<p><strong>ಸಂಭಲ್ (ಉತ್ತರ ಪ್ರದೇಶ):</strong> ಸಂಭಲ್ನಲ್ಲಿರುವ ಶಾಹಿ ಜಮಾ ಮಸೀದಿ ಸಮೀಕ್ಷೆ ಕುರಿತ ವರದಿಯನ್ನು ಕೋರ್ಟ್ ಕಮಿಷನರ್ ಸೋಮವಾರ ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ಅನಾರೋಗ್ಯ ಇರುವ ಕಾರಣ ಇನ್ನೂ 15 ದಿನ ಕಾಲಾವಕಾಶ ನೀಡಬೇಕು ಎಂದು ಅವರು ಕೋರಿದ್ದಾರೆ.</p>.<p>‘ಅರ್ಜಿ ವಿಚಾರಣೆಯನ್ನು ಸಿವಿಲ್ ಕೋರ್ಟ್ ಮುಂದೂಡುವ ಸಾಧ್ಯತೆ ಇದೆ’ ಎಂದು ಕೋರ್ಟ್ ಕಮಿಷನರ್ ರಮೇಶ್ ಸಿಂಗ್ ರಾಘವ್ ಸುದ್ದಿಗಾರರಿಗೆ ತಿಳಿಸಿದರು.</p>.<p>‘ವಿಚಾರಣೆ ಮುಂದೂಡಬೇಕೆಂದು ಅರ್ಜಿ ಸಲ್ಲಿಸಿದ್ದೇನೆ. ಸಮೀಕ್ಷಾ ವರದಿಯು ಸಿದ್ಧವಾಗಿದ್ದು, ಅಂತಿಮ ಹಂತದಲ್ಲಿದೆ. ಮುಚ್ಚಿದ ಲಕೋಟೆಯೊಳಗೆ ವರದಿಯನ್ನು ಸಲ್ಲಿಸಲಾಗುವುದು. ಆದರೆ ಅನಾರೋಗ್ಯ ಕಾರಣದಿಂದ 15 ದಿನ ಕಾಲಾವಕಾಶ ಕೇಳಿದ್ದೇನೆ’ ಎಂದು ಹೇಳಿದರು.</p>.<p>‘ಮೂರ್ನಾಲ್ಕು ದಿನಗಳಿಂದ ಜ್ವರ ಇದೆ. ವರದಿಯನ್ನು ವಿಶ್ಲೇಷಿಸಲು ಸಾಧ್ಯವಾಗುತ್ತಿಲ್ಲ’ ಎಂದು ಹೇಳಿದರು.</p>.<p>ಮೊಘಲ್ ರಾಜ ಬಾಬರ್ 1526ರಲ್ಲಿ ದೇಗುಲವನ್ನು ಕೆಡವಿ ಮಸೀದಿ ನಿರ್ಮಿಸಿದ್ದಾರೆ ಎಂಬ ಅರ್ಜಿ ವಿಚಾರಣೆ ನಡೆಸಿದ್ದ ಸ್ಥಳೀಯ ಕೋರ್ಟ್, ಕಮಿಷನರ್ ಅವರು ಮಸೀದಿಯ ಸಮೀಕ್ಷೆ ನಡೆಸಬೇಕು ಎಂದು ನವೆಂಬರ್ 19ರಂದು ಆದೇಶ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಭಲ್ (ಉತ್ತರ ಪ್ರದೇಶ):</strong> ಸಂಭಲ್ನಲ್ಲಿರುವ ಶಾಹಿ ಜಮಾ ಮಸೀದಿ ಸಮೀಕ್ಷೆ ಕುರಿತ ವರದಿಯನ್ನು ಕೋರ್ಟ್ ಕಮಿಷನರ್ ಸೋಮವಾರ ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ಅನಾರೋಗ್ಯ ಇರುವ ಕಾರಣ ಇನ್ನೂ 15 ದಿನ ಕಾಲಾವಕಾಶ ನೀಡಬೇಕು ಎಂದು ಅವರು ಕೋರಿದ್ದಾರೆ.</p>.<p>‘ಅರ್ಜಿ ವಿಚಾರಣೆಯನ್ನು ಸಿವಿಲ್ ಕೋರ್ಟ್ ಮುಂದೂಡುವ ಸಾಧ್ಯತೆ ಇದೆ’ ಎಂದು ಕೋರ್ಟ್ ಕಮಿಷನರ್ ರಮೇಶ್ ಸಿಂಗ್ ರಾಘವ್ ಸುದ್ದಿಗಾರರಿಗೆ ತಿಳಿಸಿದರು.</p>.<p>‘ವಿಚಾರಣೆ ಮುಂದೂಡಬೇಕೆಂದು ಅರ್ಜಿ ಸಲ್ಲಿಸಿದ್ದೇನೆ. ಸಮೀಕ್ಷಾ ವರದಿಯು ಸಿದ್ಧವಾಗಿದ್ದು, ಅಂತಿಮ ಹಂತದಲ್ಲಿದೆ. ಮುಚ್ಚಿದ ಲಕೋಟೆಯೊಳಗೆ ವರದಿಯನ್ನು ಸಲ್ಲಿಸಲಾಗುವುದು. ಆದರೆ ಅನಾರೋಗ್ಯ ಕಾರಣದಿಂದ 15 ದಿನ ಕಾಲಾವಕಾಶ ಕೇಳಿದ್ದೇನೆ’ ಎಂದು ಹೇಳಿದರು.</p>.<p>‘ಮೂರ್ನಾಲ್ಕು ದಿನಗಳಿಂದ ಜ್ವರ ಇದೆ. ವರದಿಯನ್ನು ವಿಶ್ಲೇಷಿಸಲು ಸಾಧ್ಯವಾಗುತ್ತಿಲ್ಲ’ ಎಂದು ಹೇಳಿದರು.</p>.<p>ಮೊಘಲ್ ರಾಜ ಬಾಬರ್ 1526ರಲ್ಲಿ ದೇಗುಲವನ್ನು ಕೆಡವಿ ಮಸೀದಿ ನಿರ್ಮಿಸಿದ್ದಾರೆ ಎಂಬ ಅರ್ಜಿ ವಿಚಾರಣೆ ನಡೆಸಿದ್ದ ಸ್ಥಳೀಯ ಕೋರ್ಟ್, ಕಮಿಷನರ್ ಅವರು ಮಸೀದಿಯ ಸಮೀಕ್ಷೆ ನಡೆಸಬೇಕು ಎಂದು ನವೆಂಬರ್ 19ರಂದು ಆದೇಶ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>