ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ನ ಮಾಜಿ ನಾಯಕ ಸಜ್ಜನ್ಕುಮಾರ್ ಡಿಸೆಂಬರ್ 31ರಂದು ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆ ಇದೆ.
‘ದೆಹಲಿ ಹೈಕೋರ್ಟ್ ಡಿ.31ಕ್ಕೆ ಹಾಜರಾಗುವಂತೆ ಸೂಚಿಸಿತ್ತು. ನ್ಯಾಯಾಲಯದ ಆದೇಶವನ್ನು ಪಾಲಿಸಲಾಗುವುದು’ ಎಂದು ಸಜ್ಜನ್ಕುಮಾರ್ ಪರ ವಕೀಲ ಅನಿಲ್ಕುಮಾರ್ ಶರ್ಮಾ ತಿಳಿಸಿದ್ದಾರೆ.