲಿ ಮಾರಾಟ ಮಾಡಿ, ಈ ಮೂಲಕ ಸಂಸ್ಥೆ ಪೂರೈಸಬೇಕಾದ ಹಣಕಾಸಿನ ಬಾಧ್ಯತೆಗಳನ್ನು ನಿರ್ವಹಿಸಲು ಸಂಸ್ಥೆ ನಿರ್ಧರಿಸಿದೆ.</p>.<p>ಸಹಾರ ಸಮೂಹದ ಮುಖ್ಯಸ್ಥ ಸುಬ್ರತಾ ರಾಯ್ ಅವರ ನಿಧನದ ಬಳಿಕ ಹೂಡಿಕೆದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ಮನವಿ ಮಾಡಲಾಗುತ್ತಿದೆ ಎಂದೂ ಅರ್ಜಿಯಲ್ಲಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>