<p><strong>ಸೇಲಂ(ತಮಿಳುನಾಡು):</strong> ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸ್ಥಾಪಕ, ನಟ ವಿಜಯ್ ನೇತೃತ್ವದಲ್ಲಿ ಶುಕ್ರವಾರ ಇಲ್ಲಿ ನಡೆದ ರ್ಯಾಲಿಯಲ್ಲಿ ಭಾಗವಹಿಸಿದ್ದ 37 ವರ್ಷದ ವ್ಯಕ್ತಿಯೊಬ್ಬರು ಕುಸಿದು ಬಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ.</p><p>ಮೃತರನ್ನು ಸೂರಜ್ ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರ ಮೂಲದ ನಿವಾಸಿಯಾಗಿದ್ದ ಇವರು ರ್ಯಾಲಿಯಲ್ಲಿ ಭಾಗವಹಿಸಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಗೆ ಕರೆತರುವ ವೇಳೆಗಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಸೂರಜ್ ಕೆಲ ತಿಂಗಳ ಹಿಂದೆ ಆ್ಯಂಜಿಯೊಪ್ಲಾಸ್ಟಿಗೆ ಒಳಗಾಗಿದ್ದರು. </p><p>‘ಸೂರಜ್ ಅವರು ನಟ ವಿಜಯ್ ಅವರನ್ನು ನೋಡಲು ರ್ಯಾಲಿಗೆ ಹೋಗಿದ್ದರು. ಅಲ್ಲಿಗೆ ಬಂದ ಕೆಲ ಹೊತ್ತಿನಲ್ಲೇ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಆ್ಯಂಬುಲೆನ್ಸ್ ಮೂಲಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಕರೆತರುವ ಮುನ್ನವೇ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೇಲಂ(ತಮಿಳುನಾಡು):</strong> ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸ್ಥಾಪಕ, ನಟ ವಿಜಯ್ ನೇತೃತ್ವದಲ್ಲಿ ಶುಕ್ರವಾರ ಇಲ್ಲಿ ನಡೆದ ರ್ಯಾಲಿಯಲ್ಲಿ ಭಾಗವಹಿಸಿದ್ದ 37 ವರ್ಷದ ವ್ಯಕ್ತಿಯೊಬ್ಬರು ಕುಸಿದು ಬಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ.</p><p>ಮೃತರನ್ನು ಸೂರಜ್ ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರ ಮೂಲದ ನಿವಾಸಿಯಾಗಿದ್ದ ಇವರು ರ್ಯಾಲಿಯಲ್ಲಿ ಭಾಗವಹಿಸಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಗೆ ಕರೆತರುವ ವೇಳೆಗಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಸೂರಜ್ ಕೆಲ ತಿಂಗಳ ಹಿಂದೆ ಆ್ಯಂಜಿಯೊಪ್ಲಾಸ್ಟಿಗೆ ಒಳಗಾಗಿದ್ದರು. </p><p>‘ಸೂರಜ್ ಅವರು ನಟ ವಿಜಯ್ ಅವರನ್ನು ನೋಡಲು ರ್ಯಾಲಿಗೆ ಹೋಗಿದ್ದರು. ಅಲ್ಲಿಗೆ ಬಂದ ಕೆಲ ಹೊತ್ತಿನಲ್ಲೇ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಆ್ಯಂಬುಲೆನ್ಸ್ ಮೂಲಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಕರೆತರುವ ಮುನ್ನವೇ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>