'ಈ ಘಟನೆಯಿಂದ ನಮಗೆ ಆಘಾತವಾಗಿದ್ದು ನೋವುಂಟು ಮಾಡಿದೆ. ಇದು ನಮ್ಮ ಆತ್ಮಸಾಕ್ಷಿಯನ್ನು ಅಲುಗಾಡಿಸಿದೆ. ಸಂದೇಶ್ಖಾಲಿಯ ಸತ್ಯವನ್ನು ಮರೆಮಾಚಲು ಮಮತಾ ಬ್ಯಾನರ್ಜಿ ಪ್ರಯತ್ನಿಸುತ್ತಿದ್ದಾರೆ' ಎಂದು ಬಿಜೆಪಿ ಆರೋಪಿಸಿದೆ.
ಸಾಕ್ಷ್ಯಚಿತ್ರದಲ್ಲಿ ಹಲವು ಮಹಿಳೆಯರು ಅಪರಾಧಗಳ ಬಗ್ಗೆ ಮಾತನಾಡಿದ್ದನ್ನು ನೋಡಬಹುದಾಗಿದೆ. ಆದರೆ ಈ ಆರೋಪದ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ಟಿಎಂಸಿ ಹೇಳಿದೆ.
ಏನಿದು ಪ್ರಕರಣ?:
ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಶೇಖ್ ಷಹಜಹಾನ್ ಮತ್ತು ಅವರ ಬೆಂಬಲಿಗರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಸ್ಥಳೀಯ ಮಹಿಳೆಯರು ಆರೋಪಿಸಿದ್ದಾರೆ.