ನವದೆಹಲಿ: ಇಂದು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 148ನೇ ಜನ್ಮದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ನಮನ ಸಲ್ಲಿಸಿದ್ದಾರೆ. ದೇಶದಾದ್ಯಂತ ಇಂದು ರಾಷ್ಟ್ರೀಯ ಏಕತಾ ದಿನವಾಗಿ ಆಚರಿಸಲಾಗುತ್ತದೆ.
ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ಪಟೇಲರ ದಾರ್ಶನಿಕ ರಾಜನೀತಿ ಮತ್ತು ಅಸಾಧಾರಣ ಸಮರ್ಪಣೆಯನ್ನು ನೆನಪಿಸಿಕೊಳ್ಳುತ್ತಾ ಅವರ ಅದಮ್ಯ ಮನೋಭಾವ, ದೂರದೃಷ್ಟಿಯ ರಾಜನೀತಿ ಮತ್ತು ಅವರು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸಿದ ಅಸಾಧಾರಣ ಸಮರ್ಪಣೆಯನ್ನು ನಾವು ನೆನಪಿಸಿಕೊಳ್ಳುತ್ತೇವೆ. ರಾಷ್ಟ್ರೀಯ ಏಕೀಕರಣಕ್ಕೆ ಅವರ ಬದ್ಧತೆ ನಮಗೆ ಮಾರ್ಗದರ್ಶನ ನೀಡುತ್ತಲೇ ಇದೆ. ಅವರ ಸೇವೆಗೆ ನಾವು ಸದಾ ಋಣಿ ಎಂದು ಬರೆದುಕೊಂಡಿದ್ದಾರೆ.
ಗುಜರಾತ್ನ ಕೆವಾಡಿಯಾ ಬಳಿಯ ಏಕತಾ ಪ್ರತಿಮೆ ಬಳಿ ತೆರಳಿ ಪ್ರಧಾನಿ ಮೋದಿ ಪುಷ್ಪ ನಮನ ಸಲ್ಲಿಸಿದರು.
On the Jayanti of Sardar Patel, we remember his indomitable spirit, visionary statesmanship and the extraordinary dedication with which he shaped the destiny of our nation. His commitment to national integration continues to guide us. We are forever indebted to his service.
— Narendra Modi (@narendramodi) October 31, 2023
VIDEO | PM Modi pays floral tributes to Sardar Vallabhbhai Patel on his birth anniversary at Statue of Unity near Kevadia in Gujarat. pic.twitter.com/uoK6SGnbgm
— Press Trust of India (@PTI_News) October 31, 2023
'ಉಕ್ಕಿನ ಮನುಷ್ಯ' ಮತ್ತು ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದಂದು ಅವರಿಗೆ ನಮನಗಳು.ರಾಷ್ಟ್ರ ನಿರ್ಮಾಣದಲ್ಲಿ ಪಟೇಲ್ ಅವರ ಅಪಾರ ಕೊಡುಗೆಗಾಗಿ ನಾವು ಯಾವಾಗಲೂ ಅವರಿಗೆ ಋಣಿಯಾಗಿರುತ್ತೇವೆ ಎಂದು ಕಾಂಗ್ರೆಸ್ ಎಕ್ಸ್ನಲ್ಲಿ ಹಂಚಿಕೊಂಡಿದೆ.
'लौह पुरुष' व भारत रत्न सरदार वल्लभ भाई पटेल जी की जयंती पर उन्हें कोटि-कोटि नमन।
— Congress (@INCIndia) October 31, 2023
राष्ट्र निर्माण में पटेल जी के असीम योगदान के लिए हम सदैव उनके ऋणी रहेंगे। pic.twitter.com/Ra5BohUbQS
1875 ರಲ್ಲಿ ಗುಜರಾತ್ನಲ್ಲಿ ಜನಿಸಿದ ಪಟೇಲ್ ಅವರು ವಕೀಲರಾಗಿದ್ದರು. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಪ್ರಮುಖ ಕಾಂಗ್ರೆಸ್ ನಾಯಕರಾಗಿ ಮತ್ತು ಮಹಾತ್ಮ ಗಾಂಧಿಯವರ ಸಹವರ್ತಿಯಾಗಿ ಹೊರಹೊಮ್ಮಿದರು.
ಪಟೇಲ್ ಅವರು ಸ್ವತಂತ್ರ ಭಾರತದ ಮೊದಲ ಗೃಹ ಮಂತ್ರಿಯಾಗಿದ್ದರು. ನೂರಾರು ರಾಜಪ್ರಭುತ್ವದ ರಾಜ್ಯಗಳನ್ನು ಭಾರತದ ಒಕ್ಕೂಟಕ್ಕೆ ಒಂದುಗೂಡಿಸಿದ ಕೀರ್ತಿಗೆ ಅವರು ಪಾತ್ರರಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.