<p class="bodytext">ಲಖನೌ: ‘ವಾರಾಣಸಿಯಲ್ಲಿ ಈಗಿರುವ ಜ್ಞಾನವಪಿ ಮಸೀದಿಯ ಭೂಮಿಯು ಕಾಶಿ ವಿಶ್ವನಾಥ ದೇವಾಲಯಕ್ಕೆ ಸೇರಿದ್ದು, ಅದನ್ನು ದೇವಾಲಯಕ್ಕೆ ಹಸ್ತಾಂತರಿಸಬೇಕು’ ಎಂದು ಅಖಿಲ ಭಾರತೀಯ ಸಂತ ಸಮಿತಿಯು (ಎಬಿಎಸ್ಎಸ್) ಭಾನುವಾರ ಮುಸ್ಲಿಂ ಸಮುದಾಯಕ್ಕೆ ಮನವಿ ಮಾಡಿದೆ.</p>.<p class="bodytext">‘ಒಂದು ವೇಳೆ ಭೂಮಿಯನ್ನು ಹಸ್ತಾಂತರಿಸದಿದ್ದಲ್ಲಿ ಈ ಸಂಬಂಧ ಆಂದೋಲವನ್ನು ಪ್ರಾರಂಭಿಸಲಾಗುವುದು’ಎಂದು ಎಬಿಎಸ್ಎಸ್ ಬೆದರಿಕೆ ಹಾಕಿದೆ.</p>.<p class="bodytext">‘ಹಿಂದೂಗಳಿಗೆ ಸೇರಿದ ಎಲ್ಲವನ್ನೂ ನೀಡಿ. ಇಲ್ಲದಿದ್ದರೆ ನಾವು ಅಯೋಧ್ಯೆಯನ್ನು ತೆಗೆದುಕೊಂಡ ರೀತಿಯಲ್ಲಿ ತೆಗೆದುಕೊಳ್ಳುತ್ತೇವೆ’ ಎಂದು ಸಮಿತಿಯ ಹಿರಿಯ ಸದಸ್ಯರೊಬ್ಬರು ಹೇಳಿದ್ದಾರೆ.</p>.<p class="bodytext">ಸಮಿತಿಯ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಲುವಾಗಿ ಸದಸ್ಯರು ವಾರಾಣಸಿಗೆ ಭೇಟಿ ನೀಡಿದ್ದು, ‘ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಹಿಂದೂಗಳು ದೇಣಿಗೆ ನೀಡಬೇಕು ಹಾಗೂ ಇದಕ್ಕಾಗಿಯೇ ಹಲವು ಕಾರ್ಯಕ್ರಮಗಳನ್ನು ಸಂಘಟಿಸಬೇಕು’ಎಂದೂ ಹೇಳಿದ್ದಾರೆ.</p>.<p>ವಿಶ್ವನಾಥ ದೇವಾಲಯ ಮತ್ತು ಮಸೀದಿ ಅಸ್ತಿತ್ವದಲ್ಲಿದ್ದ ಇಡೀ ಜಮೀನಿನ ಮಾಲೀಕತ್ವವನ್ನು ಪ್ರತಿಪಾದಿಸುವ ಕುರಿತ ಅರ್ಜಿ ಬಗ್ಗೆ ವಾರಾಣಸಿ ಜಿಲ್ಲಾ ನ್ಯಾಯಾಲಯವು ಈಗಾಗಲೇ ವಿಚಾರಣೆ ನಡೆಸುತ್ತಿದೆ. ದೇವಾಲಯದ ಒಂದು ಭಾಗವನ್ನು ನೆಲಸಮಗೊಳಿಸಿದ ನಂತರ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.</p>.<p>ಇದೇ ರೀತಿ ಮಥುರಾದ ಶ್ರೀಕೃಷ್ಣನ ಜನ್ಮಭೂಮಿ ಬಳಿ ಇರುವ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸಬೇಕು ಎಂದು ಕೋರಿ ಮಥುರಾ ನ್ಯಾಯಾಲಯವೊಂದಕ್ಕೆ ಮೂರನೇ ಅರ್ಜಿ ಸಲ್ಲಿಸಲಾಗಿದೆ.</p>.<p>ಕಾಶಿ ವಿಶ್ವನಾಥ ದೇವಾಲಯ ಹಾಗೂ ಮಥುರಾದ ಶ್ರೀಕೃಷ್ಣ ಜನ್ಮಭೂಮಿಯನ್ನು ಸ್ವತಂತ್ರಗೊಳಿಸುವುದಾಗಿ ಈ ಹಿಂದೆ ಬಿಜೆಪಿಯ ನಾಯಕರು ಪ್ರತಿಜ್ಞೆ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext">ಲಖನೌ: ‘ವಾರಾಣಸಿಯಲ್ಲಿ ಈಗಿರುವ ಜ್ಞಾನವಪಿ ಮಸೀದಿಯ ಭೂಮಿಯು ಕಾಶಿ ವಿಶ್ವನಾಥ ದೇವಾಲಯಕ್ಕೆ ಸೇರಿದ್ದು, ಅದನ್ನು ದೇವಾಲಯಕ್ಕೆ ಹಸ್ತಾಂತರಿಸಬೇಕು’ ಎಂದು ಅಖಿಲ ಭಾರತೀಯ ಸಂತ ಸಮಿತಿಯು (ಎಬಿಎಸ್ಎಸ್) ಭಾನುವಾರ ಮುಸ್ಲಿಂ ಸಮುದಾಯಕ್ಕೆ ಮನವಿ ಮಾಡಿದೆ.</p>.<p class="bodytext">‘ಒಂದು ವೇಳೆ ಭೂಮಿಯನ್ನು ಹಸ್ತಾಂತರಿಸದಿದ್ದಲ್ಲಿ ಈ ಸಂಬಂಧ ಆಂದೋಲವನ್ನು ಪ್ರಾರಂಭಿಸಲಾಗುವುದು’ಎಂದು ಎಬಿಎಸ್ಎಸ್ ಬೆದರಿಕೆ ಹಾಕಿದೆ.</p>.<p class="bodytext">‘ಹಿಂದೂಗಳಿಗೆ ಸೇರಿದ ಎಲ್ಲವನ್ನೂ ನೀಡಿ. ಇಲ್ಲದಿದ್ದರೆ ನಾವು ಅಯೋಧ್ಯೆಯನ್ನು ತೆಗೆದುಕೊಂಡ ರೀತಿಯಲ್ಲಿ ತೆಗೆದುಕೊಳ್ಳುತ್ತೇವೆ’ ಎಂದು ಸಮಿತಿಯ ಹಿರಿಯ ಸದಸ್ಯರೊಬ್ಬರು ಹೇಳಿದ್ದಾರೆ.</p>.<p class="bodytext">ಸಮಿತಿಯ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಲುವಾಗಿ ಸದಸ್ಯರು ವಾರಾಣಸಿಗೆ ಭೇಟಿ ನೀಡಿದ್ದು, ‘ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಹಿಂದೂಗಳು ದೇಣಿಗೆ ನೀಡಬೇಕು ಹಾಗೂ ಇದಕ್ಕಾಗಿಯೇ ಹಲವು ಕಾರ್ಯಕ್ರಮಗಳನ್ನು ಸಂಘಟಿಸಬೇಕು’ಎಂದೂ ಹೇಳಿದ್ದಾರೆ.</p>.<p>ವಿಶ್ವನಾಥ ದೇವಾಲಯ ಮತ್ತು ಮಸೀದಿ ಅಸ್ತಿತ್ವದಲ್ಲಿದ್ದ ಇಡೀ ಜಮೀನಿನ ಮಾಲೀಕತ್ವವನ್ನು ಪ್ರತಿಪಾದಿಸುವ ಕುರಿತ ಅರ್ಜಿ ಬಗ್ಗೆ ವಾರಾಣಸಿ ಜಿಲ್ಲಾ ನ್ಯಾಯಾಲಯವು ಈಗಾಗಲೇ ವಿಚಾರಣೆ ನಡೆಸುತ್ತಿದೆ. ದೇವಾಲಯದ ಒಂದು ಭಾಗವನ್ನು ನೆಲಸಮಗೊಳಿಸಿದ ನಂತರ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.</p>.<p>ಇದೇ ರೀತಿ ಮಥುರಾದ ಶ್ರೀಕೃಷ್ಣನ ಜನ್ಮಭೂಮಿ ಬಳಿ ಇರುವ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸಬೇಕು ಎಂದು ಕೋರಿ ಮಥುರಾ ನ್ಯಾಯಾಲಯವೊಂದಕ್ಕೆ ಮೂರನೇ ಅರ್ಜಿ ಸಲ್ಲಿಸಲಾಗಿದೆ.</p>.<p>ಕಾಶಿ ವಿಶ್ವನಾಥ ದೇವಾಲಯ ಹಾಗೂ ಮಥುರಾದ ಶ್ರೀಕೃಷ್ಣ ಜನ್ಮಭೂಮಿಯನ್ನು ಸ್ವತಂತ್ರಗೊಳಿಸುವುದಾಗಿ ಈ ಹಿಂದೆ ಬಿಜೆಪಿಯ ನಾಯಕರು ಪ್ರತಿಜ್ಞೆ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>