ಶ್ರೀನಗರ: ಭಯೋತ್ಪಾದಕರಿಗೆ ದೇಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ತನಿಖಾ ಸಂಸ್ಥೆಯು (ಎಸ್ಐಎ) ಬುಧವಾರ ಕಾಶ್ಮೀರ ಮತ್ತು ನವದೆಹಲಿಯ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ.
ವಿಶೇಷ ನ್ಯಾಯಾಲಯ ಹೊರಡಿಸಿದ ಶೋಧ ವಾರಂಟ್ಗಳ ಅನುಸಾರ ನವದೆಹಲಿ, ಶ್ರೀನಗರ, ಅನಂತನಾಗ್ ಮತ್ತು ಪುಲ್ವಾಮಾದ ಹಲವು ಸ್ಥಳಗಳಲ್ಲಿ ತನಿಖಾಧಿಕಾರಿಗಳು ದಾಳಿ ನಡೆಸಿದ್ದಾರೆ.
‘ಶೋಧದ ವೇಳೆ ಶಂಕಿತ ಸ್ಥಳಗಳಲ್ಲಿ ದೋಷಾರೋಪಣೆಯ ದಾಖಲೆಗಳು, ಎಲೆಕ್ಟ್ರಾನಿಕ್ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆ ಮುಂದುವರಿದಿದೆ. ಪೂರ್ಣಗೊಂಡ ಬಳಿಕ ಮಾಹಿತಿ ಹಂಚಿಕೊಳ್ಳಲಾಗುವುದು’ ಎಂದು ಮೂಲಗಳು ತಿಳಿಸಿವೆ.