<p><strong>ಸಂಭಲ್</strong>: ನವೆಂಬರ್ 24ರ ಹಿಂಸಾಚಾರ ಸಂಬಂಧ ಹೇಳಿಕೆ ದಾಖಲಿಸಿಕೊಳ್ಳಲು ಇಲ್ಲಿನ ಶಾಹಿ ಜಮಾ ಮಸೀದಿಯ ಅಧ್ಯಕ್ಷ ಝಫರ್ ಅಲಿಯವರನ್ನು ಸ್ಥಳೀಯ ಪೊಲೀಸ್ನ ವಿಶೇಷ ತನಿಖಾ ತಂಡ ವಶಕ್ಕೆ ಪಡೆದಿದೆ.</p><p>ಮೊಘಲರ ಕಾಲದ ಈ ಮಸೀದಿಯನ್ನು ಹಳೆಯ ಹಿಂದೂ ದೇಗುಲವನ್ನು ಒಡೆದು ನಿರ್ಮಿಸಲಾಗಿದೆ ಎನ್ನುವ ವಾದ ಇದೆ.</p>.ಸಂಭಲ್ ಕಟ್ಟಡ ಧ್ವಂಸ: ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ . <p>ಮಸೀದಿಯ ಅಧ್ಯಕ್ಷರನ್ನು ಬಂಧಿಸಲಾಗಿದೆಯೇ ಎಂದು ಪಿಟಿಐ ಕೇಳಿದ ಪ್ರಶ್ನೆಗೆ, ‘ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಎಸ್ಐಟಿ ವಶಕ್ಕೆ ಪಡೆದಿದೆ’ ಎಂದು ಸಂಭಲ್ ಕೊತ್ವಾಲಿ ಉಸ್ತುವಾರಿ ಅನುಜ್ ಕುಮಾರ್ ತೋಮರ್ ಹೇಳಿದ್ದಾರೆ.</p><p>ನವೆಂಬರ್ 24ರ ಹಿಂಸಾಚಾರಕ್ಕೆ ಸಂಬಂಧಿಸಿಯೇ ಅವರನ್ನು ವಶಕ್ಕೆ ಪಡೆಯಲಾಗಿದೆಯೇ ಎನ್ನುವ ಪ್ರಶ್ನೆಗೆ, ಅದರ ಸಂಬಂಧ ವಿಚಾರಣೆ ನಡೆಸಲು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.</p>.ಸಂಭಲ್ ಹಿಂಸಾಚಾರ: ಎಸ್ಪಿ ಸಂಸದ ಝಿಯಾವುರ್ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತಡೆ.<p>ಮಸೀದಿಯನ್ನು ಸಮೀಕ್ಷೆ ನಡೆಸಬೇಕು ಎಂದು ಕೋರ್ಟ್ ಆದೇಶ ಮಾಡಿದ ಬಳಿಕ ಕಳೆದ ವರ್ಷ ನವೆಂಬರ್ 24ರಂದು ಸಂಭಲ್ನಲ್ಲಿ ಹಿಂಸಾಚಾರ ನಡೆದಿತ್ತು. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದರು. ಪೊಲೀಸ್ ಸಿಬ್ಬಂದಿ ಸೇರಿ ಹಲವರು ಗಾಯಗೊಂಡಿದ್ದಾರೆ.</p> .ರಾಹುಲ್ ಗಾಂಧಿಗೆ ಸಂಭಲ್ ಪ್ರವೇಶ ನಿರಾಕರಣೆ: ಮಲ್ಲಿಕಾರ್ಜುನ ಖರ್ಗೆ ಕಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಭಲ್</strong>: ನವೆಂಬರ್ 24ರ ಹಿಂಸಾಚಾರ ಸಂಬಂಧ ಹೇಳಿಕೆ ದಾಖಲಿಸಿಕೊಳ್ಳಲು ಇಲ್ಲಿನ ಶಾಹಿ ಜಮಾ ಮಸೀದಿಯ ಅಧ್ಯಕ್ಷ ಝಫರ್ ಅಲಿಯವರನ್ನು ಸ್ಥಳೀಯ ಪೊಲೀಸ್ನ ವಿಶೇಷ ತನಿಖಾ ತಂಡ ವಶಕ್ಕೆ ಪಡೆದಿದೆ.</p><p>ಮೊಘಲರ ಕಾಲದ ಈ ಮಸೀದಿಯನ್ನು ಹಳೆಯ ಹಿಂದೂ ದೇಗುಲವನ್ನು ಒಡೆದು ನಿರ್ಮಿಸಲಾಗಿದೆ ಎನ್ನುವ ವಾದ ಇದೆ.</p>.ಸಂಭಲ್ ಕಟ್ಟಡ ಧ್ವಂಸ: ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ . <p>ಮಸೀದಿಯ ಅಧ್ಯಕ್ಷರನ್ನು ಬಂಧಿಸಲಾಗಿದೆಯೇ ಎಂದು ಪಿಟಿಐ ಕೇಳಿದ ಪ್ರಶ್ನೆಗೆ, ‘ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಎಸ್ಐಟಿ ವಶಕ್ಕೆ ಪಡೆದಿದೆ’ ಎಂದು ಸಂಭಲ್ ಕೊತ್ವಾಲಿ ಉಸ್ತುವಾರಿ ಅನುಜ್ ಕುಮಾರ್ ತೋಮರ್ ಹೇಳಿದ್ದಾರೆ.</p><p>ನವೆಂಬರ್ 24ರ ಹಿಂಸಾಚಾರಕ್ಕೆ ಸಂಬಂಧಿಸಿಯೇ ಅವರನ್ನು ವಶಕ್ಕೆ ಪಡೆಯಲಾಗಿದೆಯೇ ಎನ್ನುವ ಪ್ರಶ್ನೆಗೆ, ಅದರ ಸಂಬಂಧ ವಿಚಾರಣೆ ನಡೆಸಲು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.</p>.ಸಂಭಲ್ ಹಿಂಸಾಚಾರ: ಎಸ್ಪಿ ಸಂಸದ ಝಿಯಾವುರ್ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತಡೆ.<p>ಮಸೀದಿಯನ್ನು ಸಮೀಕ್ಷೆ ನಡೆಸಬೇಕು ಎಂದು ಕೋರ್ಟ್ ಆದೇಶ ಮಾಡಿದ ಬಳಿಕ ಕಳೆದ ವರ್ಷ ನವೆಂಬರ್ 24ರಂದು ಸಂಭಲ್ನಲ್ಲಿ ಹಿಂಸಾಚಾರ ನಡೆದಿತ್ತು. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದರು. ಪೊಲೀಸ್ ಸಿಬ್ಬಂದಿ ಸೇರಿ ಹಲವರು ಗಾಯಗೊಂಡಿದ್ದಾರೆ.</p> .ರಾಹುಲ್ ಗಾಂಧಿಗೆ ಸಂಭಲ್ ಪ್ರವೇಶ ನಿರಾಕರಣೆ: ಮಲ್ಲಿಕಾರ್ಜುನ ಖರ್ಗೆ ಕಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>