ಲಖನೌ: ನರೇಂದ್ರ ಮೋದಿ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿದ ಎನ್ಡಿಎ ಮೈತ್ರಿಕೂಟದ ಸಂಸದೀಯ ಸಭೆಯಲ್ಲಿ, ಆರ್ಎಲ್ಡಿ ಮುಖ್ಯಸ್ಥ ಜಯಂತ್ ಚೌಧರಿ ಅವರನ್ನು ವೇದಿಕೆಯಲ್ಲಿ ಕೂರಿಸದೇ ಇದ್ದಿದ್ದಕ್ಕೆ, ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಕಿಡಿಕಾರಿವೆ.
‘ಓರ್ವ ಸಂಸದರು ಇರುವ ಪಕ್ಷದ ನಾಯಕರಿಗೆ ವೇದಿಕೆಯಲ್ಲಿ ಆಸನ ನೀಡಲಾಗಿತ್ತು. ಆದರೆ ತಮ್ಮ ಪಕ್ಷದಿಂದ ಇಬ್ಬರು ಸಂಸದರಿದ್ದರೂ ಚೌಧರಿಯವರಿಗೆ ಆಸನ ಕಲ್ಪಿಸಿರಲಿಲ್ಲ’ ಎಂದು ಸಮಾಜವಾದಿ ಪಕ್ಷದ ಮಿಡಿಯಾ ಸೆಲ್ ‘ಎಕ್ಸ್‘ನಲ್ಲಿ ಪೋಸ್ಟ್ ಮಾಡಿದೆ.