<p><strong>ಮುಂಬೈ</strong>: ಶಿವಸೇನಾ(ಯುಬಿಟಿ) ನಾಯಕ ಸಂಜಯ್ ರಾವುತ್, ಕಾಂಗ್ರೆಸ್ ಸೇರಲು ಮುಂದಾಗಿದ್ದು, ದೆಹಲಿ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಮಹಾರಾಷ್ಟ್ರದ ಸಚಿವ ನಿತೀಶ್ ರಾಣೆ ಹೇಳಿದ್ದಾರೆ.</p><p>ರಾವುತ್ ಅವರ ರಾಜ್ಯಸಭಾ ಸದಸ್ಯತ್ವದ ಅವಧಿ ಅಂತ್ಯವಾಗುತ್ತಿದೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ(ಯುಬಿಟಿ) ರಾವುತ್ ಅವರನ್ನು ಮರು ಆಯ್ಕೆ ಮಾಡಲು ಬೇಕಾದಷ್ಟು ಶಾಸಕರ ಬಲ ಹೊಂದಿಲ್ಲ ಎಂದಿದ್ದಾರೆ.</p><p>ಕಳೆದ ನವೆಂಬರ್ನಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ 288 ಕ್ಷೇತ್ರಗಳ ಪೈಕಿ ಶಿವಸೇನಾ(ಯುಬಿಟಿ) 20 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು.</p><p>‘ಶಿವಸೇನಾ(ಯುಬಿಟಿ) ಪಕ್ಷದಲ್ಲಿ ಎಷ್ಟು ದಿನ ಇರಲಿದ್ದೇವೆ ಎಂಬ ಬಗ್ಗೆ ಸಾಮ್ನಾದಲ್ಲಿ(ಶಿವಸೇನಾದ ಉದ್ಧವ್ ಬಣದ ಮುಖವಾಣಿ) ಸಂಜಯ್ ರಾವುತ್ ಬರೆಯಬೇಕು. ಕಾಂಗ್ರೆಸ್ ಸೇರಲು ಮಾತುಕತೆ ನಡೆಸಿರುವ ನಾಯಕರ ಹೆಸರನ್ನೂ ಬಹಿರಂಗಪಡಿಸಬೇಕು. ಈ ವಿವಾದದ ಬಗ್ಗೆ ಅವರು ಹೇಳಿಕೆ ನೀಡಬೇಕು’ಎಂದು ರಾಣೆ ಸುದ್ದಿಗಾರರಿಗೆತಿಳಿಸಿದ್ದಾರೆ.</p><p>ಸಿಎಂ ದೇವೇಂದ್ರ ಫಡಣವೀಸ್ ಮತ್ತು ಮತ್ತು ಡಿಸಿಎಂ ಏಕನಾಥ್ ಶಿಂದೆ ನಡುವಿನ ಸಂಬಂಧ ಹಳಸಿದ್ದು, ರಾಜ್ಯದ ಅಭಿವೃದ್ಧಿಗೆ ತೊಡಕಾಗುತ್ತಿದೆ ಎಂದು ರಾವುತ್ ಆರೋಪಿಸಿದ ಬೆನ್ನಲ್ಲೇ ರಾಣೆ ಹೇಳಿಕೆ ಹೊರಬಿದ್ದಿದೆ.</p><p> ಶಿವಸೇನಾ (ಯುಬಿಟಿ) ಮುಖವಾಣಿ 'ಸಾಮ್ನಾ'ದಲ್ಲಿ ತಮ್ಮ ಸಾಪ್ತಾಹಿಕ ಅಂಕಣ ರೋಖ್ಥೋಕ್ನಲ್ಲಿ, ಫಡಣವೀಸ್ ಮತ್ತು ಶಿಂದೆ ನಡುವಿನ ಹಳಸಿದ ಸಂಬಂಧ ರಾಜ್ಯದ ಪ್ರಗತಿಗೆ ಅಡ್ಡಿಯಾಗುತ್ತಿದೆ ಎಂದು ರಾವುತ್ ಟೀಕಿಸಿದ್ದರು.</p><p>2024ರ ವಿಧಾನಸಭಾ ಚುನಾವಣೆಯ ನಂತರ ಶಿಂದೆ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಿಲ್ಲ. ಶಿಂದೆ ಆ ಸ್ಥಾನವನ್ನು ಮರಳಿ ಪಡೆಯಲು ಹತಾಶ ಪ್ರಯತ್ನ ನಡೆಸುತ್ತಿದ್ದಾರೆ ಎಂಬ ರಾವುತ್ ಬರೆದುಕೊಂಡಿದ್ದರು.</p> .ಫಡಣವೀಸ್–ಶಿಂದೆ ವೈಷಮ್ಯದಿಂದ ಮಹಾರಾಷ್ಟ್ರ ಪ್ರಗತಿಗೆ ಹೊಡೆತ: ಸಂಜಯ್ ರಾವುತ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಶಿವಸೇನಾ(ಯುಬಿಟಿ) ನಾಯಕ ಸಂಜಯ್ ರಾವುತ್, ಕಾಂಗ್ರೆಸ್ ಸೇರಲು ಮುಂದಾಗಿದ್ದು, ದೆಹಲಿ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಮಹಾರಾಷ್ಟ್ರದ ಸಚಿವ ನಿತೀಶ್ ರಾಣೆ ಹೇಳಿದ್ದಾರೆ.</p><p>ರಾವುತ್ ಅವರ ರಾಜ್ಯಸಭಾ ಸದಸ್ಯತ್ವದ ಅವಧಿ ಅಂತ್ಯವಾಗುತ್ತಿದೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ(ಯುಬಿಟಿ) ರಾವುತ್ ಅವರನ್ನು ಮರು ಆಯ್ಕೆ ಮಾಡಲು ಬೇಕಾದಷ್ಟು ಶಾಸಕರ ಬಲ ಹೊಂದಿಲ್ಲ ಎಂದಿದ್ದಾರೆ.</p><p>ಕಳೆದ ನವೆಂಬರ್ನಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ 288 ಕ್ಷೇತ್ರಗಳ ಪೈಕಿ ಶಿವಸೇನಾ(ಯುಬಿಟಿ) 20 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು.</p><p>‘ಶಿವಸೇನಾ(ಯುಬಿಟಿ) ಪಕ್ಷದಲ್ಲಿ ಎಷ್ಟು ದಿನ ಇರಲಿದ್ದೇವೆ ಎಂಬ ಬಗ್ಗೆ ಸಾಮ್ನಾದಲ್ಲಿ(ಶಿವಸೇನಾದ ಉದ್ಧವ್ ಬಣದ ಮುಖವಾಣಿ) ಸಂಜಯ್ ರಾವುತ್ ಬರೆಯಬೇಕು. ಕಾಂಗ್ರೆಸ್ ಸೇರಲು ಮಾತುಕತೆ ನಡೆಸಿರುವ ನಾಯಕರ ಹೆಸರನ್ನೂ ಬಹಿರಂಗಪಡಿಸಬೇಕು. ಈ ವಿವಾದದ ಬಗ್ಗೆ ಅವರು ಹೇಳಿಕೆ ನೀಡಬೇಕು’ಎಂದು ರಾಣೆ ಸುದ್ದಿಗಾರರಿಗೆತಿಳಿಸಿದ್ದಾರೆ.</p><p>ಸಿಎಂ ದೇವೇಂದ್ರ ಫಡಣವೀಸ್ ಮತ್ತು ಮತ್ತು ಡಿಸಿಎಂ ಏಕನಾಥ್ ಶಿಂದೆ ನಡುವಿನ ಸಂಬಂಧ ಹಳಸಿದ್ದು, ರಾಜ್ಯದ ಅಭಿವೃದ್ಧಿಗೆ ತೊಡಕಾಗುತ್ತಿದೆ ಎಂದು ರಾವುತ್ ಆರೋಪಿಸಿದ ಬೆನ್ನಲ್ಲೇ ರಾಣೆ ಹೇಳಿಕೆ ಹೊರಬಿದ್ದಿದೆ.</p><p> ಶಿವಸೇನಾ (ಯುಬಿಟಿ) ಮುಖವಾಣಿ 'ಸಾಮ್ನಾ'ದಲ್ಲಿ ತಮ್ಮ ಸಾಪ್ತಾಹಿಕ ಅಂಕಣ ರೋಖ್ಥೋಕ್ನಲ್ಲಿ, ಫಡಣವೀಸ್ ಮತ್ತು ಶಿಂದೆ ನಡುವಿನ ಹಳಸಿದ ಸಂಬಂಧ ರಾಜ್ಯದ ಪ್ರಗತಿಗೆ ಅಡ್ಡಿಯಾಗುತ್ತಿದೆ ಎಂದು ರಾವುತ್ ಟೀಕಿಸಿದ್ದರು.</p><p>2024ರ ವಿಧಾನಸಭಾ ಚುನಾವಣೆಯ ನಂತರ ಶಿಂದೆ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಿಲ್ಲ. ಶಿಂದೆ ಆ ಸ್ಥಾನವನ್ನು ಮರಳಿ ಪಡೆಯಲು ಹತಾಶ ಪ್ರಯತ್ನ ನಡೆಸುತ್ತಿದ್ದಾರೆ ಎಂಬ ರಾವುತ್ ಬರೆದುಕೊಂಡಿದ್ದರು.</p> .ಫಡಣವೀಸ್–ಶಿಂದೆ ವೈಷಮ್ಯದಿಂದ ಮಹಾರಾಷ್ಟ್ರ ಪ್ರಗತಿಗೆ ಹೊಡೆತ: ಸಂಜಯ್ ರಾವುತ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>