<p><strong>ಸಂಭಲ್:</strong> ಕಳೆದ ವರ್ಷ ಇಲ್ಲಿನ ಶಾಹಿ ಜುಮಾ ಮಸೀದಿ ಸಮೀಕ್ಷೆ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿರುವ ದೀಲಿಪ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.</p><p>ಶರೀಕ್ ಸತ್ಥಾ ನೇತೃತ್ವದ ಗ್ಯಾಂಗ್ನಲ್ಲಿ ಗುರುತಿಸಿಕೊಂಡಿದ್ದ ದಿಲೀಪ್ ಅಲಿಯಾಸ್ ಹರೀಶ್ ಸುಮಾರು 30 ವರ್ಷಗಳಿಂದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದು ಪೊಲೀಸರಿಗೆ ಬೇಕಾಗಿದ್ದ. ಇವನ ಸುಳಿವು ಕೊಟ್ಟವರಿಗೆ ₹ 25 ಸಾವಿರ ಬಹುಮಾನ ಘೋಷಣೆ ಮಾಡಲಾಗಿತ್ತು.</p>.Sambhal Violence | SP ಸಂಸದ ರೆಹಮಾನ್ ಬಾರ್ಕ್ಗೆ ನೋಟಿಸ್ ಜಾರಿ ಮಾಡಿದ SIT.Sambhal Violence: ಸಂಭಲ್ ಜಮಾ ಮಸೀದಿಯ ಅಧ್ಯಕ್ಷರನ್ನು ವಶಕ್ಕೆ ಪಡೆದ ಎಸ್ಐಟಿ. <p>ಕಳೆದ ವರ್ಷ ನವೆಂಬರ್ 24 ರಂದು ಎರಡನೇ ಸುತ್ತಿನ ಸಮೀಕ್ಷೆಯ ಸಂದರ್ಭದಲ್ಲಿ, ಪ್ರತಿಭಟನಾನಿರತ ಸ್ಥಳೀಯರು ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಘರ್ಷಣೆ, ಹಿಂಸಾಚಾರಕ್ಕೆ ತಿರುಗಿತ್ತು. ಘಟನೆಯಲ್ಲಿ ನಾಲ್ವರು ಸಾವಿಗೀಡಾಗಿ, ಹಲವರು ಗಾಯಗೊಂಡಿದ್ದರು.</p><p> ಸ್ಥಳದಲ್ಲಿದ್ದ ದೇಗುಲವನ್ನು ಕೆಡವಿ ಮೊಘಲ್ ದೊರೆ 1526 ರಲ್ಲಿ ಮಸೀದಿ ನಿರ್ಮಿಸಿದ್ದ ಎಂದು ಪ್ರತಿಪಾದಿಸಿದ್ದ ಹಿಂದೂ ಸಂಘಟನೆಗಳು ನ್ಯಾಯಾಲಯದ ಮೆಟ್ಟಿಲೇರಿದ್ದರು. ಮಸೀದಿಯ ಸಮೀಕ್ಷೆಗೆ ನ್ಯಾಯಾಲಯ ಆದೇಶಿಸಿತ್ತು.</p>.Sambhal Violence: ಸಂಭಾಲ್ ಹಿಂಸಾಚಾರ ಪ್ರಕರಣದಲ್ಲಿ ಮತ್ತೊಬ್ಬ ಬಂಧನ.Sambhal Violence | ಲೋಕಸಭೆಯಲ್ಲಿ ಮತ್ತೆ ಗದ್ದಲ; ವಿಪಕ್ಷಗಳಿಂದ ಸಭಾತ್ಯಾಗ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಭಲ್:</strong> ಕಳೆದ ವರ್ಷ ಇಲ್ಲಿನ ಶಾಹಿ ಜುಮಾ ಮಸೀದಿ ಸಮೀಕ್ಷೆ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿರುವ ದೀಲಿಪ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.</p><p>ಶರೀಕ್ ಸತ್ಥಾ ನೇತೃತ್ವದ ಗ್ಯಾಂಗ್ನಲ್ಲಿ ಗುರುತಿಸಿಕೊಂಡಿದ್ದ ದಿಲೀಪ್ ಅಲಿಯಾಸ್ ಹರೀಶ್ ಸುಮಾರು 30 ವರ್ಷಗಳಿಂದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದು ಪೊಲೀಸರಿಗೆ ಬೇಕಾಗಿದ್ದ. ಇವನ ಸುಳಿವು ಕೊಟ್ಟವರಿಗೆ ₹ 25 ಸಾವಿರ ಬಹುಮಾನ ಘೋಷಣೆ ಮಾಡಲಾಗಿತ್ತು.</p>.Sambhal Violence | SP ಸಂಸದ ರೆಹಮಾನ್ ಬಾರ್ಕ್ಗೆ ನೋಟಿಸ್ ಜಾರಿ ಮಾಡಿದ SIT.Sambhal Violence: ಸಂಭಲ್ ಜಮಾ ಮಸೀದಿಯ ಅಧ್ಯಕ್ಷರನ್ನು ವಶಕ್ಕೆ ಪಡೆದ ಎಸ್ಐಟಿ. <p>ಕಳೆದ ವರ್ಷ ನವೆಂಬರ್ 24 ರಂದು ಎರಡನೇ ಸುತ್ತಿನ ಸಮೀಕ್ಷೆಯ ಸಂದರ್ಭದಲ್ಲಿ, ಪ್ರತಿಭಟನಾನಿರತ ಸ್ಥಳೀಯರು ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಘರ್ಷಣೆ, ಹಿಂಸಾಚಾರಕ್ಕೆ ತಿರುಗಿತ್ತು. ಘಟನೆಯಲ್ಲಿ ನಾಲ್ವರು ಸಾವಿಗೀಡಾಗಿ, ಹಲವರು ಗಾಯಗೊಂಡಿದ್ದರು.</p><p> ಸ್ಥಳದಲ್ಲಿದ್ದ ದೇಗುಲವನ್ನು ಕೆಡವಿ ಮೊಘಲ್ ದೊರೆ 1526 ರಲ್ಲಿ ಮಸೀದಿ ನಿರ್ಮಿಸಿದ್ದ ಎಂದು ಪ್ರತಿಪಾದಿಸಿದ್ದ ಹಿಂದೂ ಸಂಘಟನೆಗಳು ನ್ಯಾಯಾಲಯದ ಮೆಟ್ಟಿಲೇರಿದ್ದರು. ಮಸೀದಿಯ ಸಮೀಕ್ಷೆಗೆ ನ್ಯಾಯಾಲಯ ಆದೇಶಿಸಿತ್ತು.</p>.Sambhal Violence: ಸಂಭಾಲ್ ಹಿಂಸಾಚಾರ ಪ್ರಕರಣದಲ್ಲಿ ಮತ್ತೊಬ್ಬ ಬಂಧನ.Sambhal Violence | ಲೋಕಸಭೆಯಲ್ಲಿ ಮತ್ತೆ ಗದ್ದಲ; ವಿಪಕ್ಷಗಳಿಂದ ಸಭಾತ್ಯಾಗ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>