<p><strong>ಮುಂಬೈ:</strong> ಪಾಲುದಾರ ಪಕ್ಷಗಳ ನಡುವೆ ಮಾತುಕತೆ ನಡೆಯದೇ ಹೋದರೆ ಮೈತ್ರಿ ಸಫಲವಾಗುವುದಿಲ್ಲ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಹೇಳಿದ್ದಾರೆ.</p><p>ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ತಮ್ಮ ಪಕ್ಷವು ಏಕಾಂಗಿಯಾಗಿ ಎದುರಿಸಲಿದೆ ಎಂದು ಹೇಳಿದ ಬಳಿಕ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.</p>.ಸ್ಥಳೀಯಾಡಳಿತ ಚುನಾವಣೆಯಲ್ಲಿ ಶಿವಸೇನಾ (ಯುಬಿಟಿ) ಏಕಾಂಗಿ ಸ್ಪರ್ಧೆ: ಸಂಜಯ್ ರಾವುತ್.<p>ಮೈತ್ರಿ ಪಕ್ಷಗಳ ನಡುವೆ ಸಂವಹನ ನಡೆಯುತ್ತಿರಬೇಕಾದರೆ, ಜವಾಬ್ದಾರಿಯುತ ನಾಯಕರ ನೇಮಕ ಅಗತ್ಯ. ಇಂಡಿಯಾ ಬಣದ ಅತಿ ದೊಡ್ಡ ಪಕ್ಷವಾದ ಕಾಂಗ್ರೆಸ್ ಈ ಬಗ್ಗೆ ಜವಾಬ್ದಾರಿ ತೆಗೆದುಕೊಳ್ಳಬೇಕು’ ಎಂದು ಅವರು ಹೇಳಿದ್ದಾರೆ.</p><p>ಮೈತ್ರಿ ಪಕ್ಷಗಳು ಪರಸ್ಪರ ಎದುರಾಳಿಗಳಾಗಿ ಚುನಾವಣೆ ಸ್ಪರ್ಧಿಸುವುದು ತಪ್ಪಲ್ಲ ಎಂದ ಅವರು, ಯಾವ ಪಕ್ಷವೂ ವಿಶ್ವಾಸದ್ರೋಹ ಎಸಗಬಾರದು ಎಂದಿದ್ದಾರೆ.</p>.ವಾಜಪೇಯಿ ಭಾರತ ರಾಜಕಾರಣದ ‘ಎರಡನೇ ನೆಹರೂ’: ಶಿವಸೇನೆ ನಾಯಕ ಸಂಜಯ್ ರಾವುತ್ .<p>ದೇಶದ ರಾಜಕೀಯದಲ್ಲಿ ಮತ್ತಷ್ಟು ಉನ್ನತಿಗೇರುವುದು ಪ್ರತಿಯೊಂದು ಪಕ್ಷದ ಸಾಮೂಹಿಕ ಆಕಾಂಕ್ಷೆ. ಆದರೆ ಕಳೆದ ಕೆಲವು ದಿನಗಳಿಂದ, ನಮ್ಮ ಕೆಲವು ಮೈತ್ರಿ ಪಾಲುದಾರರು ಮಾತುಕತೆ ಮುಗಿದು ಹೋಗಿದೆ ಎನ್ನುವ ನಿಲುವು ತೆಗೆದುಕೊಂಡಂತಿದೆ. ಮಾತುಕತೆ ಇಲ್ಲದಿದ್ದರೆ, ಯಾವ ಮೈತ್ರಿಯೂ ಯಶಸ್ವಿಯಾಗಲಾಗದು ಎಂದು ಹೇಳಿದ್ದಾರೆ.</p><p>2019ರಲ್ಲಿ ಬಿಜೆಪಿ–ಶಿವಸೇನಾ ಮೈತ್ರಿಕೂಟ ಮುರಿದು ಬಿದ್ದಿದ್ದೇ ಮಾತುಕತೆ ಕೊರತೆಯಿಂದ ಎಂದು ಅವರು ಹೇಳಿದ್ದಾರೆ.</p>.ಶಿಂದೆ ಇಲ್ಲದೆಯೂ ‘ಪ್ರಮಾಣವಚನ’ಕ್ಕೆ ಬಿಜೆಪಿ ಸಿದ್ಧವಿತ್ತು: ಸಂಜಯ್ ರಾವುತ್.<p>ಇಂಡಿಯಾ ಮೈತ್ರಿಕೂಟದಲ್ಲಿ 30ರಷ್ಟು ಪಕ್ಷಗಳಿವೆ. ಈ ಪಕ್ಷಗಳ ನಡುವೆ ಸಂವಹನ ನಡೆಯಬೇಕಿದ್ದರೆ, ಜವಾಬ್ದಾರಿಯುತ ನಾಯಕರನ್ನು ನೇಮಕ ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.</p><p>ಈ ವಿಷಯವನ್ನು ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಉದ್ಧವ್ ಠಾಕ್ರೆ ಪದೇ ಪದೇ ಉಲ್ಲೇಖಿಸುತ್ತಿದ್ದರು. ಇತರ ಪಕ್ಷಗಳ ಹಿರಿಯ ನಾಯಕರೂ ಇದನ್ನೂ ಪ್ರಸ್ತಾಪಿಸಿದ್ದರು ಎಂದು ಹೇಳಿದ್ದಾರೆ.</p> .EVM ಅಕ್ರಮ ಆರೋಪ: ಮತಪತ್ರಗಳ ಮೂಲಕ ಮರುಚುನಾವಣೆಗೆ ಸಂಜಯ್ ರಾವುತ್ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಪಾಲುದಾರ ಪಕ್ಷಗಳ ನಡುವೆ ಮಾತುಕತೆ ನಡೆಯದೇ ಹೋದರೆ ಮೈತ್ರಿ ಸಫಲವಾಗುವುದಿಲ್ಲ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಹೇಳಿದ್ದಾರೆ.</p><p>ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ತಮ್ಮ ಪಕ್ಷವು ಏಕಾಂಗಿಯಾಗಿ ಎದುರಿಸಲಿದೆ ಎಂದು ಹೇಳಿದ ಬಳಿಕ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.</p>.ಸ್ಥಳೀಯಾಡಳಿತ ಚುನಾವಣೆಯಲ್ಲಿ ಶಿವಸೇನಾ (ಯುಬಿಟಿ) ಏಕಾಂಗಿ ಸ್ಪರ್ಧೆ: ಸಂಜಯ್ ರಾವುತ್.<p>ಮೈತ್ರಿ ಪಕ್ಷಗಳ ನಡುವೆ ಸಂವಹನ ನಡೆಯುತ್ತಿರಬೇಕಾದರೆ, ಜವಾಬ್ದಾರಿಯುತ ನಾಯಕರ ನೇಮಕ ಅಗತ್ಯ. ಇಂಡಿಯಾ ಬಣದ ಅತಿ ದೊಡ್ಡ ಪಕ್ಷವಾದ ಕಾಂಗ್ರೆಸ್ ಈ ಬಗ್ಗೆ ಜವಾಬ್ದಾರಿ ತೆಗೆದುಕೊಳ್ಳಬೇಕು’ ಎಂದು ಅವರು ಹೇಳಿದ್ದಾರೆ.</p><p>ಮೈತ್ರಿ ಪಕ್ಷಗಳು ಪರಸ್ಪರ ಎದುರಾಳಿಗಳಾಗಿ ಚುನಾವಣೆ ಸ್ಪರ್ಧಿಸುವುದು ತಪ್ಪಲ್ಲ ಎಂದ ಅವರು, ಯಾವ ಪಕ್ಷವೂ ವಿಶ್ವಾಸದ್ರೋಹ ಎಸಗಬಾರದು ಎಂದಿದ್ದಾರೆ.</p>.ವಾಜಪೇಯಿ ಭಾರತ ರಾಜಕಾರಣದ ‘ಎರಡನೇ ನೆಹರೂ’: ಶಿವಸೇನೆ ನಾಯಕ ಸಂಜಯ್ ರಾವುತ್ .<p>ದೇಶದ ರಾಜಕೀಯದಲ್ಲಿ ಮತ್ತಷ್ಟು ಉನ್ನತಿಗೇರುವುದು ಪ್ರತಿಯೊಂದು ಪಕ್ಷದ ಸಾಮೂಹಿಕ ಆಕಾಂಕ್ಷೆ. ಆದರೆ ಕಳೆದ ಕೆಲವು ದಿನಗಳಿಂದ, ನಮ್ಮ ಕೆಲವು ಮೈತ್ರಿ ಪಾಲುದಾರರು ಮಾತುಕತೆ ಮುಗಿದು ಹೋಗಿದೆ ಎನ್ನುವ ನಿಲುವು ತೆಗೆದುಕೊಂಡಂತಿದೆ. ಮಾತುಕತೆ ಇಲ್ಲದಿದ್ದರೆ, ಯಾವ ಮೈತ್ರಿಯೂ ಯಶಸ್ವಿಯಾಗಲಾಗದು ಎಂದು ಹೇಳಿದ್ದಾರೆ.</p><p>2019ರಲ್ಲಿ ಬಿಜೆಪಿ–ಶಿವಸೇನಾ ಮೈತ್ರಿಕೂಟ ಮುರಿದು ಬಿದ್ದಿದ್ದೇ ಮಾತುಕತೆ ಕೊರತೆಯಿಂದ ಎಂದು ಅವರು ಹೇಳಿದ್ದಾರೆ.</p>.ಶಿಂದೆ ಇಲ್ಲದೆಯೂ ‘ಪ್ರಮಾಣವಚನ’ಕ್ಕೆ ಬಿಜೆಪಿ ಸಿದ್ಧವಿತ್ತು: ಸಂಜಯ್ ರಾವುತ್.<p>ಇಂಡಿಯಾ ಮೈತ್ರಿಕೂಟದಲ್ಲಿ 30ರಷ್ಟು ಪಕ್ಷಗಳಿವೆ. ಈ ಪಕ್ಷಗಳ ನಡುವೆ ಸಂವಹನ ನಡೆಯಬೇಕಿದ್ದರೆ, ಜವಾಬ್ದಾರಿಯುತ ನಾಯಕರನ್ನು ನೇಮಕ ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.</p><p>ಈ ವಿಷಯವನ್ನು ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಉದ್ಧವ್ ಠಾಕ್ರೆ ಪದೇ ಪದೇ ಉಲ್ಲೇಖಿಸುತ್ತಿದ್ದರು. ಇತರ ಪಕ್ಷಗಳ ಹಿರಿಯ ನಾಯಕರೂ ಇದನ್ನೂ ಪ್ರಸ್ತಾಪಿಸಿದ್ದರು ಎಂದು ಹೇಳಿದ್ದಾರೆ.</p> .EVM ಅಕ್ರಮ ಆರೋಪ: ಮತಪತ್ರಗಳ ಮೂಲಕ ಮರುಚುನಾವಣೆಗೆ ಸಂಜಯ್ ರಾವುತ್ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>