<p><strong>ಲಖನೌ:</strong> ಆರ್ಎಸ್ಎಸ್ ತನ್ನ ಶತಮಾನೋತ್ಸವದ (2025ರಲ್ಲಿ) ವೇಳೆಗೆ ದೇಶದ ಎಲ್ಲ ಗ್ರಾಮಗಳು ಮತ್ತು ಸಮಾಜದ ಪ್ರತಿಯೊಂದು ವರ್ಗವನ್ನು ತಲುಪಿ ಅಲ್ಲಿ ‘ಶಾಖೆ’ (ತರಬೇತಿ ಕಾರ್ಯಕ್ರಮ) ಆಯೋಜಿಸುವಂತಾಗಬೇಕು ಎಂದು ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದರು.</p>.<p>ಉತ್ತರಪ್ರದೇಶದ ಗೋರಖ್ಪುರದ ಮಾನೀರಾಮ್ ಎಂಬಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಸಂಘದ ಸ್ವಯಂಸೇವಕರನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳ 250ಕ್ಕೂ ಅಧಿಕ ಸ್ವಯಂಸೇವಕರು ಪಾಲ್ಗೊಂಡಿದ್ದಾರೆ. </p>.<p>‘ನಾವು 2025ರಲ್ಲಿ ಶತಮಾನೋತ್ಸವಕ್ಕೆ ಕಾಲಿಡಲಿದ್ದೇವೆ. ಆ ವೇಳೆಗೆ ಏನಾದರೂ ದೊಡ್ಡ ಸಾಧನೆ ಮಾಡಬೇಕು. ಸಂಘವನ್ನು ದೊಡ್ಡ ಮಟ್ಟದಲ್ಲಿ ವಿಸ್ತರಿಸುವ ಜವಾಬ್ದಾರಿ ಸ್ವಯಂಸೇವಕರ ಮೇಲಿದೆ’ ಎಂದರು.</p>.<p>ಭಾಗವತ್ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ. ಇಬ್ಬರ ನಡುವಣ ಮಾತುಕತೆಯ ವೇಳೆ, ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿರುವ ವಿಷಯವೂ ಚರ್ಚೆಯಾಗಬಹುದು ಎಂದು ಮೂಲಗಳು ತಿಳಿಸಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಆರ್ಎಸ್ಎಸ್ ತನ್ನ ಶತಮಾನೋತ್ಸವದ (2025ರಲ್ಲಿ) ವೇಳೆಗೆ ದೇಶದ ಎಲ್ಲ ಗ್ರಾಮಗಳು ಮತ್ತು ಸಮಾಜದ ಪ್ರತಿಯೊಂದು ವರ್ಗವನ್ನು ತಲುಪಿ ಅಲ್ಲಿ ‘ಶಾಖೆ’ (ತರಬೇತಿ ಕಾರ್ಯಕ್ರಮ) ಆಯೋಜಿಸುವಂತಾಗಬೇಕು ಎಂದು ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದರು.</p>.<p>ಉತ್ತರಪ್ರದೇಶದ ಗೋರಖ್ಪುರದ ಮಾನೀರಾಮ್ ಎಂಬಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಸಂಘದ ಸ್ವಯಂಸೇವಕರನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳ 250ಕ್ಕೂ ಅಧಿಕ ಸ್ವಯಂಸೇವಕರು ಪಾಲ್ಗೊಂಡಿದ್ದಾರೆ. </p>.<p>‘ನಾವು 2025ರಲ್ಲಿ ಶತಮಾನೋತ್ಸವಕ್ಕೆ ಕಾಲಿಡಲಿದ್ದೇವೆ. ಆ ವೇಳೆಗೆ ಏನಾದರೂ ದೊಡ್ಡ ಸಾಧನೆ ಮಾಡಬೇಕು. ಸಂಘವನ್ನು ದೊಡ್ಡ ಮಟ್ಟದಲ್ಲಿ ವಿಸ್ತರಿಸುವ ಜವಾಬ್ದಾರಿ ಸ್ವಯಂಸೇವಕರ ಮೇಲಿದೆ’ ಎಂದರು.</p>.<p>ಭಾಗವತ್ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ. ಇಬ್ಬರ ನಡುವಣ ಮಾತುಕತೆಯ ವೇಳೆ, ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿರುವ ವಿಷಯವೂ ಚರ್ಚೆಯಾಗಬಹುದು ಎಂದು ಮೂಲಗಳು ತಿಳಿಸಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>