<p><strong>ನವದೆಹಲಿ:</strong> ‘ಪಾಕಿಸ್ತಾನ, ಬಾಂಗ್ಲಾದೇಶಕ್ಕೆ ಹೋದರೆ, ಮನೆಯಲ್ಲಿರುವಂತಹ ಭಾವನೆ ಉಂಟಾಯಿತು’ ಎಂದು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೊಡಾ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರು ತಕ್ಷಣವೇ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ.</p>.<p>‘ನೆರೆ ರಾಷ್ಟ್ರಗಳ ಜೊತೆಗೆ ಭಾರತದ ಸಂಬಂಧವು ಗಣನೀಯವಾಗಿ ಸುಧಾರಿಸಬೇಕು ಎಂದು ಸಲಹೆ ನೀಡಿರುವ ಪಿತ್ರೊಡಾ, ಈ ಹಿಂದೆ ಪಾಕಿಸ್ತಾನಕ್ಕೆ ಭೇಟಿ ನೀಡಿದ ವೇಳೆ ಮನೆಯಲ್ಲಿ ಇರುವ ಭಾವನೆ ಉಂಟಾಯಿತು’ ಎಂದು ಹೇಳಿದ್ದಾರೆ.</p>.<p>ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ, ‘ಪಿತ್ರೊಡಾ ಹೇಳಿಕೆಯು ದೇಶದ ಸೈನಿಕರು ಹಾಗೂ ಜನರನ್ನು ಅವಮಾನಿಸಿದೆ. ರಾಹುಲ್ ಗಾಂಧಿ ಅವರ ಆದೇಶದ ಮೇರೆಗೆ ಕಾಂಗ್ರೆಸ್ ನಾಯಕರು ಪಾಕಿಸ್ತಾನವನ್ನು ವೈಭವೀಕರಿಸಿ ಮಾತನಾಡುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.</p>.<p>‘ಇದು ಕೇವಲ ಸ್ಯಾಮ್ ಪಿತ್ರೊಡಾ ಹೇಳಿಕೆಯಲ್ಲ. ಇದು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಗಾಂಧಿ–ವಾದ್ರಾ ಕುಟುಂಬದ ನೀತಿಯಾಗಿದೆ. ಈ ಕುಟುಂಬದ ಹೃದಯವು ಭಯೋತ್ಪಾದಕ ಪಾಕಿಸ್ತಾನದಲ್ಲಿ ನೆಲಸಿದೆ’ ಎಂದು ಆರೋಪಿಸಿದ್ದಾರೆ.</p>.<p>ಬಿಜೆಪಿಯ ಈ ಆರೋಪದ ಕುರಿತಂತೆ ಕಾಂಗ್ರೆಸ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.</p>.<p>‘ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಎಂಬುದು ಇಸ್ಲಾಮಾಬಾದ್ ರಾಷ್ಟ್ರೀಯ ಕಾಂಗ್ರೆಸ್ ಆಗಿ ಪರಿವರ್ತನೆಯಾಗಿದೆ’ ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಪಾಕಿಸ್ತಾನ, ಬಾಂಗ್ಲಾದೇಶಕ್ಕೆ ಹೋದರೆ, ಮನೆಯಲ್ಲಿರುವಂತಹ ಭಾವನೆ ಉಂಟಾಯಿತು’ ಎಂದು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೊಡಾ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರು ತಕ್ಷಣವೇ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ.</p>.<p>‘ನೆರೆ ರಾಷ್ಟ್ರಗಳ ಜೊತೆಗೆ ಭಾರತದ ಸಂಬಂಧವು ಗಣನೀಯವಾಗಿ ಸುಧಾರಿಸಬೇಕು ಎಂದು ಸಲಹೆ ನೀಡಿರುವ ಪಿತ್ರೊಡಾ, ಈ ಹಿಂದೆ ಪಾಕಿಸ್ತಾನಕ್ಕೆ ಭೇಟಿ ನೀಡಿದ ವೇಳೆ ಮನೆಯಲ್ಲಿ ಇರುವ ಭಾವನೆ ಉಂಟಾಯಿತು’ ಎಂದು ಹೇಳಿದ್ದಾರೆ.</p>.<p>ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ, ‘ಪಿತ್ರೊಡಾ ಹೇಳಿಕೆಯು ದೇಶದ ಸೈನಿಕರು ಹಾಗೂ ಜನರನ್ನು ಅವಮಾನಿಸಿದೆ. ರಾಹುಲ್ ಗಾಂಧಿ ಅವರ ಆದೇಶದ ಮೇರೆಗೆ ಕಾಂಗ್ರೆಸ್ ನಾಯಕರು ಪಾಕಿಸ್ತಾನವನ್ನು ವೈಭವೀಕರಿಸಿ ಮಾತನಾಡುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.</p>.<p>‘ಇದು ಕೇವಲ ಸ್ಯಾಮ್ ಪಿತ್ರೊಡಾ ಹೇಳಿಕೆಯಲ್ಲ. ಇದು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಗಾಂಧಿ–ವಾದ್ರಾ ಕುಟುಂಬದ ನೀತಿಯಾಗಿದೆ. ಈ ಕುಟುಂಬದ ಹೃದಯವು ಭಯೋತ್ಪಾದಕ ಪಾಕಿಸ್ತಾನದಲ್ಲಿ ನೆಲಸಿದೆ’ ಎಂದು ಆರೋಪಿಸಿದ್ದಾರೆ.</p>.<p>ಬಿಜೆಪಿಯ ಈ ಆರೋಪದ ಕುರಿತಂತೆ ಕಾಂಗ್ರೆಸ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.</p>.<p>‘ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಎಂಬುದು ಇಸ್ಲಾಮಾಬಾದ್ ರಾಷ್ಟ್ರೀಯ ಕಾಂಗ್ರೆಸ್ ಆಗಿ ಪರಿವರ್ತನೆಯಾಗಿದೆ’ ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>