<p><strong>ನವದೆಹಲಿ:</strong> ಬಿಜೆಪಿ ಸಂಸದ ಸುಕಾಂತ ಮಜುಂದರ್ ಅವರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗಿದೆ ಎನ್ನುವ ಕಾರಣಕ್ಕೆ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಡಿ.ಜಿ.ಪಿ ಹಾಗೂ ಇತರರಿಗೆ ಲೋಕಸಭೆಯ ಹಕ್ಕುಭಾದ್ಯತಾ ಸಮಿತಿ ನೀಡಿದ್ದ ನೋಟಿಸ್ಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.</p><p>ಹಿಂಸಾಚಾರ ಪೀಡಿತ ಸಂದೇಶ್ಖಾಲಿಗೆ ತೆರಳುವ ವೇಳೆ ಸುಕಾಂತ ಅವರನ್ನು ಪೊಲೀಸರು ತಡೆದಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಸಂಘರ್ಷ ಉಂಟಾಗಿ, ಸುಕಾಂತ ಅವರಿಗೆ ಗಾಯಗಳಾಗಿದ್ದವು.</p><p>ರಾಜ್ಯ ಸರ್ಕಾರದ ಅಧಿಕಾರಿಗಳ ಪರ ಹಾಜರಾದ ಹಿರಿಯ ವಕೀಲರಾದ ಕಪಿಲ್ ಸಿಬಲ್ ಹಾಗೂ ಅಭಿಷೇಕ್ ಮನು ಸಿಂಘ್ವಿ ಅವರ ವಾದವನ್ನು ಆಲಿಸಿದ, ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಹಾಗೂ ನ್ಯಾಯಮೂರ್ತಿ ಜೆ.ಬಿ ಪರ್ದಿವಾಲ ಅವರಿದ್ದ ಪೀಠ, ಸಚಿವಾಲಯದ ನೋಟಿಸ್ಗೆ ತಡೆ ನೀಡಿತು.</p>.ಸಂದೇಶ್ಖಾಲಿ ಗಲಭೆ: ಪ್ರಮುಖ IPS ಅಧಿಕಾರಿಗಳ ವರ್ಗಾವಣೆ ಮಾಡಿದ ಬಂಗಾಳ ಸರ್ಕಾರ.<p>ಹಕ್ಕುಭಾದ್ಯತಾ ಸಮಿತಿಯ ಮೊದಲ ಸಭೆಯಾಗಿರುವುದರಿಂದ, ನೋಟಿಸ್ಗೆ ತಡೆ ನೀಡುವ ನಿರ್ಧಾರಕ್ಕೆ ಲೋಕಸಭಾ ಸಚಿವಾಲಯದ ಪರ ಹಾಜರಿದ್ದ ವಕೀಲರು ವಿರೋಧ ವ್ಯಕ್ತಪಡಿಸಿದರು.</p><p>‘ಅವರ ಮೇಲೆ ಯಾವುದೇ ಆರೋಪ ಹೊರಿಸಲಾಗಿಲ್ಲ. ಇದೊಂದು ಸಾಮಾನ್ಯ ಪ್ರಕ್ರಿಯೆ. ಒಮ್ಮೆ ಸಂಸದರು ಸ್ಪೀಕರ್ ಅವರಿಗೆ ನೋಟಿಸ್ ನೀಡಿದರೆ, ಅದರಲ್ಲಿ ಏನಾದರೂ ಮಹತ್ವದ್ದು ಇದೆ ಎಂದು ಸ್ಪೀಕರ್ಗೆ ಅನಿಸಿದರೆ, ಬಳಿಕ ನೋಟಿಸ್ ಜಾರಿ ಮಾಡಲಾಗುತ್ತದೆ’ ಎಂದು ಸಚಿವಾಲಯದ ಪರ ವಕೀಲರು ವಾದಿಸಿದರು.</p>.ಸಂದೇಶ್ಖಾಲಿ ಸ್ಥಿತಿ ಶೋಚನೀಯ: ರೌಡಿಗಳೊಂದಿಗೆ ಕೈಜೋಡಿಸಿರುವ ಪೊಲೀಸರು– ರಾಜ್ಯಪಾಲ. <p>ಲೋಕಸಭೆ ಸಚಿವಾಲಯ ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್, ಉತ್ತರಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಆವರೆಗೆ ಸಚಿವಾಲಯದ ನೋಟಿಸ್ಗೆ ತಡೆ ನೀಡಿದೆ.</p><p>ಪಶ್ಚಿಮ ಬಂಗಾಳ ಮುಖ್ಯ ಕಾರ್ಯದರ್ಶಿ ಭಗವತಿ ಪ್ರಸಾದ್ ಗೋಪಿಕಾ ಹಾಗೂ ಪೊಲೀಸ್ ಮಹಾನಿರ್ದೇಶಕ ರಾಜೀವ್ ಕುಮಾರ್ ಅವರಿಗೆ ಸೋಮವಾರ ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್ ಜಾರಿ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಿಜೆಪಿ ಸಂಸದ ಸುಕಾಂತ ಮಜುಂದರ್ ಅವರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗಿದೆ ಎನ್ನುವ ಕಾರಣಕ್ಕೆ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಡಿ.ಜಿ.ಪಿ ಹಾಗೂ ಇತರರಿಗೆ ಲೋಕಸಭೆಯ ಹಕ್ಕುಭಾದ್ಯತಾ ಸಮಿತಿ ನೀಡಿದ್ದ ನೋಟಿಸ್ಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.</p><p>ಹಿಂಸಾಚಾರ ಪೀಡಿತ ಸಂದೇಶ್ಖಾಲಿಗೆ ತೆರಳುವ ವೇಳೆ ಸುಕಾಂತ ಅವರನ್ನು ಪೊಲೀಸರು ತಡೆದಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಸಂಘರ್ಷ ಉಂಟಾಗಿ, ಸುಕಾಂತ ಅವರಿಗೆ ಗಾಯಗಳಾಗಿದ್ದವು.</p><p>ರಾಜ್ಯ ಸರ್ಕಾರದ ಅಧಿಕಾರಿಗಳ ಪರ ಹಾಜರಾದ ಹಿರಿಯ ವಕೀಲರಾದ ಕಪಿಲ್ ಸಿಬಲ್ ಹಾಗೂ ಅಭಿಷೇಕ್ ಮನು ಸಿಂಘ್ವಿ ಅವರ ವಾದವನ್ನು ಆಲಿಸಿದ, ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಹಾಗೂ ನ್ಯಾಯಮೂರ್ತಿ ಜೆ.ಬಿ ಪರ್ದಿವಾಲ ಅವರಿದ್ದ ಪೀಠ, ಸಚಿವಾಲಯದ ನೋಟಿಸ್ಗೆ ತಡೆ ನೀಡಿತು.</p>.ಸಂದೇಶ್ಖಾಲಿ ಗಲಭೆ: ಪ್ರಮುಖ IPS ಅಧಿಕಾರಿಗಳ ವರ್ಗಾವಣೆ ಮಾಡಿದ ಬಂಗಾಳ ಸರ್ಕಾರ.<p>ಹಕ್ಕುಭಾದ್ಯತಾ ಸಮಿತಿಯ ಮೊದಲ ಸಭೆಯಾಗಿರುವುದರಿಂದ, ನೋಟಿಸ್ಗೆ ತಡೆ ನೀಡುವ ನಿರ್ಧಾರಕ್ಕೆ ಲೋಕಸಭಾ ಸಚಿವಾಲಯದ ಪರ ಹಾಜರಿದ್ದ ವಕೀಲರು ವಿರೋಧ ವ್ಯಕ್ತಪಡಿಸಿದರು.</p><p>‘ಅವರ ಮೇಲೆ ಯಾವುದೇ ಆರೋಪ ಹೊರಿಸಲಾಗಿಲ್ಲ. ಇದೊಂದು ಸಾಮಾನ್ಯ ಪ್ರಕ್ರಿಯೆ. ಒಮ್ಮೆ ಸಂಸದರು ಸ್ಪೀಕರ್ ಅವರಿಗೆ ನೋಟಿಸ್ ನೀಡಿದರೆ, ಅದರಲ್ಲಿ ಏನಾದರೂ ಮಹತ್ವದ್ದು ಇದೆ ಎಂದು ಸ್ಪೀಕರ್ಗೆ ಅನಿಸಿದರೆ, ಬಳಿಕ ನೋಟಿಸ್ ಜಾರಿ ಮಾಡಲಾಗುತ್ತದೆ’ ಎಂದು ಸಚಿವಾಲಯದ ಪರ ವಕೀಲರು ವಾದಿಸಿದರು.</p>.ಸಂದೇಶ್ಖಾಲಿ ಸ್ಥಿತಿ ಶೋಚನೀಯ: ರೌಡಿಗಳೊಂದಿಗೆ ಕೈಜೋಡಿಸಿರುವ ಪೊಲೀಸರು– ರಾಜ್ಯಪಾಲ. <p>ಲೋಕಸಭೆ ಸಚಿವಾಲಯ ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್, ಉತ್ತರಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಆವರೆಗೆ ಸಚಿವಾಲಯದ ನೋಟಿಸ್ಗೆ ತಡೆ ನೀಡಿದೆ.</p><p>ಪಶ್ಚಿಮ ಬಂಗಾಳ ಮುಖ್ಯ ಕಾರ್ಯದರ್ಶಿ ಭಗವತಿ ಪ್ರಸಾದ್ ಗೋಪಿಕಾ ಹಾಗೂ ಪೊಲೀಸ್ ಮಹಾನಿರ್ದೇಶಕ ರಾಜೀವ್ ಕುಮಾರ್ ಅವರಿಗೆ ಸೋಮವಾರ ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್ ಜಾರಿ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>