ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸನಾತನ ಧರ್ಮ ಹೇಳಿಕೆ: ಇಂಡಿಯಾ ಮೈತ್ರಿಕೂಟದ ವಿರುದ್ಧ ಜೆ.ಪಿ ನಡ್ಡಾ ಕಿಡಿ

Published 14 ಸೆಪ್ಟೆಂಬರ್ 2023, 10:33 IST
Last Updated 14 ಸೆಪ್ಟೆಂಬರ್ 2023, 10:33 IST
ಅಕ್ಷರ ಗಾತ್ರ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಇಂಡಿಯಾ ಮೈತ್ರಿಕೂಟವು ಸನಾತನ ಧರ್ಮವನ್ನು ನಿಂದಿಸುವುದು ಹಾಗೂ ಪತ್ರಿಕಾ ಮಾಧ್ಯಮಗಳನ್ನು ಬೆದರಿಸುವ ಕೆಲಸದಲ್ಲಿಯೇ ತೊಡಗಿದೆ ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆ.ಪಿ ನಡ್ಡಾ ಆರೋಪಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಇಂಡಿಯಾ ಮೈತ್ರಿಕೂಟವು ಸನಾತನ ಧರ್ಮದ ವಿರುದ್ಧ ಹೇಳಿಕೆಗಳನ್ನು ನೀಡುವುದು ಹಾಗೂ ಮಾಧ್ಯಮ ಪ್ರತಿನಿಧಿಗಳನ್ನು ಗುರಿಯಾಗಿಸಿಕೊಂಡು ಅವರ ವಿರುದ್ಧ ಎಫ್‌ಐಆರ್‌ ದಾಖಲಿಸುವುದು, ಬೆದರಿಸುವ ಕಾರ್ಯದಲ್ಲಿ ತೊಡಗಿದೆ. ಈ ಮೂಲಕ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಉಂಟಾಗಿದ್ದ ವಾತಾವರಣದ ನೈಜ ಚಿತ್ರಣವು ಇನ್ನೂ ಈ ಪಕ್ಷಗಳಲ್ಲಿ ಅಸ್ಥಿತ್ವದಲ್ಲಿದೆ ಎಂದು ಕಿಡಿಕಾರಿದ್ದಾರೆ.

ಇಂಡಿಯಾ ಮೈತ್ರಿಕೂಟವು ಈ ರೀತಿಯ ನಡವಳಿಕೆಗಳನ್ನು ನಿಲ್ಲಿಸಬೇಕು. ದೇಶದ ಅಭಿವೃದ್ಧಿ ಮತ್ತು ಜನರಿಗೆ ಸೇವೆ ಸಲ್ಲಿಸುವುದರ ಬಗ್ಗೆ ಗಮನಹರಿಸಬೇಕು ಎಂದು ನಡ್ಡಾ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT