<p><strong>ನವದೆಹಲಿ:</strong> ದಿವಂಗತ ಉದ್ಯಮಿ ಸಂಜಯ್ ಕಪೂರ್ ಅವರ ಉಯಿಲಿನ ವಿಚಾರಣೆ ವೇಳೆ ಹೊರಡಿಸಿರುವ ಆದೇಶದಲ್ಲಿ ಅವರ ಸಹೋದರಿ ಮಂದಿರಾ ಕಪೂರ್ ಹೆಸರನ್ನು ತೆಗೆಯುವಂತೆ ಸಂಜಯ್ ಪತ್ನಿ ಪ್ರಿಯಾ ಕಪೂರ್ ಸಲ್ಲಿಸಿರುವ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ಪುರಸ್ಕರಿಸಿದೆ.</p>.<p>‘ಮಂದಿರಾ ಅವರು ಈ ಪ್ರಕರಣದಲ್ಲಿ ಪಕ್ಷಗಾರರಲ್ಲ. ಅವರು ಅರ್ಜಿ ಸಲ್ಲಿಸದೇ ಪ್ರಕರಣದಲ್ಲಿ ಹಿಂಬಾಗಿನಲಿಂದ ಪ್ರವೇಶ ಪಡೆಯಲು ಪ್ರಯತ್ನಿಸಿದಂತಿದೆ. ಅದಕ್ಕೆ ಅವಕಾಶ ನೀಡಬಾರದು’ ಎಂದು ಪ್ರಿಯಾ ಮತ್ತು ಅವರ ಅಪ್ರಾಪ್ತ ವಯಸ್ಸಿನ ಮಗನ ಪರ ವಕೀಲ ರಾಜೀವ್ ನಾಯರ್ ಪ್ರತಿಪಾದಿಸಿದರು.</p>.<p>ಸಂಜಯ್ ಅವರ ಮಾಜಿ ಪತ್ನಿ ಕರಿಷ್ಮಾ ಕಪೂರ್ ಅವರ ಇಬ್ಬರು ಮಕ್ಕಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಜ್ಯೋತಿ ಸಿಂಗ್ ನಡೆಸುತ್ತಿದ್ದಾರೆ. ಸಂಜಯ್ ಅವರ ಉಯಿಲನ್ನು ಪ್ರಶ್ನಿಸಿ ಮತ್ತು ₹30,000 ಕೋಟಿ ಮೌಲ್ಯದ ಆಸ್ತಿಯಲ್ಲಿ ಪಾಲು ನೀಡುವಂತೆ ಮಕ್ಕಳು ಅರ್ಜಿಯಲ್ಲಿ ಕೋರಿದ್ದಾರೆ.</p>.<p>ಸಂಜಯ್ ಅವರು ನಿಧನ ಹೊಂದಿದ ದಿನದವರೆಗೆ (ಜೂನ್ 12) ಅವರ ಹೆಸರಿನಲ್ಲಿದ್ದ ಸ್ಥಿರ ಮತ್ತು ಚರ ಆಸ್ತಿಗಳನ್ನು ಬಹಿರಂಗಪಡಿಸುವಂತೆ ನ್ಯಾಯಮೂರ್ತಿ ಸೆಪ್ಟೆಂಬರ್ 10ರಂದು ಪ್ರಿಯಾ ಅವರಿಗೆ ನಿರ್ದೇಶಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದಿವಂಗತ ಉದ್ಯಮಿ ಸಂಜಯ್ ಕಪೂರ್ ಅವರ ಉಯಿಲಿನ ವಿಚಾರಣೆ ವೇಳೆ ಹೊರಡಿಸಿರುವ ಆದೇಶದಲ್ಲಿ ಅವರ ಸಹೋದರಿ ಮಂದಿರಾ ಕಪೂರ್ ಹೆಸರನ್ನು ತೆಗೆಯುವಂತೆ ಸಂಜಯ್ ಪತ್ನಿ ಪ್ರಿಯಾ ಕಪೂರ್ ಸಲ್ಲಿಸಿರುವ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ಪುರಸ್ಕರಿಸಿದೆ.</p>.<p>‘ಮಂದಿರಾ ಅವರು ಈ ಪ್ರಕರಣದಲ್ಲಿ ಪಕ್ಷಗಾರರಲ್ಲ. ಅವರು ಅರ್ಜಿ ಸಲ್ಲಿಸದೇ ಪ್ರಕರಣದಲ್ಲಿ ಹಿಂಬಾಗಿನಲಿಂದ ಪ್ರವೇಶ ಪಡೆಯಲು ಪ್ರಯತ್ನಿಸಿದಂತಿದೆ. ಅದಕ್ಕೆ ಅವಕಾಶ ನೀಡಬಾರದು’ ಎಂದು ಪ್ರಿಯಾ ಮತ್ತು ಅವರ ಅಪ್ರಾಪ್ತ ವಯಸ್ಸಿನ ಮಗನ ಪರ ವಕೀಲ ರಾಜೀವ್ ನಾಯರ್ ಪ್ರತಿಪಾದಿಸಿದರು.</p>.<p>ಸಂಜಯ್ ಅವರ ಮಾಜಿ ಪತ್ನಿ ಕರಿಷ್ಮಾ ಕಪೂರ್ ಅವರ ಇಬ್ಬರು ಮಕ್ಕಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಜ್ಯೋತಿ ಸಿಂಗ್ ನಡೆಸುತ್ತಿದ್ದಾರೆ. ಸಂಜಯ್ ಅವರ ಉಯಿಲನ್ನು ಪ್ರಶ್ನಿಸಿ ಮತ್ತು ₹30,000 ಕೋಟಿ ಮೌಲ್ಯದ ಆಸ್ತಿಯಲ್ಲಿ ಪಾಲು ನೀಡುವಂತೆ ಮಕ್ಕಳು ಅರ್ಜಿಯಲ್ಲಿ ಕೋರಿದ್ದಾರೆ.</p>.<p>ಸಂಜಯ್ ಅವರು ನಿಧನ ಹೊಂದಿದ ದಿನದವರೆಗೆ (ಜೂನ್ 12) ಅವರ ಹೆಸರಿನಲ್ಲಿದ್ದ ಸ್ಥಿರ ಮತ್ತು ಚರ ಆಸ್ತಿಗಳನ್ನು ಬಹಿರಂಗಪಡಿಸುವಂತೆ ನ್ಯಾಯಮೂರ್ತಿ ಸೆಪ್ಟೆಂಬರ್ 10ರಂದು ಪ್ರಿಯಾ ಅವರಿಗೆ ನಿರ್ದೇಶಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>