ನವದೆಹಲಿ: ಪಶ್ಚಿಮ ಬಂಗಾಳದ ಶಾಂತಿನಿಕೇತನವನ್ನು ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ.
ವಿಶ್ವಸಂಸ್ಥೆ ಭಾನುವಾರ ‘ಎಕ್ಸ್’ ನಲ್ಲಿ ಈ ಘೋಷಣೆ ಮಾಡಿದೆ.
‘ಗುರುದೇವ ರವೀಂದ್ರನಾಥ ಟ್ಯಾಗೋರ್ ಅವರ ದೃಷ್ಟಿಕೋನ ಮತ್ತು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಸಾಕಾರರೂಪವಾದ ಶಾಂತಿನಿಕೇತನವನ್ನು ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿರುವುದು ಸಂತೋಷವಾಗಿದೆ. ಇದು ಭಾರತೀಯರಿಗೆ ಹೆಮ್ಮೆಯ ಕ್ಷಣ’ ಎಂದು ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.