ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಇಂಡಿಯಾ ಮೈತ್ರಿಕೂಟವು ಸನಾತನ ಧರ್ಮದ ವಿರುದ್ಧ ಹೇಳಿಕೆಗಳನ್ನು ನೀಡುವುದು ಹಾಗೂ ಮಾಧ್ಯಮ ಪ್ರತಿನಿಧಿಗಳನ್ನು ಗುರಿಯಾಗಿಸಿಕೊಂಡು ಅವರ ವಿರುದ್ಧ ಎಫ್ಐಆರ್ ದಾಖಲಿಸುವುದು, ಬೆದರಿಸುವ ಕಾರ್ಯದಲ್ಲಿ ತೊಡಗಿದೆ. ಈ ಮೂಲಕ ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಉಂಟಾಗಿದ್ದ ವಾತಾವರಣದ ನೈಜ ಚಿತ್ರಣವು ಇನ್ನೂ ಈ ಪಕ್ಷಗಳಲ್ಲಿ ಅಸ್ಥಿತ್ವದಲ್ಲಿದೆ ಎಂದು ಕಿಡಿಕಾರಿದ್ದಾರೆ.