ಕೆವಾಡಿಯಾ, ಗುಜರಾಜ್: ಭಾರತದ ಏಕತೆ ಮತ್ತು ಸಮಗ್ರತೆಯನ್ನು ಯಾರೊಬ್ಬರೂ ನಾಶಪಡಿಸಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ಸರ್ದಾರ್ ವಲ್ಲಭಭಾಯಿ ಪಟೇಲರು ಜಗತ್ತಿಗೆ ನೀಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.
ಪಟೇಲ್ ಅವರ ಜನ್ಮದಿನದ ಹಿನ್ನೆಲೆ ಗುಜರಾತ್ನ ಕೆವಾಡಿಯಾ ಪ್ರದೇಶದಲ್ಲಿ ನಿರ್ಮಿಸಿರುವ ಅವರ 182 ಮೀಟರ್ ಎತ್ತರದ ಏಕಶಿಲಾ ಪ್ರತಿಮೆ ಸ್ಥಳಕ್ಕೆ ಶಾ ಭೇಟಿ ನೀಡಿದರು.
ಇದು ಇಂದು ಯಾವುದೋ ಒಂದು ಸ್ಥಳವಾಗಿಲ್ಲ. ಇದು ರಾಷ್ಟ್ರೀಯ ಏಕತೆ ಮತ್ತು ದೇಶಭಕ್ತಿಯ ದೇಗುಲವಾಗಿದೆ ಎಂದು ಇದೇ ವೇಳೆ ಹೇಳಿದರು.
ಪಟೇಲರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಗುತ್ತದೆ.
ರಾಷ್ಟ್ರೀಯ ಏಕತಾ ದಿನದ ಹಿನ್ನೆಲೆ ವಿಡಿಯೊ ಸಂದೇಶವೊಂದನ್ನು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಸರ್ದಾರ್ ಪಟೇಲ್ ಅವರ ಸ್ಪೂರ್ತಿಯಿಂದ ಭಾರತವು ಇಂದು ತನ್ನನ್ನು ತಾನು ರಕ್ಷಿಸುಕೊಳ್ಳುವಲ್ಲಿ ಸ್ವಾವಲಂಬಿಯಾಗುತ್ತಿದೆ ಎಂದು ಹೇಳಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.