ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BJPಗೆ ₹60 ಕೋಟಿ ಕೊಟ್ಟಿರುವ ಶರತ್ ರೆಡ್ಡಿ; ED ಕ್ರಮವಿಲ್ಲ ಯಾಕೆ: ಸಂಜಯ್ ಸಿಂಗ್

Published 20 ಏಪ್ರಿಲ್ 2024, 10:20 IST
Last Updated 20 ಏಪ್ರಿಲ್ 2024, 10:20 IST
ಅಕ್ಷರ ಗಾತ್ರ

ನವದೆಹಲಿ: ‌ದೆಹಲಿ ಅಬಕಾರಿ ನೀತಿ ಹಗರಣದ ಪ್ರಮುಖ ಆರೋಪಿಯಾದ ಶರತ್ ರೆಡ್ಡಿಯಿಂದ ಬಿಜೆಪಿ ₹60 ಕೋಟಿ ಪಡೆದಿದ್ದರೂ ಜಾರಿ ನಿರ್ದೇಶನಾಲಯ (ಇ.ಡಿ) ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಬಕಾರಿ ನೀತಿ ಹಗರಣದಲ್ಲಿ ನನ್ನನ್ನು ಸೇರಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಅವರನ್ನು ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಬಂಧಿಸಲಾಗಿದೆ’ ಎಂದು ದೂರಿದ್ದಾರೆ.

‘ಇ.ಡಿ ತನ್ನ ಚಾರ್ಜ್‌ಶೀಟ್‌ನಲ್ಲಿ ಅಬಕಾರಿ ನೀತಿ ಹಗರಣದ ಕಿಂಗ್‌ಪಿನ್ ಆಗಿರುವ ಶರತ್ ರೆಡ್ಡಿ ಅವರು ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿಗೆ ₹60 ಕೋಟಿ ನೀಡಿದ್ದಾರೆ. ಆದರೆ, ಈ ವಿಷಯದಲ್ಲಿ ಇ.ಡಿ ಅಧಿಕಾರಿಗಳು ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲ’ ಎಂದು ಸಿಂಗ್ ಟೀಕಿಸಿದ್ದಾರೆ.

ಶರತ್ ರೆಡ್ಡಿ ಅವರು 2022ರ ನವೆಂಬರ್ 15ರಂದು ಬಿಜೆಪಿಗೆ ₹5 ಕೋಟಿ ದೇಣಿಗೆ ನೀಡಿದ್ದರು. ಬಳಿಕ 2023ರ ಮೇ 8ರಂದು ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿಗೆ ₹50 ಕೋಟಿ ನೀಡಿದ್ದಾರೆ ಎಂದು ಸಿಂಗ್ ಆರೋಪಿಸಿದ್ದಾರೆ.

ಮಾರ್ಚ್ 21ರಂದು ಚುನಾವಣಾ ಬಾಂಡ್‌ಗಳ ವಿವರ ಬಹಿರಂಗವಾದ ಬೆನ್ನಲ್ಲೇ ರೆಡ್ಡಿಯಿಂದ ಬಿಜೆಪಿಗೆ ಹಣ ಸಂದಾಯವಾಗಿರುವ ಸಂಗತಿ ಗೊತ್ತಾಗಿದೆ. ಇದರ ಬೆನ್ನಲ್ಲೇ ಕೇಜ್ರಿವಾಲ್ ಅವರ ನಿವಾಸದ ಮೇಲೆ ಇ.ಡಿ ದಾಳಿ ನಡೆಸಿದೆ ಎಂದು ಸಿಂಗ್ ಗುಡುಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT