<p><strong>ನವದೆಹಲಿ:</strong> 1984ರ ಸಿಖ್ ವಿರೋಧಿ ಗಲಭೆ ಸಂದರ್ಭದಲ್ಲಿ ದೆಹಲಿಯ ಜನಕಪುರಿ ಮತ್ತು ವಿಕಾಸಪುರಿ ಪ್ರದೇಶಗಳಲ್ಲಿ ನಡೆದ ಹಿಂಸಾಚಾರ ಸಂಬಂಧ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಅವರ ಹೇಳಿಕೆಯನ್ನು ದೆಹಲಿಯ ನ್ಯಾಯಾಲಯವು ಸೋಮವಾರ ದಾಖಲಿಸಿಕೊಂಡಿತು.</p>.<p>ವಿಶೇಷ ನ್ಯಾಯಾಧೀಶ ದಿಗ್ವಿನಯ್ ಸಿಂಗ್ ಅವರು ಸಜ್ಜನ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡರು.</p>.<p>ಸಜ್ಜನ್ ಕುಮಾರ್ ಅವರು, ‘ನಾನು ನಿರಪರಾಧಿ, ನನ್ನ ವಿರುದ್ಧ ಯಾವುದೇ ಸಾಕ್ಷ್ಯ ಇಲ್ಲ. ಪ್ರಕರಣದಲ್ಲಿ ನ್ಯಾಯಯುತ ತನಿಖೆ ನಡೆಯುತ್ತಿಲ್ಲ. ಆಧಾರರಹಿತ ಆರೋಪಗಳನ್ನು ಮಾಡಿ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲಾಗಿದೆ’ ಎಂದು ಹೇಳಿದರು.</p>.<p>‘ಸಾಕ್ಷಿಗಳು ನನ್ನ ಹೆಸರನ್ನು ಉಲ್ಲೇಖಿಸಿರಲಿಲ್ಲ. ದಶಕಗಳ ನಂತರ ನನ್ನ ಹೆಸರನ್ನು ಎಳೆದು ತರಲಾಗಿದೆ. ನನ್ನ ವಿರುದ್ಧದ ಪ್ರಕರಣವು ಸುಳ್ಳು ಮತ್ತು ರಾಜಕೀಯ ಪ್ರೇರಿತ. ಘಟನೆ ಸಂದರ್ಭದಲ್ಲಿ ನಾನು ರಕ್ತದಾನ ಶಿಬಿರ ಮತ್ತು ಶಾಂತಿಯುತ ಮೆರವಣಿಗೆ ಆಯೋಜಿಸಿದ್ದೆ’ ಎಂದೂ ತಿಳಿಸಿದರು.</p>.<p>ನಂತರ ನ್ಯಾಯಾಲಯವು ವಿಚಾರಣೆಯನ್ನು ಜುಲೈ 29ಕ್ಕೆ ಮುಂದೂಡಿತು.</p>.<p>ಸಿಖ್ ವಿರೋಧಿ ಗಲಭೆಯಲ್ಲಿ ನಡೆದ ಹಿಂಸಾಚಾರದ ವಿರುದ್ಧ ದಾಖಲಾದ ದೂರುಗಳ ಆಧಾರದಲ್ಲಿ ಸಜ್ಜನ್ ಅವರ ವಿರುದ್ಧ ವಿಶೇಷ ತನಿಖಾ ತಂಡವು 2015 ಫೆಬ್ರುವರಿಯಲ್ಲಿ ಎರಡು ಎಫ್ಐಆರ್ ದಾಖಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 1984ರ ಸಿಖ್ ವಿರೋಧಿ ಗಲಭೆ ಸಂದರ್ಭದಲ್ಲಿ ದೆಹಲಿಯ ಜನಕಪುರಿ ಮತ್ತು ವಿಕಾಸಪುರಿ ಪ್ರದೇಶಗಳಲ್ಲಿ ನಡೆದ ಹಿಂಸಾಚಾರ ಸಂಬಂಧ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಅವರ ಹೇಳಿಕೆಯನ್ನು ದೆಹಲಿಯ ನ್ಯಾಯಾಲಯವು ಸೋಮವಾರ ದಾಖಲಿಸಿಕೊಂಡಿತು.</p>.<p>ವಿಶೇಷ ನ್ಯಾಯಾಧೀಶ ದಿಗ್ವಿನಯ್ ಸಿಂಗ್ ಅವರು ಸಜ್ಜನ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡರು.</p>.<p>ಸಜ್ಜನ್ ಕುಮಾರ್ ಅವರು, ‘ನಾನು ನಿರಪರಾಧಿ, ನನ್ನ ವಿರುದ್ಧ ಯಾವುದೇ ಸಾಕ್ಷ್ಯ ಇಲ್ಲ. ಪ್ರಕರಣದಲ್ಲಿ ನ್ಯಾಯಯುತ ತನಿಖೆ ನಡೆಯುತ್ತಿಲ್ಲ. ಆಧಾರರಹಿತ ಆರೋಪಗಳನ್ನು ಮಾಡಿ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲಾಗಿದೆ’ ಎಂದು ಹೇಳಿದರು.</p>.<p>‘ಸಾಕ್ಷಿಗಳು ನನ್ನ ಹೆಸರನ್ನು ಉಲ್ಲೇಖಿಸಿರಲಿಲ್ಲ. ದಶಕಗಳ ನಂತರ ನನ್ನ ಹೆಸರನ್ನು ಎಳೆದು ತರಲಾಗಿದೆ. ನನ್ನ ವಿರುದ್ಧದ ಪ್ರಕರಣವು ಸುಳ್ಳು ಮತ್ತು ರಾಜಕೀಯ ಪ್ರೇರಿತ. ಘಟನೆ ಸಂದರ್ಭದಲ್ಲಿ ನಾನು ರಕ್ತದಾನ ಶಿಬಿರ ಮತ್ತು ಶಾಂತಿಯುತ ಮೆರವಣಿಗೆ ಆಯೋಜಿಸಿದ್ದೆ’ ಎಂದೂ ತಿಳಿಸಿದರು.</p>.<p>ನಂತರ ನ್ಯಾಯಾಲಯವು ವಿಚಾರಣೆಯನ್ನು ಜುಲೈ 29ಕ್ಕೆ ಮುಂದೂಡಿತು.</p>.<p>ಸಿಖ್ ವಿರೋಧಿ ಗಲಭೆಯಲ್ಲಿ ನಡೆದ ಹಿಂಸಾಚಾರದ ವಿರುದ್ಧ ದಾಖಲಾದ ದೂರುಗಳ ಆಧಾರದಲ್ಲಿ ಸಜ್ಜನ್ ಅವರ ವಿರುದ್ಧ ವಿಶೇಷ ತನಿಖಾ ತಂಡವು 2015 ಫೆಬ್ರುವರಿಯಲ್ಲಿ ಎರಡು ಎಫ್ಐಆರ್ ದಾಖಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>