<p><strong>ಬೆಂಗಳೂರು:</strong> ಛತ್ತೀಸಗಡದ ನವ ರಾಯಪುರ ಸಾಯಿ ಸಂಜೀವನಿ ಆಸ್ಪತ್ರೆಯಲ್ಲಿ ಹೃದಯರೋಗ ಸಮಸ್ಯೆಯಿಂದ ಗುಣಮುಖರಾದ ಎರಡು ಸಾವಿರ ಮಕ್ಕಳು ಒಟ್ಟಿಗೆ ದೀಪ ಬೆಳಗಿಸುವ ಮೂಲಕ ಗಿನ್ನಿಸ್ ದಾಖಲೆ ಸೇರಿದ್ದಾರೆ.</p>.<p>ಅಲ್ಲಿನ ಶ್ರೀ ಸತ್ಯಸಾಯಿ ಸಂಜೀವನಿ ಮಕ್ಕಳ ಹೃದಯ ಚಿಕಿತ್ಸಾ ಹಾಗೂ ವಿಶೇಷ ಆರೈಕೆ ಕೇಂದ್ರ, ಭಾರತದ ಮೊದಲ ಚಾರಿಟೆಬಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ. ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಸಾವಿರಾರು ಮಕ್ಕಳಿಗೆ ಪುನರ್ ಜನ್ಮ ನೀಡಿದ ಕೀರ್ತಿ ಈ ಆಸ್ಪತ್ರೆಗೆ ಸಲ್ಲುತ್ತದೆ. ನ. 20ರಂದು ಆಸ್ಪತ್ರೆಯ 10ನೇ ವಾರ್ಷಿಕೋತ್ಸವ ಆಚರಿಸಲಾಯಿತು. ಈ ಸಮಯದಲ್ಲಿ ಗುಣ ಮುಖರಾದ ಮಕ್ಕಳು ಒಟ್ಟಿಗೆ ದೀಪ ಬೆಳಗಿದರು. ಎಲ್ಲ ಮಕ್ಕಳು ಬಡತನದ ಹಿನ್ನೆಲೆಯ ಕುಟುಂಬದಿಂದ ಬಂದವರು. ಹುಟ್ಟಿದಾಗಲೇ ಹೃದಯ ಸಮಸ್ಯೆಗೆ ಒಳ<br />ಗಾದವರು. ಅವರಿಗೆಸಂಕೀರ್ಣ ಶಸ್ತ್ರಚಿಕಿತ್ಸೆಗಳು ಸೇರಿದಂತೆ ಎಲ್ಲ ರೀತಿಯ ಚಿಕಿತ್ಸೆಗಳನ್ನೂ ಸಂಪೂರ್ಣ ಉಚಿತವಾಗಿ ನೀಡಲಾಗಿದೆ ಎಂದುಶ್ರೀ ಸತ್ಯಸಾಯಿ ಆರೋಗ್ಯ ಮತ್ತು ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಡಾ.ಸಿ.ಶ್ರೀನಿವಾಸ್ ಮಾಹಿತಿ ನೀಡಿದರು.</p>.<p>‘ನಾವು ಪ್ರಪಂಚದ ಮಕ್ಕಳ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇವೆ. ದೀಪಗಳ ಬೆಳಗುವಿಕೆ ಪ್ರೀತಿಯ ಶಕ್ತಿಯ ಸಂಕೇತ. ಆಧುನಿಕ ಉಪಕರಣಗಳನ್ನು ಒಳಗೊಂಡ ಸತ್ಯಸಾಯಿ ಸಂಜೀವನಿ ಆಸ್ಪತ್ರೆ ನಿಸ್ವಾರ್ಥ ಸೇವೆಗೆ ಹೆಸರಾಗಿದೆ.ಜಾತಿ-ಮತದ ಭೇದವಿಲ್ಲದೆ ಸಂಕೀರ್ಣ ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ನೀಡುತ್ತಿದ್ದೇವೆ. ಇದುವರೆಗೂ 23 ಸಾವಿರ ಜನರು ಸೌಲಭ್ಯ ಪಡೆದಿದ್ದಾರೆ’ ಎಂದರು.</p>.<p>ಸೇನೆಯ ಪ್ರತಿನಿಧಿಗಳು, ಅರೆಸೇನಾ ಪಡೆಗಳು, ರಾಜ್ಯ ಪೊಲೀಸ್, ಎನ್ಸಿಸಿ, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ ಮಕ್ಕಳು ಸಂಭ್ರಮಕ್ಕೆ ಸಾಕ್ಷಿಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಛತ್ತೀಸಗಡದ ನವ ರಾಯಪುರ ಸಾಯಿ ಸಂಜೀವನಿ ಆಸ್ಪತ್ರೆಯಲ್ಲಿ ಹೃದಯರೋಗ ಸಮಸ್ಯೆಯಿಂದ ಗುಣಮುಖರಾದ ಎರಡು ಸಾವಿರ ಮಕ್ಕಳು ಒಟ್ಟಿಗೆ ದೀಪ ಬೆಳಗಿಸುವ ಮೂಲಕ ಗಿನ್ನಿಸ್ ದಾಖಲೆ ಸೇರಿದ್ದಾರೆ.</p>.<p>ಅಲ್ಲಿನ ಶ್ರೀ ಸತ್ಯಸಾಯಿ ಸಂಜೀವನಿ ಮಕ್ಕಳ ಹೃದಯ ಚಿಕಿತ್ಸಾ ಹಾಗೂ ವಿಶೇಷ ಆರೈಕೆ ಕೇಂದ್ರ, ಭಾರತದ ಮೊದಲ ಚಾರಿಟೆಬಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ. ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಸಾವಿರಾರು ಮಕ್ಕಳಿಗೆ ಪುನರ್ ಜನ್ಮ ನೀಡಿದ ಕೀರ್ತಿ ಈ ಆಸ್ಪತ್ರೆಗೆ ಸಲ್ಲುತ್ತದೆ. ನ. 20ರಂದು ಆಸ್ಪತ್ರೆಯ 10ನೇ ವಾರ್ಷಿಕೋತ್ಸವ ಆಚರಿಸಲಾಯಿತು. ಈ ಸಮಯದಲ್ಲಿ ಗುಣ ಮುಖರಾದ ಮಕ್ಕಳು ಒಟ್ಟಿಗೆ ದೀಪ ಬೆಳಗಿದರು. ಎಲ್ಲ ಮಕ್ಕಳು ಬಡತನದ ಹಿನ್ನೆಲೆಯ ಕುಟುಂಬದಿಂದ ಬಂದವರು. ಹುಟ್ಟಿದಾಗಲೇ ಹೃದಯ ಸಮಸ್ಯೆಗೆ ಒಳ<br />ಗಾದವರು. ಅವರಿಗೆಸಂಕೀರ್ಣ ಶಸ್ತ್ರಚಿಕಿತ್ಸೆಗಳು ಸೇರಿದಂತೆ ಎಲ್ಲ ರೀತಿಯ ಚಿಕಿತ್ಸೆಗಳನ್ನೂ ಸಂಪೂರ್ಣ ಉಚಿತವಾಗಿ ನೀಡಲಾಗಿದೆ ಎಂದುಶ್ರೀ ಸತ್ಯಸಾಯಿ ಆರೋಗ್ಯ ಮತ್ತು ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಡಾ.ಸಿ.ಶ್ರೀನಿವಾಸ್ ಮಾಹಿತಿ ನೀಡಿದರು.</p>.<p>‘ನಾವು ಪ್ರಪಂಚದ ಮಕ್ಕಳ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇವೆ. ದೀಪಗಳ ಬೆಳಗುವಿಕೆ ಪ್ರೀತಿಯ ಶಕ್ತಿಯ ಸಂಕೇತ. ಆಧುನಿಕ ಉಪಕರಣಗಳನ್ನು ಒಳಗೊಂಡ ಸತ್ಯಸಾಯಿ ಸಂಜೀವನಿ ಆಸ್ಪತ್ರೆ ನಿಸ್ವಾರ್ಥ ಸೇವೆಗೆ ಹೆಸರಾಗಿದೆ.ಜಾತಿ-ಮತದ ಭೇದವಿಲ್ಲದೆ ಸಂಕೀರ್ಣ ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ನೀಡುತ್ತಿದ್ದೇವೆ. ಇದುವರೆಗೂ 23 ಸಾವಿರ ಜನರು ಸೌಲಭ್ಯ ಪಡೆದಿದ್ದಾರೆ’ ಎಂದರು.</p>.<p>ಸೇನೆಯ ಪ್ರತಿನಿಧಿಗಳು, ಅರೆಸೇನಾ ಪಡೆಗಳು, ರಾಜ್ಯ ಪೊಲೀಸ್, ಎನ್ಸಿಸಿ, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ ಮಕ್ಕಳು ಸಂಭ್ರಮಕ್ಕೆ ಸಾಕ್ಷಿಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>