<p><strong>ನವದೆಹಲಿ:</strong> ಭಾರತ– ಅಮೆರಿಕ ನಡುವಿನ ಮಧ್ಯಂತರ ಒಪ್ಪಂದದ ವಿರುದ್ಧ ಗ್ರಾಮಗಳಲ್ಲಿ ಸಾರ್ವಜನಿಕ ಸಭೆ ನಡೆಸುವಂತೆ ಸಂಯುಕ್ತ ಕಿಸಾನ್ ಮೋರ್ಚಾವು (ಎಸ್ಕೆಎಂ) ದೇಶದ ರೈತರಿಗೆ ಭಾನುವಾರ ಮನವಿ ಮಾಡಿದೆ.</p>.<p>ಸಂಸತ್ನ ಬಜೆಟ್ ಅಧಿವೇಶನ ಪುನರಾರಂಭಗೊಳ್ಳುವ ಮೊದಲು ಮಾರ್ಚ್ 9ರೊಳಗೆ ಹಳ್ಳಿಗಳಲ್ಲಿ ಸಭೆ ನಡೆಸಿ, ನಿರ್ಣಯವನ್ನು ಅಂಗೀಕರಿಸಿ ರಾಷ್ಟ್ರಪತಿಗೆ ಪತ್ರ ಬರೆಯುವಂತೆ 2020–21ರಲ್ಲಿ ರೈತರ ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತ ಸಂಘಟನೆಗಳ ಒಕ್ಕೂಟವಾದ ಎಸ್ಕೆಎಂ ತಿಳಿಸಿದೆ.</p>.<p>ರೈತರು ತಮ್ಮೂರುಗಳಲ್ಲಿ ಸಭೆ ನಡೆಸಿದ ಬಳಿಕ ಮೆರವಣಿಗೆ ಮೂಲಕ ಅಂಚೆ ಕಚೇರಿಗೆ ತೆರಳಿ ತಾವು ಬರೆದ ಬಹಿರಂಗ ಪತ್ರವನ್ನು ರಾಷ್ಟ್ರಪತಿ ಭವನಕ್ಕೆ ಕಳುಹಿಸಬೇಕು ಎಂದಿದೆ.</p>.<p><strong>ಪ್ರಧಾನಿಗೆ ನಿರ್ದೇಶನ ನೀಡಿ...</strong></p>.<p>ಅಮೆರಿಕದ ಜೊತೆಗಿನ ವಾಣಿಜ್ಯ ಒಪ್ಪಂದವನ್ನು ಮುಂದುವರಿಸದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಿರ್ದೇಶನ ನೀಡುವಂತೆ ಎಸ್ಕೆಎಂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದೆ.</p>.<p>ಬಹುರಾಷ್ಟ್ರೀಯ ಸಂಸ್ಥೆಗಳ ಲೂಟಿಗೆ ಕೃಷಿ ಕ್ಷೇತ್ರವನ್ನು ಮುಕ್ತಗೊಳಿಸಲು ಒಪ್ಪಿಕೊಂಡಿರುವುದಕ್ಕಾಗಿ ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ಅವರನ್ನು ವಜಾಗೊಳಿಸುವಂತೆಯೂ ಆಗ್ರಹಿಸಿದೆ.</p>.<p>ಭಾರತ– ಅಮೆರಿಕ ನಡುವಿನ ಮಧ್ಯಂತರ ಒಪ್ಪಂದವು ‘ಸಾಮ್ರಾಜ್ಯಶಾಹಿ ಶಕ್ತಿಯ ಒತ್ತಡಗಳಿಗೆ ಬಲಿಯಾಗುವ ಪರಿಸ್ಥಿತಿಯನ್ನು ಸೃಷ್ಟಿಸಿದೆ. ದೇಶದ ಸ್ವಾವಲಂಬನೆ ಮತ್ತು ಸಾರ್ವಭೌಮತ್ವಕ್ಕೆ ಅಪಾಯವನ್ನುಂಟು ಮಾಡಿದೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದೆ.</p>.<p>‘ಟ್ರಂಪ್ ಘೋಷಣೆಯಂತೆ ಮಧ್ಯಂತರ ಒಪ್ಪಂದದಲ್ಲಿ ಅಂಗೀಕರಿಸಲ್ಪಟ್ಟಿರುವ ನಿಯಮಗಳು, ಭಾರತೀಯ ಆರ್ಥಿಕತೆ ಮತ್ತು ರೈತರ ಹಿತಾಸಕ್ತಿಗಳಿಗೆ ಹಾನಿಕಾರಕ ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತಿದೆ. ಇದರ ಬಗ್ಗೆ ಕೇಂದ್ರ ಸರ್ಕಾರವು ಮೌನ ವಹಿಸಿರುವುದು ಕೆಟ್ಟದ್ದು’ ಎಂದು ದೂರಿದೆ.</p>.<p>ಭತ್ತ ಹಾಗೂ ಗೋಧಿ ಬೆಳೆಯುತ್ತಿರುವ ರೈತರಿಗೆ ನೀಡಲಾಗುತ್ತಿರುವ ಸಬ್ಸಿಡಿಯನ್ನು ಕೊನೆಗೊಳಿಸುವಂತೆ ಕೇಂದ್ರ ಹಣಕಾಸು ಸಚಿವರು ರಾಜ್ಯ ಸರ್ಕಾರಗಳಿಗೆ ಕಳೆದ ಜನವರಿಯಲ್ಲಿ ಪತ್ರ ಬರೆದಿದ್ದು, ಈ ಪತ್ರವನ್ನು ವಾಪಸ್ ಪಡೆಯುವಂತೆ ನಿರ್ಮಲಾ ಸೀತಾರಾಮನ್ ಅವರಿಗೆ ಸೂಚಿಸಿ ಎಂದು ಎಸ್ಕೆಎಂ ತನ್ನ ಪತ್ರದಲ್ಲಿ ರಾಷ್ಟ್ರಪತಿಯವರನ್ನು ಒತ್ತಾಯಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತ– ಅಮೆರಿಕ ನಡುವಿನ ಮಧ್ಯಂತರ ಒಪ್ಪಂದದ ವಿರುದ್ಧ ಗ್ರಾಮಗಳಲ್ಲಿ ಸಾರ್ವಜನಿಕ ಸಭೆ ನಡೆಸುವಂತೆ ಸಂಯುಕ್ತ ಕಿಸಾನ್ ಮೋರ್ಚಾವು (ಎಸ್ಕೆಎಂ) ದೇಶದ ರೈತರಿಗೆ ಭಾನುವಾರ ಮನವಿ ಮಾಡಿದೆ.</p>.<p>ಸಂಸತ್ನ ಬಜೆಟ್ ಅಧಿವೇಶನ ಪುನರಾರಂಭಗೊಳ್ಳುವ ಮೊದಲು ಮಾರ್ಚ್ 9ರೊಳಗೆ ಹಳ್ಳಿಗಳಲ್ಲಿ ಸಭೆ ನಡೆಸಿ, ನಿರ್ಣಯವನ್ನು ಅಂಗೀಕರಿಸಿ ರಾಷ್ಟ್ರಪತಿಗೆ ಪತ್ರ ಬರೆಯುವಂತೆ 2020–21ರಲ್ಲಿ ರೈತರ ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತ ಸಂಘಟನೆಗಳ ಒಕ್ಕೂಟವಾದ ಎಸ್ಕೆಎಂ ತಿಳಿಸಿದೆ.</p>.<p>ರೈತರು ತಮ್ಮೂರುಗಳಲ್ಲಿ ಸಭೆ ನಡೆಸಿದ ಬಳಿಕ ಮೆರವಣಿಗೆ ಮೂಲಕ ಅಂಚೆ ಕಚೇರಿಗೆ ತೆರಳಿ ತಾವು ಬರೆದ ಬಹಿರಂಗ ಪತ್ರವನ್ನು ರಾಷ್ಟ್ರಪತಿ ಭವನಕ್ಕೆ ಕಳುಹಿಸಬೇಕು ಎಂದಿದೆ.</p>.<p><strong>ಪ್ರಧಾನಿಗೆ ನಿರ್ದೇಶನ ನೀಡಿ...</strong></p>.<p>ಅಮೆರಿಕದ ಜೊತೆಗಿನ ವಾಣಿಜ್ಯ ಒಪ್ಪಂದವನ್ನು ಮುಂದುವರಿಸದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಿರ್ದೇಶನ ನೀಡುವಂತೆ ಎಸ್ಕೆಎಂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದೆ.</p>.<p>ಬಹುರಾಷ್ಟ್ರೀಯ ಸಂಸ್ಥೆಗಳ ಲೂಟಿಗೆ ಕೃಷಿ ಕ್ಷೇತ್ರವನ್ನು ಮುಕ್ತಗೊಳಿಸಲು ಒಪ್ಪಿಕೊಂಡಿರುವುದಕ್ಕಾಗಿ ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ಅವರನ್ನು ವಜಾಗೊಳಿಸುವಂತೆಯೂ ಆಗ್ರಹಿಸಿದೆ.</p>.<p>ಭಾರತ– ಅಮೆರಿಕ ನಡುವಿನ ಮಧ್ಯಂತರ ಒಪ್ಪಂದವು ‘ಸಾಮ್ರಾಜ್ಯಶಾಹಿ ಶಕ್ತಿಯ ಒತ್ತಡಗಳಿಗೆ ಬಲಿಯಾಗುವ ಪರಿಸ್ಥಿತಿಯನ್ನು ಸೃಷ್ಟಿಸಿದೆ. ದೇಶದ ಸ್ವಾವಲಂಬನೆ ಮತ್ತು ಸಾರ್ವಭೌಮತ್ವಕ್ಕೆ ಅಪಾಯವನ್ನುಂಟು ಮಾಡಿದೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದೆ.</p>.<p>‘ಟ್ರಂಪ್ ಘೋಷಣೆಯಂತೆ ಮಧ್ಯಂತರ ಒಪ್ಪಂದದಲ್ಲಿ ಅಂಗೀಕರಿಸಲ್ಪಟ್ಟಿರುವ ನಿಯಮಗಳು, ಭಾರತೀಯ ಆರ್ಥಿಕತೆ ಮತ್ತು ರೈತರ ಹಿತಾಸಕ್ತಿಗಳಿಗೆ ಹಾನಿಕಾರಕ ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತಿದೆ. ಇದರ ಬಗ್ಗೆ ಕೇಂದ್ರ ಸರ್ಕಾರವು ಮೌನ ವಹಿಸಿರುವುದು ಕೆಟ್ಟದ್ದು’ ಎಂದು ದೂರಿದೆ.</p>.<p>ಭತ್ತ ಹಾಗೂ ಗೋಧಿ ಬೆಳೆಯುತ್ತಿರುವ ರೈತರಿಗೆ ನೀಡಲಾಗುತ್ತಿರುವ ಸಬ್ಸಿಡಿಯನ್ನು ಕೊನೆಗೊಳಿಸುವಂತೆ ಕೇಂದ್ರ ಹಣಕಾಸು ಸಚಿವರು ರಾಜ್ಯ ಸರ್ಕಾರಗಳಿಗೆ ಕಳೆದ ಜನವರಿಯಲ್ಲಿ ಪತ್ರ ಬರೆದಿದ್ದು, ಈ ಪತ್ರವನ್ನು ವಾಪಸ್ ಪಡೆಯುವಂತೆ ನಿರ್ಮಲಾ ಸೀತಾರಾಮನ್ ಅವರಿಗೆ ಸೂಚಿಸಿ ಎಂದು ಎಸ್ಕೆಎಂ ತನ್ನ ಪತ್ರದಲ್ಲಿ ರಾಷ್ಟ್ರಪತಿಯವರನ್ನು ಒತ್ತಾಯಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>