<p><strong>ಬೋಲ್ಪುರ(ಪಶ್ಚಿಮ ಬಂಗಾಳ</strong>): ಸಂದೇಶ್ಖಾಲಿ ಘಟನೆ ಕುರಿತಂತೆ ಹಣ ಬಲದಿಂದ ಬಿಜೆಪಿಯು ಸುಳ್ಳು ಮಾಹಿತಿ ಹಬ್ಬಿಸಿತ್ತು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಆರೋಪಿಸಿದ್ದಾರೆ.</p>.<p>ಬೋಲ್ಪುರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಬಿಜೆಪಿಯೇ ಈ ಸಂಚು ರೂಪಿಸಿರುವ ಸಂಗತಿ ಇತ್ತೀಚೆಗೆ ನಡೆದ ಮಾರುವೇಷ ಕಾರ್ಯಾಚರಣೆಯಲ್ಲಿ ಬಹಿರಂಗಗೊಂಡಿದೆ. ಹೀಗಾಗಿ, ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೊಸಳೆ ಕಣ್ಣೀರು ಸುರಿಸುವುದನ್ನು ನಿಲ್ಲಿಸಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>‘ಬಿಜೆಪಿ ನಾಯಕರು ಸುಳ್ಳುಗಳನ್ನು ಸೃಷ್ಟಿಸಿದ್ದು, ಸುಳ್ಳುಗಳನ್ನು ಹಬ್ಬಿಸುವುದಕ್ಕೆ ಕೆಲವರಿಗೆ ಹಣ ನೀಡುವ ಮೂಲಕ ಈ ಪಿತೂರಿ ರೂಪಿಸಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.</p>.<p>‘ಸಂದೇಶ್ಖಾಲಿ ಕುರಿತಂತೆ ಸುಳ್ಳು ಸುದ್ದಿಗಳನ್ನು ಹಬ್ಬಿಸಲು ಬಿಜೆಪಿ ಇಷ್ಟೊಂದು ಕೀಳು ಮಟ್ಟಕ್ಕೆ ಇಳಿಯುತ್ತದೆ ಎಂದು ಯಾರಾದರೂ ಊಹಿಸಿದ್ದಿರಾ’ ಎಂದು ಪ್ರಶ್ನಿಸಿದರು.</p>.<p>‘ಇಂತಹ ಘೋರ ಆರೋಪಗಳನ್ನು ಮಾಡುವ ಮೂಲಕ ಪಶ್ಚಿಮ ಬಂಗಾಳದ ತಾಯಂದಿರ ಗೌರವಕ್ಕೆ ಧಕ್ಕೆ ತರಬೇಡಿ. ನಮ್ಮ ಪಕ್ಷದ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸುವುದಕ್ಕೆ ರಾಜ್ಯದ ಮಹಿಳೆಯರಿಗೆ ಹಣ ನೀಡುವ ಮೂಲಕ ಅವರಿಗೆ ಅಗೌರವ ತೋರಬೇಡಿ’ ಎಂದೂ ಹೇಳಿದರು.</p>.<p>ಸಂದೇಶಖಾಲಿ ಬಿಜೆಪಿ ಮಂಡಲ ಘಟಕದ ಅಧ್ಯಕ್ಷ ಎಂದು ಹೇಳಲಾಗುವ ವ್ಯಕ್ತಿಯೊಬ್ಬರು, ‘ಈ ಸಂಚಿನ ಹಿಂದೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಕೈವಾಡ ಇದೆ’ ಎಂದು ಹೇಳುತ್ತಿರುವ ವಿಡಿಯೊವೊಂದನ್ನು ಟಿಎಂಸಿ, ಸಾಮಾಜಿಕ ಜಾಲತಾಣಗಳಲ್ಲಿ ಶನಿವಾರ ಬಿಡುಗಡೆ ಮಾಡಿತ್ತು.</p>.<p>‘ಶಹಜಹಾನ್ ಶೇಖ್ ಸೇರಿದಂತೆ ಮೂವರು ಟಿಎಂಸಿ ನಾಯಕರ ವಿರುದ್ಧ ಅತ್ಯಾಚಾರದ ಆರೋಪಗಳನ್ನು ಮಾಡುವಂತೆ ಸ್ಥಳೀಯ 3–4 ಮಹಿಳೆಯರನ್ನು ಪ್ರಚೋದಿಸುವಂತೆ ಸುವೇಂದು ಅಧಿಕಾರಿ ಹಾಗೂ ಇತರ ಬಿಜೆಪಿ ನಾಯಕರು ನನಗೆ ಸೂಚಿಸಿದ್ದರು’ ಎಂಬುದಾಗಿ ಆ ವ್ಯಕ್ತಿ ಹೇಳುತ್ತಿರುವುದು ವಿಡಿಯೊದಲ್ಲಿದೆ.</p>.<p>ಈ ವಿಡಿಯೊದ ವಿಶ್ವಾಸಾರ್ಹತೆಯನ್ನು ಸ್ವತಂತ್ರವಾಗಿ ಪರಿಶೀಲನೆ ನಡೆಸಿಲ್ಲ ಎಂದು ಪಿಟಿಐ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೋಲ್ಪುರ(ಪಶ್ಚಿಮ ಬಂಗಾಳ</strong>): ಸಂದೇಶ್ಖಾಲಿ ಘಟನೆ ಕುರಿತಂತೆ ಹಣ ಬಲದಿಂದ ಬಿಜೆಪಿಯು ಸುಳ್ಳು ಮಾಹಿತಿ ಹಬ್ಬಿಸಿತ್ತು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಆರೋಪಿಸಿದ್ದಾರೆ.</p>.<p>ಬೋಲ್ಪುರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಬಿಜೆಪಿಯೇ ಈ ಸಂಚು ರೂಪಿಸಿರುವ ಸಂಗತಿ ಇತ್ತೀಚೆಗೆ ನಡೆದ ಮಾರುವೇಷ ಕಾರ್ಯಾಚರಣೆಯಲ್ಲಿ ಬಹಿರಂಗಗೊಂಡಿದೆ. ಹೀಗಾಗಿ, ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೊಸಳೆ ಕಣ್ಣೀರು ಸುರಿಸುವುದನ್ನು ನಿಲ್ಲಿಸಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>‘ಬಿಜೆಪಿ ನಾಯಕರು ಸುಳ್ಳುಗಳನ್ನು ಸೃಷ್ಟಿಸಿದ್ದು, ಸುಳ್ಳುಗಳನ್ನು ಹಬ್ಬಿಸುವುದಕ್ಕೆ ಕೆಲವರಿಗೆ ಹಣ ನೀಡುವ ಮೂಲಕ ಈ ಪಿತೂರಿ ರೂಪಿಸಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.</p>.<p>‘ಸಂದೇಶ್ಖಾಲಿ ಕುರಿತಂತೆ ಸುಳ್ಳು ಸುದ್ದಿಗಳನ್ನು ಹಬ್ಬಿಸಲು ಬಿಜೆಪಿ ಇಷ್ಟೊಂದು ಕೀಳು ಮಟ್ಟಕ್ಕೆ ಇಳಿಯುತ್ತದೆ ಎಂದು ಯಾರಾದರೂ ಊಹಿಸಿದ್ದಿರಾ’ ಎಂದು ಪ್ರಶ್ನಿಸಿದರು.</p>.<p>‘ಇಂತಹ ಘೋರ ಆರೋಪಗಳನ್ನು ಮಾಡುವ ಮೂಲಕ ಪಶ್ಚಿಮ ಬಂಗಾಳದ ತಾಯಂದಿರ ಗೌರವಕ್ಕೆ ಧಕ್ಕೆ ತರಬೇಡಿ. ನಮ್ಮ ಪಕ್ಷದ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸುವುದಕ್ಕೆ ರಾಜ್ಯದ ಮಹಿಳೆಯರಿಗೆ ಹಣ ನೀಡುವ ಮೂಲಕ ಅವರಿಗೆ ಅಗೌರವ ತೋರಬೇಡಿ’ ಎಂದೂ ಹೇಳಿದರು.</p>.<p>ಸಂದೇಶಖಾಲಿ ಬಿಜೆಪಿ ಮಂಡಲ ಘಟಕದ ಅಧ್ಯಕ್ಷ ಎಂದು ಹೇಳಲಾಗುವ ವ್ಯಕ್ತಿಯೊಬ್ಬರು, ‘ಈ ಸಂಚಿನ ಹಿಂದೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಕೈವಾಡ ಇದೆ’ ಎಂದು ಹೇಳುತ್ತಿರುವ ವಿಡಿಯೊವೊಂದನ್ನು ಟಿಎಂಸಿ, ಸಾಮಾಜಿಕ ಜಾಲತಾಣಗಳಲ್ಲಿ ಶನಿವಾರ ಬಿಡುಗಡೆ ಮಾಡಿತ್ತು.</p>.<p>‘ಶಹಜಹಾನ್ ಶೇಖ್ ಸೇರಿದಂತೆ ಮೂವರು ಟಿಎಂಸಿ ನಾಯಕರ ವಿರುದ್ಧ ಅತ್ಯಾಚಾರದ ಆರೋಪಗಳನ್ನು ಮಾಡುವಂತೆ ಸ್ಥಳೀಯ 3–4 ಮಹಿಳೆಯರನ್ನು ಪ್ರಚೋದಿಸುವಂತೆ ಸುವೇಂದು ಅಧಿಕಾರಿ ಹಾಗೂ ಇತರ ಬಿಜೆಪಿ ನಾಯಕರು ನನಗೆ ಸೂಚಿಸಿದ್ದರು’ ಎಂಬುದಾಗಿ ಆ ವ್ಯಕ್ತಿ ಹೇಳುತ್ತಿರುವುದು ವಿಡಿಯೊದಲ್ಲಿದೆ.</p>.<p>ಈ ವಿಡಿಯೊದ ವಿಶ್ವಾಸಾರ್ಹತೆಯನ್ನು ಸ್ವತಂತ್ರವಾಗಿ ಪರಿಶೀಲನೆ ನಡೆಸಿಲ್ಲ ಎಂದು ಪಿಟಿಐ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>