<p><strong>ಮುಂಬೈ:</strong> ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಸಚಿವರನ್ನು ಹಿಡಿತದಲ್ಲಿಡಲು ಅವರ ಭ್ರಷ್ಟಾಚಾರ ಪ್ರಕರಣವನ್ನು ಬಳಸುತ್ತಿದ್ದಾರೆ ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಸೋಮವಾರ ಆರೋಪಿಸಿದ್ದಾರೆ.</p>.<p>ಲಂಚ ಪ್ರಕರಣಕ್ಕೆ ಸಂಬಂಧಿಸಿ ಎನ್ಸಿಪಿ (ಅಜಿತ್ ಪವಾರ್) ನಾಯಕ, ಸಚಿವ ನರಹರಿ ಜಿರ್ವಾಲ್ ಅವರ ಇಲಾಖೆಯ ಅಧಿಕಾರಿಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಇತ್ತೀಚೆಗೆ ದಾಳಿ ನಡೆಸಿತ್ತು.</p>.<p>ಈ ದಾಳಿಯನ್ನು ಉಲ್ಲೇಖಿಸಿದ ರಾವುತ್, ‘ಸಚಿವರ ಕಚೇರಿಗಳ ಮೇಲೆ ಎಸಿಬಿ ದಾಳಿ ಮಾಡಿ, ಕ್ರಮ ಕೈಗೊಳ್ಳುವ ಬದಲು ಕ್ಲೀನ್ ಚಿಟ್ ನೀಡುತ್ತದೆ. ಭ್ರಷ್ಟರಾಗಿ ಇರಿ, ಆದರೆ ಫಡಣವೀಸ್ ಅವರ ನಿಯಂತ್ರಣದಲ್ಲಿರಿ ಎಂದು ಸರ್ಕಾರ ಸಂದೇಶ ಕಳುಹಿಸುತ್ತಿದೆ’ ಎಂದು ತಿಳಿಸಿದ್ದಾರೆ.</p>.<p>ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುವ ವಿಷಯದಲ್ಲಿ ಫಡಣವೀಸ್ ‘ಕಪಟಿ’ ಎಂದು ಹೇಳಿದ ರಾವುತ್, ‘ರಾಜ್ಯದ ಎಲ್ಲಾ ಸಚಿವರು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಎಸಿಬಿ ಅವರ ಮೇಲೆ ನಿಗಾ ಇಟ್ಟಿದ್ದರೂ, ಫಡಣವೀಸ್ ನಿರ್ದೇಶನ ನೀಡುವವರೆಗೆ ಅದು ಕ್ರಮ ಕೈಗೊಳ್ಳುವುದಿಲ್ಲ’ ಎಂದು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಸಚಿವರನ್ನು ಹಿಡಿತದಲ್ಲಿಡಲು ಅವರ ಭ್ರಷ್ಟಾಚಾರ ಪ್ರಕರಣವನ್ನು ಬಳಸುತ್ತಿದ್ದಾರೆ ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಸೋಮವಾರ ಆರೋಪಿಸಿದ್ದಾರೆ.</p>.<p>ಲಂಚ ಪ್ರಕರಣಕ್ಕೆ ಸಂಬಂಧಿಸಿ ಎನ್ಸಿಪಿ (ಅಜಿತ್ ಪವಾರ್) ನಾಯಕ, ಸಚಿವ ನರಹರಿ ಜಿರ್ವಾಲ್ ಅವರ ಇಲಾಖೆಯ ಅಧಿಕಾರಿಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಇತ್ತೀಚೆಗೆ ದಾಳಿ ನಡೆಸಿತ್ತು.</p>.<p>ಈ ದಾಳಿಯನ್ನು ಉಲ್ಲೇಖಿಸಿದ ರಾವುತ್, ‘ಸಚಿವರ ಕಚೇರಿಗಳ ಮೇಲೆ ಎಸಿಬಿ ದಾಳಿ ಮಾಡಿ, ಕ್ರಮ ಕೈಗೊಳ್ಳುವ ಬದಲು ಕ್ಲೀನ್ ಚಿಟ್ ನೀಡುತ್ತದೆ. ಭ್ರಷ್ಟರಾಗಿ ಇರಿ, ಆದರೆ ಫಡಣವೀಸ್ ಅವರ ನಿಯಂತ್ರಣದಲ್ಲಿರಿ ಎಂದು ಸರ್ಕಾರ ಸಂದೇಶ ಕಳುಹಿಸುತ್ತಿದೆ’ ಎಂದು ತಿಳಿಸಿದ್ದಾರೆ.</p>.<p>ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುವ ವಿಷಯದಲ್ಲಿ ಫಡಣವೀಸ್ ‘ಕಪಟಿ’ ಎಂದು ಹೇಳಿದ ರಾವುತ್, ‘ರಾಜ್ಯದ ಎಲ್ಲಾ ಸಚಿವರು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಎಸಿಬಿ ಅವರ ಮೇಲೆ ನಿಗಾ ಇಟ್ಟಿದ್ದರೂ, ಫಡಣವೀಸ್ ನಿರ್ದೇಶನ ನೀಡುವವರೆಗೆ ಅದು ಕ್ರಮ ಕೈಗೊಳ್ಳುವುದಿಲ್ಲ’ ಎಂದು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>