<p><strong>ನವದೆಹಲಿ:</strong> ‘ನಾವು ಯಾವುದೇ ಸೇಡಿನ ರಾಜಕಾರಣ ಮಾಡುವುದಿಲ್ಲ. ಪ್ರತಿಭಟನನಿರತ ಕುಸ್ತಿಪಟುಗಳು ಕ್ರೀಡೆಯಲ್ಲಿ ಮುಂದುವರಿಯಲು ಬಯಸಿದರೆ ನ್ಯಾಯಯುತವಾದ ಅವಕಾಶ ನೀಡಲು ಬದ್ಧ’ ಎಂದು ಡಬ್ಲ್ಯುಎಫ್ಐ ಮಾಜಿ ಅಧ್ಯಕ್ಷ ಬ್ರಿಜ್ಭೂಷಣ್ ಸಿಂಗ್ ಹೇಳಿದ್ಧಾರೆ. </p><p>ಗುರುವಾರ ಚುನಾವಣೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾವುದೇ ಪಕ್ಷಪಾತ ಇರುವುದಿಲ್ಲ. ಎಲ್ಲರಿಗೂ ಡಬ್ಲ್ಯುಎಫ್ಐ ಬೆಂಬಲ ಸಿಗಲಿದೆ. ನಾವು ಆಟವನ್ನು ನೋಡಿಕೊಳ್ಳಬೇಕೇ ಹೊರತು ಕುಸ್ತಿಪಟುಗಳ ತಪ್ಪುಗಳನ್ನಲ್ಲ’ ಎಂದರು.</p><p>ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ಸಂಜಯ್ ಸಿಂಗ್, ‘ಕಳೆದ 7-8 ತಿಂಗಳುಗಳಲ್ಲಿ ತೊಂದರೆ ಅನುಭವಿಸಿದ ದೇಶದ ಸಾವಿರಾರು ಕುಸ್ತಿಪಟುಗಳಿಗೆ ಸಂದ ಗೆಲುವು ಇದಾಗಿದೆ’ ಎಂದು ಸಂಜಯ್ ಸಿಂಗ್ ಹೇಳಿದರು. </p><p>‘ನಾವು ರಾಜಕೀಯಕ್ಕೆ ರಾಜಕೀಯ ಮೂಲಕ ಮತ್ತು ಕುಸ್ತಿಗೆ ಕುಸ್ತಿ ಮೂಲಕ ಪ್ರತಿಕ್ರಿಯಿಸುತ್ತೇವೆ’ ಎಂದು ಸಂಜಯ್ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p><p>ಬ್ರಿಜ್ ಭೂಷಣ್ ಬಣವುಎಲ್ಲ 4 ಉಪಾಧ್ಯಕ್ಷ ಸ್ಥಾನಗಳನ್ನು ಗೆದ್ದುಕೊಂಡಿತು. ದೆಹಲಿಯ ಜೈ ಪ್ರಕಾಶ್ (37), ಪಶ್ಚಿಮ ಬಂಗಾಳದ ಅಸಿತ್ ಕುಮಾರ್ ಸಹಾ (42), ಪಂಜಾಬ್ನ ಕರ್ತಾರ್ ಸಿಂಗ್ (44) ಮತ್ತು ಮಣಿಪುರದ ಎನ್ ಫೋನಿ (38) ಗೆದ್ದಿದ್ದಾರೆ.</p><p>ಬ್ರಿಜ್ ಭೂಷಣ್ ಬಣದ ಉತ್ತರಾಖಂಡದ ಸತ್ಯಪಾಲ್ ಸಿಂಗ್ ದೇಶ್ವಾಲ್ ನೂತನ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಕೇವಲ ಐದು ಮತ ಪಡೆದಿದ್ದಾರೆ.</p>.ಬ್ರಿಜ್ಭೂಷಣ್ ಆಪ್ತ WFI ಅಧ್ಯಕ್ಷ; ಕುಸ್ತಿಗೆ ವಿದಾಯ ಹೇಳಿದ ಸಾಕ್ಷಿ ಮಲಿಕ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ನಾವು ಯಾವುದೇ ಸೇಡಿನ ರಾಜಕಾರಣ ಮಾಡುವುದಿಲ್ಲ. ಪ್ರತಿಭಟನನಿರತ ಕುಸ್ತಿಪಟುಗಳು ಕ್ರೀಡೆಯಲ್ಲಿ ಮುಂದುವರಿಯಲು ಬಯಸಿದರೆ ನ್ಯಾಯಯುತವಾದ ಅವಕಾಶ ನೀಡಲು ಬದ್ಧ’ ಎಂದು ಡಬ್ಲ್ಯುಎಫ್ಐ ಮಾಜಿ ಅಧ್ಯಕ್ಷ ಬ್ರಿಜ್ಭೂಷಣ್ ಸಿಂಗ್ ಹೇಳಿದ್ಧಾರೆ. </p><p>ಗುರುವಾರ ಚುನಾವಣೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾವುದೇ ಪಕ್ಷಪಾತ ಇರುವುದಿಲ್ಲ. ಎಲ್ಲರಿಗೂ ಡಬ್ಲ್ಯುಎಫ್ಐ ಬೆಂಬಲ ಸಿಗಲಿದೆ. ನಾವು ಆಟವನ್ನು ನೋಡಿಕೊಳ್ಳಬೇಕೇ ಹೊರತು ಕುಸ್ತಿಪಟುಗಳ ತಪ್ಪುಗಳನ್ನಲ್ಲ’ ಎಂದರು.</p><p>ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ಸಂಜಯ್ ಸಿಂಗ್, ‘ಕಳೆದ 7-8 ತಿಂಗಳುಗಳಲ್ಲಿ ತೊಂದರೆ ಅನುಭವಿಸಿದ ದೇಶದ ಸಾವಿರಾರು ಕುಸ್ತಿಪಟುಗಳಿಗೆ ಸಂದ ಗೆಲುವು ಇದಾಗಿದೆ’ ಎಂದು ಸಂಜಯ್ ಸಿಂಗ್ ಹೇಳಿದರು. </p><p>‘ನಾವು ರಾಜಕೀಯಕ್ಕೆ ರಾಜಕೀಯ ಮೂಲಕ ಮತ್ತು ಕುಸ್ತಿಗೆ ಕುಸ್ತಿ ಮೂಲಕ ಪ್ರತಿಕ್ರಿಯಿಸುತ್ತೇವೆ’ ಎಂದು ಸಂಜಯ್ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p><p>ಬ್ರಿಜ್ ಭೂಷಣ್ ಬಣವುಎಲ್ಲ 4 ಉಪಾಧ್ಯಕ್ಷ ಸ್ಥಾನಗಳನ್ನು ಗೆದ್ದುಕೊಂಡಿತು. ದೆಹಲಿಯ ಜೈ ಪ್ರಕಾಶ್ (37), ಪಶ್ಚಿಮ ಬಂಗಾಳದ ಅಸಿತ್ ಕುಮಾರ್ ಸಹಾ (42), ಪಂಜಾಬ್ನ ಕರ್ತಾರ್ ಸಿಂಗ್ (44) ಮತ್ತು ಮಣಿಪುರದ ಎನ್ ಫೋನಿ (38) ಗೆದ್ದಿದ್ದಾರೆ.</p><p>ಬ್ರಿಜ್ ಭೂಷಣ್ ಬಣದ ಉತ್ತರಾಖಂಡದ ಸತ್ಯಪಾಲ್ ಸಿಂಗ್ ದೇಶ್ವಾಲ್ ನೂತನ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಕೇವಲ ಐದು ಮತ ಪಡೆದಿದ್ದಾರೆ.</p>.ಬ್ರಿಜ್ಭೂಷಣ್ ಆಪ್ತ WFI ಅಧ್ಯಕ್ಷ; ಕುಸ್ತಿಗೆ ವಿದಾಯ ಹೇಳಿದ ಸಾಕ್ಷಿ ಮಲಿಕ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>